ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ. 1ರಂದು ಮೇಲುಕೋಟೆಯಲ್ಲಿ ವೈರಮುಡಿ ವೈಭವ

By * ಬಿಎಂ ಲವಕುಮಾರ್, ಮೈಸೂರು
|
Google Oneindia Kannada News

ದಕ್ಷಿಣ ಭಾರತದ ಪ್ರಮುಖ ನಾಲ್ಕು ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿರುವ ಮಂಡ್ಯದ ಮೇಲುಕೋಟೆಯಲ್ಲೀಗ ಜಾತ್ರೆಯ ಸಂಭ್ರಮ. ಹೀಗಾಗಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಾತ್ರವಲ್ಲದೆ, ವಿದೇಶಿಯರು ಇತ್ತ ಬರತೊಡಗಿದ್ದಾರೆ. ಇದಕ್ಕೆ ಕಾರಣ ಮೇಲುಕೋಟೆಯ ನಿಸರ್ಗ ಸೌಂದರ್ಯ, ಇಲ್ಲಿ ನೆಲೆನಿಂತಿರುವ ದೇವಾಲಯಗಳು ಹಾಗೂ ವರ್ಷಕ್ಕೊಮ್ಮೆ ನಡೆಯುವ ವೈರಮುಡಿ ಉತ್ಸವ ಎಂದರೆ ತಪ್ಪಾಗಲಾರದು.

ಬೆಟ್ಟಗುಡ್ಡಗಳು... ಅವುಗಳ ಮೇಲೆ ಮತ್ತು ನಡುವೆ ನೆಲೆನಿಂತಿರುವ ಹತ್ತಾರು ದೇಗುಲಗಳು... ಸ್ಪಟಿಕದಂತೆ ಹೊಳೆಯುವ ಸುಂದರ ಕಲ್ಯಾಣಿ, ಕೆರೆಗಳು... ಹಚ್ಚ ಹಸಿರಿನೊಂದಿಗೆ ಸುತ್ತಲೂ ಹರಡಿಕೊಂಡಿರುವ ಕೃಷಿ ಭೂಮಿಗಳು... ಇದು ಪ್ರವಾಸಿ ತಾಣವಾಗಿ, ಪವಿತ್ರ ಕ್ಷೇತ್ರವಾಗಿ ಆಸ್ತಿಕ-ನಾಸ್ತಿಕರೆನ್ನದೆ ಎಲ್ಲರನ್ನೂ ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುವ ಮೇಲುಕೋಟೆಯ ಮೇಲ್ನೋಟದ ದೃಶ್ಯಗಳು. [ಗ್ಯಾಲರಿ ನೋಡಿರಿ]

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿಗೆ ಸೇರಿರುವ ಮೇಲುಕೋಟೆಯು ಮಂಡ್ಯದಿಂದ 28 ಕಿ.ಮೀ. ದೂರದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು ಮೂರು ಸಾವಿರ ಅಡಿಯಷ್ಟು ಎತ್ತರದಲ್ಲಿದೆ. ಇದು ಭಾರತದಲ್ಲಿರುವ ಪವಿತ್ರ ಕ್ಷೇತ್ರಗಳ ಪೈಕಿ ಒಂದಾಗಿದ್ದು, ದಕ್ಷಿಣ ಭಾರತದ ಪ್ರಮುಖ ನಾಲ್ಕು ವೈಷ್ಣವ ಕ್ಷೇತ್ರ (ಶ್ರೀರಂಗ, ತಿರುಪತಿ, ಕಾಂಚೀಪುರ, ಮೇಲುಕೋಟೆ)ಗಳಲ್ಲಿ ಒಂದಾಗಿದೆ.

ಮೇಲುಕೋಟೆಯಲ್ಲಿ ಪ್ರತಿವರ್ಷವೂ ಹಲವಾರು ಕಾರ್ಯಕ್ರಮ, ಉತ್ಸವಗಳು ನಡೆಯುತ್ತವೆಯಾದರೂ ಅವುಗಳಲ್ಲಿ ಹತ್ತು ದಿನಗಳ ಕಾಲ ನಡೆಯುವ ಚೆಲುವರಾಯಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಅತ್ಯಂತ ಪ್ರಮುಖವಾದುದಾಗಿದೆ.

English summary
Melukote Cheluvanarayana Swamy Vairamudi utsav is on April 1, 2012. Thousands of devotees gather from all over India and world to have a glimpse of beautiful festival and beautiful place. Article by BM Lavakumar, Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X