ಬೆಂಗಳೂರು, ಏಪ್ರಿಲ್ 19: ಹಿರಿಯ ಪತ್ರಕರ್ತ, ಖ್ಯಾತ ಪರಿಸರ, ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏಪ್ರಿಲ್ 22 ರಂದು ಹಮ್ಮಿಕೊಂಡಿರುವ "ಮನೆಯಂಗಳದಲ್ಲಿ ಮಾತುಕತೆ" ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಏಪ್ರಿಲ್ 22 ರಂದು ಶನಿವಾರ ಸಂಜೆ 4.00 ಗಂಟೆಗೆ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕಮವು ಜೆ. ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ.