ನೋಡ ಬನ್ನಿ ಮುಡುಕುತೊರೆ ಜಾತ್ರೆ...

ವಿಶಿಷ್ಟ ಜಾತ್ರೆ: ಇತರೆ ಕಡೆಗಳಲ್ಲಿ ನಡೆಯುವ ಜಾತ್ರೆಗೆ ಹೋಲಿಸಿದರೆ ಮುಡುಕುತೊರೆಯಲ್ಲಿ ನಡೆಯುವ ಜಾತ್ರೆ ಒಂದೆರಡು ದಿನಕ್ಕೆ ಸೀಮಿತವಾಗಿರದೆ ಇಲ್ಲಿ ಬರೋಬ್ಬರಿ ಹದಿನೇಳು ದಿನ ನಡೆಯುತ್ತದೆ. ಈಗಾಗಲೇ ಜಾತ್ರೆ (ಫೆ.5ರಿಂದ) ಆರಂಭವಾಗಿದ್ದು, ಫೆಬ್ರವರಿ 21ರವರೆಗೆ ನಡೆಯಲಿದೆ. ಫೆ.12ರಂದು ಮಹಾರಥೋತ್ಸವ ನಡೆಯಲಿದೆ.
ಬಳಿಕ ಫೆ.13 ರಿಂದ 21ರವರೆಗೆ ಕ್ರಮವಾಗಿ ಶಯನೋತ್ಸವ, ಪಲ್ಲಕ್ಕಿ ಉತ್ಸವ, ತೆಪ್ಪೋತ್ಸವ, ಕೈಲಾಸ ವಾಹನೋತ್ಸವ, ಮಂಟಪೋತ್ಸವಗಳು, ಗಿರಿ ಪ್ರದಕ್ಷಿಣೆ, ಪರ್ವತ ಪರಿಷೆ ಕಾರ್ಯಕ್ರಮಗಳು ನಡೆಯಲಿವೆಯಲ್ಲದೆ, ಮಹಾಭಿಷೇಕದೊಂದಿಗೆ ಜಾತ್ರೆಗೆ ತೆರೆಬೀಳಲಿದೆ.
ವಿಶಾಲವಾಗಿ ಹರಿಯುವ ಕಾವೇರಿ ನದಿ... ಸುತ್ತ ಮುತ್ತ ಹಸಿರಿನಿಂದ ಕಂಗೊಳಿಸುವ ನಿಸರ್ಗ... ಬೆಟ್ಟದ ಮೇಲೆ ಭವ್ಯ ಮಲ್ಲಿಕಾರ್ಜುನ ಸ್ವಾಮಿ ದೇಗುಲ... ಮುಡುಕುತೊರೆಯ ಸೌಂದರ್ಯ ವರ್ಣಿಸಲಾರದ್ದು, ಹಾಗಾಗಿ ಆಸ್ತಿಕ, ನಾಸ್ತಿಕ ಎನ್ನದೆ ಎಲ್ಲರೂ ಈ ತಾಣಕ್ಕೆ ಆಗಮಿಸಿ, ಇಲ್ಲಿನ ನಿಸರ್ಗ ಸಿರಿಯನ್ನು ಮನದಣಿಯೆ ಸವಿಯುತ್ತಾರೆ.
ಮುಡುಕುತೊರೆ ಎಲ್ಲಿದೆ?: ಈ ಕ್ಷೇತ್ರವು ಮೈಸೂರು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲೊಂದಾದ ತಿ.ನರಸೀಪುರದಿಂದ 19 ಕಿ.ಮೀ ದೂರದಲ್ಲಿದೆ. ಕಾವೇರಿ ನದಿ ಪಶ್ಚಿಮದಿಂದ ಉತ್ತರ ದಿಕ್ಕಿನತ್ತ ಹರಿದು, ಪೂರ್ವಕ್ಕೆ ಮುರಿದು ದಕ್ಷಿಣಕ್ಕೆ ಪ್ರವೇಶಿಸಿದ್ದರಿಂದ ಬಹುಶಃ ಮುಡುಕುತೊರೆ ಎಂಬ ಹೆಸರು ಬಂದಿರಬಹುದೆಂದು ಹೇಳಲಾಗುತ್ತಿದೆ. ಇನ್ನು ಇಲ್ಲಿನ ಸೋಮಗಿರಿ ಬೆಟ್ಟದ ಮೇಲಿನ ಐತಿಹಾಸಿಕ ಮಲ್ಲಿಕಾರ್ಜುನ ದೇಗುಲದ ಆದಿದೈವ ಮಲ್ಲಿಕಾರ್ಜುನ ಲಿಂಗವೂ ಕೂಡ ತಲಕಾಡು ಪಂಚಲಿಂಗದೊಂದಿಗೆ ಸೇರಿರುವುದು ಇಲ್ಲಿನ ಮತ್ತೊಂದು ವಿಶೇಷತೆ.
ಮಲ್ಲಿಕಾರ್ಜುನ ದೇಗುಲ: ಮಲ್ಲಿಕಾರ್ಜುನ ದೇಗುಲ ನೆಲೆ ನಿಂತ ಬೆಟ್ಟವು ಸುಮಾರು ೩೦೦ ಅಡಿಯಷ್ಟು ಎತ್ತರದಲ್ಲಿದ್ದು, ಈ ಬೆಟ್ವನ್ನೇರಲು 101 ಮೆಟ್ಟಿಲುಗಳನ್ನು ನಿರ್ಮಿಸಲಾಗಿದ್ದು, ಈ ಮೆಟ್ಟಿಲುಗಳ ಮೇಲೆ ದಾನಿಗಳ ಹೆಸರು ಹಾಗೂ ಸೂಕ್ತಿಗಳನ್ನು ಬರೆದಿರುವುದು ಕಂಡುಬರುತ್ತದೆ. ದೇವಾಲಯವು ಗಂಗರ ಕಾಲದ ರಚನೆಯನ್ನು ಹೊಂದಿದ್ದು, ಪುಟ್ಟದಾಗಿ ನಿರ್ಮಾಣಗೊಂಡ ದೇಗುಲ ಬಳಿಕ ವಿಸ್ತರಿಸುತ್ತಾ ಹೋಗಿರಬಹುದೆಂದು ಹೇಳಲಾಗುತ್ತದೆ. ಇದು ಪಶ್ಚಿಮಾಭಿಮುಖವಾಗಿದ್ದು, ಗರ್ಭಗೃಹ, ಶುಕನಾಸಿ, ಅಂತರಾಳ, ನವರಂಗ ಮತ್ತು ದ್ವಾರಮಂಟಪಗಳನ್ನು ಹೊಂದಿದೆ. ನವರಂಗದಲ್ಲಿ ವರ್ತುಲಾಕೃತಿಯ ಸ್ತಂಭಗಳನ್ನು ನಾವು ಕಾಣಬಹುದು.
ಈ ಸ್ತಂಭಗಳಲ್ಲಿ ಗಂಗಶೈಲಿಯನ್ನು ಹೋಲುವಂತಹ ರಾಮ ಲಕ್ಷ್ಮಣ ಹನುಮಂತನ ಚಿತ್ರಗಳು ಕಂಡು ಬರುತ್ತವೆ. ಪಶ್ಚಿಮ ಮತ್ತು ದಕ್ಷಿಣ ದಿಕ್ಕುಗಳಲ್ಲಿ ಬಾಗಿಲುಗಳಿದ್ದು, ನವರಂಗದ ಅಗ್ನೇಯ ಭಾಗದಲ್ಲಿ ಎರಡು ಶಿವಲಿಂಗವಿದ್ದರೆ, ಉತ್ತರಭಾಗದಲ್ಲಿ ಕುಮಾರಸ್ವಾಮಿಯ ಉತ್ಸವಮೂರ್ತಿ, ನಟರಾಜ, ವಿಘ್ನೇಶ್ವರ, ಶಿವಕಾಮೇಶ್ವರಿ ಅಮ್ಮನವರ ವಿಗ್ರಹಗಳಿವೆ. ಅಲ್ಲದೆ ಶುಕನಾಸಿಯಲ್ಲಿ ವೃಷಭ ಮೂರ್ತಿಯಿದೆ. ದೇಗುಲದ ಗರ್ಭಗುಡಿಯ ಮೇಲೆ ಕಲಶವಿರುವ ವಿಮಾನ, ಒಳಗೆ ಒಂದಡಿ ಚದರಳತೆಯ ಪೀಠದ ಮೇಲೆ ಐದು ಅಂಗುಲ ಪಾದಾಂಕಿತವಿರುವ ಮಲ್ಲಿಕಾರ್ಜುನನ ಶೋಭಾಯಮಾನ ಲಿಂಗವನ್ನು ನಾವು ಕಾಣಬಹುದು.
