ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಜಯ್ ಹಜಾರೆ ಟ್ರೋಫಿ: ಫೈನಲ್, ಸೆಮಿಫೈನಲ್ ಪಂದ್ಯ ಮುಂದೂಡಿಕೆ

ಆಟಗಾರರು ತಂಗಿದ್ದ ಹೋಟೆಲ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸುವುದರಿಂದ ವಿಜಯ್ ಹಜಾರೆ ಕ್ರಿಕೆಟ್ ಟ್ರೋಫಿಯ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳನ್ನು ಬಿಸಿಸಿಐ ಮುಂದೂಡಿದೆ.

ನವದೆಹಲಿ, ಮಾರ್ಚ್. 17 : ಜಾರ್ಖಂಡ್ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸಹ ಆಟಗಾರರು ತಂಗಿದ್ದ ದೆಹಲಿಯ ಹೊಟೇಲ್ ವೊಂದರಲ್ಲಿ ಶುಕ್ರವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದರಿಂದ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಭಾರತ ಕ್ರಿಕೆಟ್ ಮಂಡಳಿ (ಬಿಸಿಸಿ) ಮುಂದೂಡಿದೆ.

ಮಾರ್ಚ್ 17ರಂದು ಬಂಗಾಳ ಮತ್ತು ಜಾರ್ಖಾಂಡ್ ನಡುವಣ ಸೆಮಿಫೈನಲ್ ಪಂದ್ಯ ನಡೆಯಬೇಕಿದ್ದರಿಂದ ಉಭಯ ತಂಡಗಳು ಹೋಟೆಲ್ ನಲ್ಲಿ ತಂಗಿದ್ದರು. ಆದರೆ, ಶುಕ್ರವಾರ ಬೆಳಗ್ಗೆ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಹಿನ್ನಲೆಯಲ್ಲಿ ಪಂದ್ಯವನ್ನು ಮಾರ್ಚ್ 18 ಫಿರೋಷಾ ಕೊಟ್ಲಾ ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿ ತಿಳಿಸಿದೆ.[ಧೋನಿ ತಂಗಿದ್ದ ದೆಹಲಿ ಹೊಟೇಲ್ ನಲ್ಲಿ ಬೆಂಕಿ ಅನಾಹುತ]

Vijay Hazare Trophy semi-final and final rescheduled, after fire at Jharkhand team's hotel

ಮಾರ್ಚ್ 19ರಂದು ನಡೆಬೇಕಿದ್ದ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯವನ್ನು ಮಾರ್ಚ್ 20 ಸೋಮವಾರದಂದು ದೆಹಲಿಯ ಫಿರೋಷಾ ಕೊಟ್ಲಾ ಮೈದಾನದಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.

ಈ ಅವಘಡದಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಪ್ರಸ್ತುತ ಆಟಗಾರರನ್ನು ಬೇರೆ ಹೋಟೆಲ್ ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Story first published: Wednesday, January 3, 2018, 10:04 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X