ಕೊಡಗಿನಲ್ಲಿ ಕಾವೇರಿ ಮೇಲೆ ಸವಾರಿ

ಹೀಗಾಗಿ ಸುರಿಯುವ ಮಳೆಯಲ್ಲಿಯೇ ಕೆಸರುಗದ್ದೆಯನ್ನು ಮೈದಾನವನ್ನಾಗಿಸಿ ಕೆಸರುಗದ್ದೆ ಕ್ರೀಡಾಕೂಟ ನಡೆಸುತ್ತಾರೆ. ಅಷ್ಟೇ ಅಲ್ಲ ಮತ್ತೊಂದೆಡೆ ಧುಮ್ಮಿಕ್ಕಿ ಹರಿಯವ ಕಾವೇರಿ ನದಿಯಲ್ಲಿಯೇ ರಿವರ್ ರ್ಯಾಫ್ಟಿಂಗ್ ನಂತಹ ಸಾಹಸಮಯ ಕ್ರೀಡೆಯನ್ನಾಡಲು ಮುಂದಾಗುತ್ತಾರೆ.
ಹಾಗೆನೋಡಿದರೆ ಕೊಡಗಿನ ಮಳೆ ಇತರೆಡೆಗೆ ಹೋಲಿಸಿದರೆ ಸ್ವಲ್ಪ ಭಿನ್ನ ಎಂದರೆ ತಪ್ಪಾಗಲಾರದು. ಏಕೆಂದರೆ ಒಮ್ಮೆ ಪ್ರಾರಂಭವಾಯಿತೆಂದರೆ ಧೋ... ಎಂದು ಇಲ್ಲವೆ ಜಿಟಿ...ಜಿಟಿ...ಸುರಿಯುತ್ತಲೇ ಇರುತ್ತದೆ. ಈ ಮಳೆಗೆ ಮನೆಯಿಂದ ಹೊರಬರುವುದೇ ಒಂದು ಸಾಹಸ ಅದರಲ್ಲಿಯೂ ಮಳೆಗೆ ಆಟವಾಡುವುದೆಂದರೆ ಸುಲಭದ ಮಾತಲ್ಲ.
ಆದರೆ ಕೊಡಗಿನವರು ಹಾಗಲ್ಲ ಸುರಿಯುವ ಮಳೆಗೆ, ಬೀಸುವ ಗಾಳಿಗೆ, ಕೊರೆಯುವ ಚಳಿಗೆ ಮನೆಯೊಳಗೆ ಕಂಬಳಿ ಹೊದ್ದು ಕೂರುವವರಲ್ಲ. ಏನಾದರೊಂದು ಸಾಹಸಮಯ ಕಾರ್ಯ ಮಾಡುತ್ತಲೇ ಇರುತ್ತಾರೆ. ಈಗ ನೋಡಿ ಕೊಡಗಿನಲ್ಲಿ ಸುರಿಯತ್ತಿರುವ ಮಳೆಗೆ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಉಕ್ಕಿ ಹರಿಯುವ ನದಿಯಲ್ಲಿಯೇ ಇಲ್ಲಿನವರು ರಿವರ್ ರ್ಯಾಫ್ಟಿಂಗ್ ನಂತಹ ಜಲಕ್ರೀಡೆಯನ್ನಾಡಲು ಮುಂದಾಗಿದ್ದಾರೆ.
ಸಾಹಸಿ ಕ್ರೀಡಾಪ್ರೇಮಿಗಳಿಗಾಗಿಯೇ ಕುಶಾಲನಗರ ಸಮೀಪದ ದುಬಾರೆಯ ಆನೆ ಶಿಬಿರದ ಬಳಿ ರಿವರ್ ರ್ಯಾಫ್ಟಿಂಗ್ ಪ್ರಾರಂಭವಾಗಿದೆ. ಸುರಿಯುವ ಮಳೆಗೆ ಮೈಯೊಡ್ಡಿ, ಉಕ್ಕಿಹರಿಯುವ ನದಿಯಲ್ಲಿ ತೇಲಾಡುತ್ತಾ... ಏಳುತ್ತಾ....ಬೀಳುತ್ತಾ.... ಸಾಗುವ ರ್ಯಾಫ್ಟಿಂಗ್ ನ್ನು ದೂರದಿಂದ ನೋಡುವಾಗಲೇ ಮೈ ರೋಮಾಂಚನಗೊಳ್ಳುತ್ತದೆ.