ಭ್ರಮರಾಂಬ ದೇಗುಲ: ಇನ್ನು ಮಲ್ಲಿಕಾರ್ಜುನ ದೇಗುಲದ ಬಳಿಯೇ ಪತ್ನಿ ಭ್ರಮರಾಂಬೆಯ ದೇವಾಲಯವಿದ್ದು, ವಿಜಯನಗರ ವಾಸ್ತುಶೈಲಿಯನ್ನು ದೇವಾಲಯ ಗರ್ಭಗೃಹ, ಶುಕನಾಸಿ, ನವರಂಗ, ಮುಖಮಂಟಪವನ್ನು ಹೊಂದಿದೆ. ಗರ್ಭಗುಡಿಯ ಸಿಂಹ ಪೀಠದ ಮೇಲೆ ಐದಡಿ ಎತ್ತರದ ಭ್ರಮರಾಂಬ ವಿಗ್ರಹವಿದೆ. ಈ ಭ್ರಮರಾಂಬ ವಿಗ್ರಹವು ಚತುರ್ಭುಜವನ್ನು ಹೊಂದಿದ್ದು, ಎರಡು ಕೈಗಳು ವರದ ಮುದ್ರೆ ಕಮಲ ಕುಮುದ ಹಸ್ತಗಳಿಂದ ಕೂಡಿದೆ. ಅಲ್ಲದೆ, ಕಮಲಹಸ್ತ, ಅಭಯಹಸ್ತ, ಕರ್ಣಪತ್ರ, ಕಿರೀಟ, ಗೋರಂಭ, ಪಾದ, ಕಮಲಪೀಠ, ಸಿಂಹಪೀಠ, ಪ್ರಭಾವಳಿ, ಶ್ರೀಚಕ್ರ ಮೊದಲಾದ ಆಭರಣಗಳಿಂದ ದೇವಿ ಸಾಲಂಕೃತಳಾಗಿ ಶೋಭಿಸುತ್ತಿದ್ದಾಳೆ. ಈ ದೇವಾಲಯವೂ ವಿಮಾನವನ್ನು ಹೊಂದಿದೆ.
ದೇಗುಲದ ಹೊರಭಾಗದ ಗೋಪುರ ಮೂರನೆಯ ಕೃಷ್ಣರಾಜ ಒಡೆಯರ ಕಾಲದಲ್ಲಿ ರೂಪುತಳೆದಿದ್ದು, ಗೋಪುರ ದ್ವಾರದ ಎರಡೂ ಬದಿಯಲ್ಲಿ ಇಟ್ಟಿಗೆ ಮತ್ತು ಗಾರೆಯಿಂದ ರಚಿಸಿದ ಎರಡು ಬಸವನ ವಿಗ್ರಹಗಳಿವೆ. ಗೋಪುರದ ಮೇಲೆ ಕಲಶವಿದೆ. ಪ್ರವೇಶ ದ್ವಾರದ ಬಳಿ ಸುಮಾರು ನಲವತ್ತು ಅಡಿ ಎತ್ತರದ ದೀಪಸ್ತಂಭವಿದ್ದು, ದೇಗುಲದ ವಾಯುವ್ಯ ಮೂಲೆಯಲ್ಲಿ ಚಿತ್ರಮಂಟಪವಿದೆ.
ಈ ಮಂಟಪದ ಮುಂಭಾಗದಲ್ಲಿ ಪಾಕಶಾಲೆ, ಯಾಗಶಾಲೆ ಅಡುಗೆ ಮನೆಗಳಿವೆ. ಇನ್ನು ಈಶಾನ್ಯ ಭಾಗದಲ್ಲಿ ಗಣಪತಿ ಮತ್ತು ನವಗ್ರಹ ದೇವಸ್ಥಾನವಿದೆ. ಪೂರ್ವದಲ್ಲಿ ದುರ್ಗಾದೇವಿ, ಬಸವೇಶ್ವರ, ಕಾಶಿವಿಶ್ವನಾಥ ಮತ್ತು ಪಂಚಲಿಂಗಗಳ ಎಂಟು ಪುಟ್ಟ ಗುಡಿಗಳಿವೆ. ಆಗ್ನೇಯದಲ್ಲಿ ವೃಷಭಮೂರ್ತಿ ನಾಗಮೂರ್ತಿಗಳಿವೆ. ದಕ್ಷಿಣ ದ್ವಾರದ ಹೊರಗೆ ಮಾದೇಶ್ವರನ ಪಾದಪೀಠದ ಗುಡಿಯಿದೆ.
ದೇವಾಲಯದ ಧ್ವಜಸ್ತಂಭವನ್ನು ತಗಡಿನಿಂದ ಮಾಡಲಾಗಿದ್ದು ಇದು ಹನ್ನೆರಡು ಅಡಿ ಎತ್ತರವಿದೆ. ಇದರ ಮುಂದೆ ವೃಷಭೇಶ್ವರ ಮೂರ್ತಿಯ ಕಲ್ಲುಕಂಬವನ್ನು ಕಾಣಬಹುದು.ಬೆಟ್ಟದ ತಳಭಾಗದಲ್ಲಿ ಬೆಟ್ಟಹಳ್ಳಿ ಮಾರಮ್ಮ ಎಂಬ ಗ್ರಾಮ ದೇವತೆಯ ದೇವಸ್ಥಾನವೂ ಇದೆ. ಸುತ್ತಮುತ್ತ ಕಣ್ಣೀರ್ಕಟ್ಟೆ, ಹಾಲುಗಟ್ಟೆ, ಕಪಿಲಗೋಮಾಳ ಮುಂತಾದ ಸ್ಥಳಗಳಿದ್ದು ಇವುಗಳಿಗೂ ತನ್ನದೇ ಐಹಿತ್ಯವಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications