ತುಳುನಾಡಿನ ಸಂಭ್ರಮದ 'ಢಕ್ಕೆಬಲಿ' ನಡಾವಳಿ

ಸನ್ನಿಧಾನದಲ್ಲಿ ಬ್ರಹ್ಮಸ್ವರೂಪಿಯಾಗಿರುವ ಖಡ್ಗೇಶ್ವರೀಗೆ ಮೊದಲ ಆದ್ಯತೆ. ಇಲ್ಲಿ ನಾಗ, ರಕ್ತೇಶ್ವರಿ, ನಂದಿಗೋಣ, ಕ್ಷೇತ್ರಪಾಲರ ಸಾನಿಧ್ಯವೂ ಇದೆ. ದಟ್ಟಾರಣ್ಯದಲ್ಲಿರುವ ಈ ಸಾನಿಧ್ಯದಲ್ಲಿ ರಾತ್ರಿಯ ಕಾಲದಲ್ಲಿ ಢಕ್ಕೆಬಲಿ ಸೇವೆ ಆರಂಭವಾಗುತ್ತದೆ. ಇಲ್ಲಿ ಮರಳೇ ಆಸನ. ಇಲ್ಲಿನ ಬೀಡಿನ ಅರಸರೆಂದು ಕರೆಯಲ್ಪಡುವ ವಂಶಸ್ಥರಿಗೆ ಚಾಪೆ, ಉಡುಪಿ ಅಷ್ಠಮಠಾಧೀಶರಿಗೆ ಚಪ್ಪಡಿ ಕಲ್ಲಿನ ವ್ಯವಸ್ಥೆ ಮಾತ್ರ ಇರುತ್ತದೆ. ಕರ್ಪೂರ ಮತ್ತು ದೊಂದಿ ದೀಪಗಳು ರಾತ್ರಿಯ ವೇಳೆ ಈ ಪ್ರದೇಶವನ್ನು ಬೆಳಗುವ ಪರಿಕರ.
ಸಂಜೆಯ ಬಳಿಕ ದೇವಾಲಯವು ಹೂ ಮತ್ತು ಹಿಂಗಾರಗಳಿಂದ ಅಲಂಕೃತಗೊಳ್ಳುತ್ತದೆ. ಅಲಂಕಾರದ ಬಳಿಕ ಇಲ್ಲಿನ ದರ್ಶನ ಪಾತ್ರಿಗಳು ಮಡಿಯನ್ನುಟ್ಟು ಬಂದ ನಂತರ ಸನ್ನಿಧಾನದಲ್ಲಿ ಪ್ರಸನ್ನ ಪೂಜೆಗಳು ನಡೆಯುತ್ತದೆ. ಆ ನಂತರ ವೈದ್ಯ (ನಾಗಪಾತ್ರಿಯನ್ನು ಆಡಿಸುವವರು) ಕುಟುಂಬದವರು ಬಾರಿಸುವ ಕಂಚಿನ ಢಕ್ಕೆಯ ನಿನಾದಕ್ಕೆ ನಾಗಪಾತ್ರಿಗಳಲ್ಲಿ ಆವೇಶ ಮೈದೆಳೆದು ಬರುತ್ತದೆ. ಮೊದಲಾರ್ಧದಲ್ಲಿ ರಾತ್ರಿ ಪ್ರಸಾದ ತಂಬಿಲ ವಿತರಣೆಯಾದ ನಂತರ ನಾಗಪಾತ್ರಿಗಳು ಮತ್ತು ವೈದ್ಯರು ವಿಶ್ರಾಂತಿ ಪಡೆಯುತ್ತಾರೆ.
ವಿಶ್ರಾಂತಿಯ ನಂತರ ಪಾತ್ರಿಗಳು ಮತ್ತು ವೈದ್ಯರು ಮತ್ತೆ ನಾಗಕನ್ನಿಕೆಯಾಗಿ ಅಲಂಕರಿಸಿಕೊಂಡು ಢಕ್ಕೆಬಲಿ ಮಂಡಲ, ನಾಗಮಂಡಲಗಳನ್ನು ಸುತ್ತುವರಿದು ಅಲ್ಲಿ ಢಕ್ಕೆಬಲಿಯ ಪ್ರಧಾನ ಆಚರಣೆಗಳು, ಪೂಜೆಗಳು ಬೆಳಗಿನ ಜಾವದವರೆಗೆ ನಡೆಯುತ್ತವೆ. ಢಕ್ಕೆಬಲಿ ಸೇವೆಗಳಲ್ಲದೆ ಪಂಚಾಮೃತ, ಹಗಲು ತಂಬಿಲ, ರಾತ್ರಿ ತಂಬಿಲ ಸೇವೆ ನಡೆಯುತ್ತದೆ. ಈ ನಡಾವಳಿಗೆ ಶತಮಾನಗಳ ಇತಿಹಾಸವಿದೆ.
ಇದೇ ಜನವರಿ 18, 2011ರಿಂದ ಢಕ್ಕೆಬಲಿ ಮಹೋತ್ಸವ ಆರಂಭವಾಗಿದೆ. ಮಾರ್ಚ್ 12, 2011ರ ಮಂಡಲ ವಿಸರ್ಜನೆಯೊಂದಿಗೆ ಈ ವಿಜೃಂಭಣೆಯ ನಡಾವಳಿ ಮುಕ್ತಾಯಗೊಳ್ಳುತ್ತದೆ. ಸರ್ವಧರ್ಮ ಸಾಮರಸ್ಯದ ಈ ನಡಾವಳಿಗೆ ಹರಕೆಯ ರೂಪದಲ್ಲಿ ಹಿಂಗಾರದ ಹಾಳೆಗಳನ್ನು ಭಕ್ತರು ತಂದು ತಮ್ಮ ಮನದ ದುಗುಡಗಳಿಗೆ ಪರಿಹಾರ ಕೊಂಡು ಕೊಳ್ಳುತ್ತಾರೆನ್ನುವುದು ಕ್ಷೇತ್ರದ ನಂಬಿಕೆ. [ದೇಗುಲ ದರ್ಶನ]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications