ತಲಕಾಡು ಪಂಚಲಿಂಗದರ್ಶನಕ್ಕೆ ಸಕಲ ಸಿದ್ಧತೆ
ಮೈಸೂರು, ಮೇ. 28: 2009ನೇ ನವೆಂಬರ್ 16ರಂದು ನಡೆಯಲಿರುವ ತಲಕಾಡು ಪಂಚಲಿಂಗದರ್ಶನ ಮಹೋತ್ಸವಕ್ಕೆ ಸಂಬಂಧಿಸಿದ ಕಾಮಗಾರಿಗಳ ಅನುಷ್ಠಾನವನ್ನು ಚುರುಕುಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಅವರು ಮೈಸೂರು ಸಹಾಯಕ ಆಯುಕ್ತರು ಎಲ್ಲಾ ಸಿದ್ಧತಾ ಕೆಲಸಗಳ ಸಮನ್ವಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ತಿಳಿಸಿದರು.
ಪಂಚಲಿಂಗದರ್ಶನ ಮಹೋತ್ಸವ ಸಿದ್ಧತೆಗಳ ಪರಿಶೀಲನೆಗಾಗಿ ಇಂದು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ದೇವಾಲಯಗಳ ದುರಸ್ತಿ ಕಾರ್ಯವನ್ನು ದೇವಸ್ಥಾನ ಸಮಿತಿಗಳಲ್ಲಿ ಲಭ್ಯವಿರುವ ಹಣದಿಂದ ಕೂಡಲೇ ಆರಂಭಿಸಲು ಕ್ರಮ ವಹಿಸುವಂತೆ ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆ, ಮತ್ತಿತರ ಇಲಾಖೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಅವರು ಕುಡಿಯುವ ನೀರು, ಸ್ವಚ್ಚತೆ, ಸಂಚಾರ ವ್ಯವಸ್ಥೆ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಇನ್ನುಮುಂದೆ ನಿಯಮಿತವಾಗಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಮೈಸೂರು ಸಹಾಯಕ ಆಯುಕ್ತರು ಹೆಚ್ಚಿನ ಆಸಕ್ತಿ ವಹಿಸಿ ಸಿದ್ಧತೆಗಳ ಪರಿಶೀಲನೆ ನಡೆಸುವರು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಶಾಶ್ವತ ಕಾಮಗಾರಿಗಳನ್ನು ಇದೇ ಸಂದರ್ಭದಲ್ಲಿ ಕೈಗೊಳ್ಳುವಂತೆಯೂ ಅವರು ಹೇಳಿದರು.ಟಿ.ನರಸೀಪುರ ತಾಲ್ಲೂಕು ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
(ದಟ್ಸ್ ಕನ್ನಡವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications