ಬೆಂಗಳೂರು, ಮಾರ್ಚ್ 29: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟಿ20 ಪಂದ್ಯದಲ್ಲಿ ಗಾಯಗೊಂಡ ಯುವರಾಜ್ ಸಿಂಗ್ ಬದಲಿಗೆ ಕರ್ನಾಟಕದ ಮನೀಶ್ ಪಾಂಡೆಗೆ ಸ್ಥಾನ ಕಲ್ಪಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ಆದರೆ, ಯುವರಾಜ್ ಸಿಂಗ್ ಅವರು ಪಂದ್ಯದ ವೇಳೆಗೆ ಗುಣಮುಖರಾದರೆ, ಮನೀಶ್ ಅವರಿಗೆ ಆಡುವ ಅವಕಾಶ ಸಿಗುವುದಿಲ್ಲ.
ವಿಶ್ವ ಟಿ20: ತಂಡಗಳು | ವೇಳಾಪಟ್ಟಿ | ಗ್ಯಾಲರಿ | ಟೂರ್ನಿಗೆ ಫುಲ್ ಗೈಡ್
34 ವರ್ಷದ ಎಡಗೈ ಆಲ್ ರೌಂಡರ್ ಯುವರಾಜ್ ಸಿಂಗ್ ಅವರು ಭಾನುವಾರ ನಡೆದ ಪಂದ್ಯದ ವೇಳೆಗೆ ಗಾಯಗೊಂಡಿದ್ದು, ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. [ವಿಶ್ವ ಟಿ20: ಸೆಮಿಫೈನಲ್ ಪಂದ್ಯ ಎಲ್ಲಿ? ಫುಲ್ ವೇಳಾಪಟ್ಟಿ]
ಅದಲ್ಲದೆ, ಇಲ್ಲಿ ತನಕ ಆಡುವ XI ನಲ್ಲಿ ಬದಲಾವಣೆ ಮಾಡದ ಧೋನಿ ಅವರು ಮನೀಶ್ ಗೆ ಸ್ಥಾನ ಕಲ್ಪಿಸುವುದು ಕಷ್ಟ. ಆಸ್ಟ್ರೇಲಿಯಾ ಪ್ರವಾಸದಲ್ಲೂ ಇದೇ ರೀತಿ ಆಯಿತು.
ಆದರೆ, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಮನೀಶ್ ಪಾಂಡೆ ಅವರು ಶತಕ ಸಿಡಿಸಿ ಭಾರತದ ಮಾನ ಕಾಪಾಡಿದ್ದರು. ಸಿಡ್ನಿಯಲ್ಲಿ ಶತಕ ಬಾರಿಸುವುದಕ್ಕೂ ಮುನ್ನ ಪಾಂಡೆ ಅವರು ಜುಲೈ 2015ರಲ್ಲಿ ಜಿಂಬಾಬ್ವೆ ವಿರುದ್ಧ 2 ಟಿ20 ಪಂದ್ಯವನ್ನಾಡಿದ್ದರು.