ಕೈಲಾಸ ಮಾನಸ ಸರೋವರ ಯಾತ್ರೆಗೆ ಪ್ರೋತ್ಸಾಹ ಧನ
ಕರ್ನಾಟಕದ ಖಾಯಂ ನಿವಾಸಿಗಳು, ದಿನಾಂಕ 3/6/2006 ರಲ್ಲಿ ನೀಡಿರುವ ಸರ್ಕಾರಿ ಆಜ್ಞೆಯ ಮಾರ್ಗಸೂಚಿಗಳ ಷರತ್ತುಗಳಿಗೆ ಒಳಪಟ್ಟವರು ಮಾತ್ರ ಧನ ಸಹಾಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಪಾಸ್ಪೋರ್ಟ್ನಲ್ಲಿ ನಮೂದಿಸಲಾಗಿರುವ ಕರ್ನಾಟಕ ರಾಜ್ಯದ ವಿಳಾಸವನ್ನು ಪರಿಗಣಿಸಲಾಗುವುದು. ಈಗಾಗಲೇ ಮಾನಸ ಸರೋವರ ಯಾತ್ರೆ ಕೈಗೊಂಡು ಸರ್ಕಾರದಿಂದ ಧನ ಸಹಾಯ ಪಡೆದಿರುವ ಯಾತ್ರಿಕರು, ಈ ಉದ್ದೇಶಕ್ಕಾಗಿ ಎರಡನೇ ಬಾರಿಗೆ ಈ ಧನ ಸಹಾಯ ಪಡೆಯಲು ಅರ್ಹರಾಗುವುದಿಲ್ಲ.
ಸರ್ಕಾರದ ಮಾರ್ಗಸೂಚಿಗಳಿಗೆ ಒಳಪಟ್ಟು ಧನ ಸಹಾಯ ಪಡೆಯಲು ಇಚ್ಚಿಸುವ ಯಾತ್ರಿಕರು ತಾವು ಯಾತ್ರೆ ಮುಗಿಸಿದ್ದಕ್ಕೆ ಪಡೆಯುವ ಪ್ರಮಾಣ ಪತ್ರದ ದಿನಾಂಕದಿಂದ ಎರಡು ತಿಂಗಳು ಒಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, 2ನೇ ಮಹಡಿ, ಮಲೆ ಮಹದೇಶ್ವರ ವಾರ್ತಾ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18. ಈ ಕಛೇರಿಯಲ್ಲಿ ಖುದ್ದು ಪಡೆದು ಸಲ್ಲಿಸತಕ್ಕದ್ದು. ಹೆಚ್ಚಿನ ವಿವರಗಳಿಗಾಗಿ ಮೇಲ್ಕಂಡ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಭಾರತ, ಚೀನಾ ಹಾಗೂ ಟಿಬೇಟ್ ಗಡಿ ಭಾಗವನ್ನು ಹಾದು ಕೈಲಾಸ ಪರ್ವತವನ್ನು ನೋಡಬಹುದಾಗಿದೆ. ಸಾಕ್ಷತ್ ಶಿವನ ಸನ್ನಿಧಿ ಎಂದು ನಂಬಲಾಗಿರುವ ಕೈಲಾಸ ಪರ್ವತ ಪರಿಕ್ರಮ ಹಾಗೂ ಮಾನಸ ಸರೋವರ ಯಾತ್ರೆ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಕಾಣಲೇ ಬೇಕಾದ ಪುಣ್ಯಸ್ಥಳ ಎಂದು ಹಿಂದೂಗಳ ನಂಬಿಕೆ. ಹಿಂದೂಗಳಲ್ಲದೆ, ಬೌದ್ಧ, ಜೈನ ಹಾಗೂ ಬಾನ್ ಧರ್ಮದವರಿಗೂ ಕೈಲಾಸ ಪರ್ವತ ಪವಿತ್ರ ಸ್ಥಳವಾಗಿದೆ.
ಗುಜರಾತ್ ಸರ್ಕಾರ 50,000 ರು ಗಳನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದ್ದು, ಕರ್ನಾಟಕ ಸರ್ಕಾರ 25,000 ರು ಗಳನ್ನು ನೀಡುತ್ತಿದೆ. ಬೆಂಗಳೂರಿನ ಎಸ್ ಜಿಎಲ್ ಟೂರ್ಸ್ ಹಾಗೂ ಟ್ರಾವೆಲ್ಸ್ ಕಂಪೆನಿ ಹಲವಾರು ವರ್ಷಗಳಿಂದ ಕೈಲಾಸ ಯಾತ್ರೆಯನ್ನು ಆಯೋಜಿಸುತ್ತಾ ಬಂದಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ













Click it and Unblock the Notifications