ಬೆಂಗಳೂರು, ಮೇ 31: ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅವರು ಈಗ ಕ್ರಿಕೆಟ್ ನ ಎಲ್ಲಾ ಮಾದರಿಯಲ್ಲಿ ನಾಯಕರಾಗಲು ಕಾಲ ಕೂಡಿ ಬಂದಿದೆ. ಧೋನಿ ಅವರು ಕೊಹ್ಲಿ ನಾಯಕತ್ವದ ಅಡಿಯಲ್ಲಿ ಆಟಗಾರನಾಗಿ ಆಡಿದರೆ ತಪ್ಪೇನಿಲ್ಲ ಎಂದು ಮಾಜಿ ಕ್ರಿಕೆಟರ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.[2016ರಲ್ಲಿ ವಿರಾಟ್ ಕೊಹ್ಲಿ ಸಾಧನೆ, ದಾಖಲೆಗಳು]
ನಾನೇನಾದರು ಆಯ್ಕೆ ಸಮಿತಿಯ ಮುಖ್ಯಸ್ಥನಾದರೆ ತಂಡದ ಭವಿಷ್ಯದ ದೃಷ್ಟಿಯಿಂದ ತೀರ್ಮಾನ ಕೈಗೊಳ್ಳುತ್ತೇನೆ. 2019ರ ಏಕದಿನ ವಿಶ್ವಕಪ್ಗೆ ಭದ್ರವಾದ ತಂಡ ಕಟ್ಟುವ ಅಗತ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ಈಗಿನಿಂದಲೇ ತಂಡದಲ್ಲಿ ಬದಲಾವಣೆ ಅಗತ್ಯವಾಗಿದ್ದು, ವಿರಾಟ್ಗೆ ಮೂರು ಮಾದರಿಗಳಲ್ಲಿ ನಾಯಕನ ಜವಾಬ್ದಾರಿ ನೀಡುವುದು ಸೂಕ್ತ ಎಂದು ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ರವಿಶಾಸ್ತ್ರಿ ಹೇಳಿದ್ದಾರೆ.[ಐಪಿಎಲ್ 9: ಯಾರಿಗೆ ಯಾವ ಪ್ರಶಸ್ತಿ, ಕಿರೀಟ, ಪುರಸ್ಕಾರ]