ಚೆನ್ನೈ, ಫೆಬ್ರವರಿ 09: ಟೆಸ್ಟ್ ಇತಿಹಾಸದಲ್ಲೇ ಉತ್ತಮ ಸಾಧನೆ ಬರೆದ ಕರ್ನಾಟಕದ ಆಟಗಾರ ಕರುಣ್ ನಾಯರ್ ಅವರ ಅಜೇಯ 303ರನ್ ಅವರನ್ನು ತಂಡದಲ್ಲಿ ಉಳಿದುಕೊಳ್ಳಲು ಸಾಧ್ಯವಾಗದಿದ್ದರೂ, ಬೇಡದ ದಾಖಲೆಯೊಂದನ್ನು ಬರೆದಿದ್ದಾರೆ.
ಹೈದರಾಬಾದಿನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಗುರುವಾರ(ಫೆಬ್ರವರಿ 09) ಆರಂಭವಾದ ಪಂದ್ಯದಲ್ಲಿ ತ್ರಿಶತಕ ವೀರ ಕರುಣ್ ಬದಲಿಗೆ ಅಜಿಂಕ್ಯ ರಹಾನೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಕರ್ನಾಟಕದಲ್ಲಿ ಹೆಚ್ಚಿನ ಕೂಗೆದ್ದಿಲ್ಲ.
ಡಿಸೆಂಬರ್ 19, 2016ರಂದು ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕರುಣ್ 303 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು. ಸೆಹ್ವಾಗ್ ನಂತರ ತ್ರಿಶತಕ ಬಾರಿಸಿದ ಸಾಧನೆ ಮಾಡಿದ್ದರು.