ಗ್ಯಾಲರಿ:ಕೊಡಗಿನ ಜಲಕ್ರೀಡೆ ಸಾಹಸದಾಟದ ದೃಶ್ಯ | ಕೊಡಗಿನಲ್ಲಿ ಭರ್ಜರಿ ಮಳೆ |
ಇನ್ನು ತಾವೇ ಕುಳಿತು ಸಾಗುವುದೆಂದರೆ ಅದು ಮರೆಯಲಾರದ ರಸಾನುಭವ. ಕಳೆದ ಕೆಲವು ವರ್ಷಗಳ ಹಿಂದೆ ಮೊದಲ ಬಾರಿಗೆ ಬಿಟ್ಟಂಗಾಲದ ಕೂರ್ಗ್ ಅಡ್ವೆಂಚರ್ ಕ್ಲಬ್ ದುಬಾರೆಯಲ್ಲಿ ರಿವರ್ ರ್ಯಾಫ್ಟಿಂಗ್ ಆರಂಭಿಸಿದಾಗ ಇದಕ್ಕೆ ಜಂಗಲ್ ಲಾಡ್ಜ್ನ ಸಹಕಾರವೂ ದೊರೆತಿತ್ತು.
ಆರಂಭದಲ್ಲಿ ಪ್ರಚಾರದ ಕೊರತೆ, ಮತ್ತಿತರ ಕಾರಣಗಳಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಅದು ನಡೆಯಲಿಲ್ಲ. ಆದರೆ ನಂತರದ ವರ್ಷಗಳಲ್ಲಿ ಇದು ಜನಪ್ರಿಯವಾಗತೊಡಗಿತು. ಮೊದಲ ವರ್ಷದಲ್ಲಿ ನೂರರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಮಂದಿ ಇತ್ತೀಚಿಗಿನ ವರ್ಷಗಳಲ್ಲಿ ಸಾವಿರಗಳ ಸಂಖ್ಯೆಯಲ್ಲಿ ಸಾಗಿದೆ.
ದುಬಾರೆಯ ಆನೆ ಕ್ಯಾಂಪ್ಗೆ ಬರುವವರು ಹಾಗೆಯೇ ರಿವರ್ ರ್ಯಾಫ್ಟಿಂಗ್ ನ ಮಜಾವನ್ನು ಕೂಡ ಪಡೆಯಬಹುದಾಗಿದೆ. ಇಲ್ಲಿನ ಆನೆ ಶಿಬಿರದಿಂದ ಪ್ರಾರಂಭವಾಗುವ ರ್ಯಾಫ್ಟಿಂಗ್ ಹೊಸಪಟ್ಟಣ, ಗುಡ್ಡೆಹೊಸೂರು, ಕಾವೇರಿ ನಿಸರ್ಗಧಾಮದ ಮೂಲಕ ಸಾಗಿ ಪಾಲಿಟೆಕ್ನಿಕ್ ಬಳಿ ಅಂತ್ಯಗೊಳ್ಳುತ್ತದೆ.
ಅಂದರೆ ಬರೋಬ್ಬರಿ ಹನ್ನೊಂದು ಕಿ.ಮೀ. ದೂರವನ್ನು ಉಕ್ಕಿಹರಿಯುವ ನದಿಯಲ್ಲಿ ಕ್ರಮಿಸುವುದೆಂದರೆ ಹುಡುಗಾಟದ ಮಾತಲ್ಲ ಇದಕ್ಕೆ ಧೈರ್ಯ ಬೇಕು. ರ್ಯಾಫ್ಟೊಂದರಲ್ಲಿ ಆರು ಮಂದಿ ಒಮ್ಮೆಗೆ ಕುಳಿತು ರ್ಯಾಫ್ಟಿಂಗ್ ಮಾಡಬಹುದಾಗಿದೆ. ರ್ಯಾಫ್ಟಿಂಗ್ ಮಾಡುವ ಸಂದರ್ಭ ಜೊತೆಯಲ್ಲಿ ಪರಿಣಿತರು ಇರುವುದರಿಂದ ಭಯಪಡಬೇಕಾಗಿಲ್ಲ.
ರಿವರ್ ರ್ಯಾಫ್ಟಿಂಗ್ ಮಾಡುವವರಿಗೆ ಮೊದಲಿಗೆ ಜೀವರಕ್ಷಕ ಜಾಕಿಟ್ ತೊಡಿಸಲಾಗುತ್ತದೆ. ಜೊತೆಗೆ ಹೆಲ್ಮೆಟ್ ನೀಡಲಾಗುತ್ತದೆ. ಇಲ್ಲಿ ಪುರುಷರು, ಮಹಿಳೆಯರು ಎಲ್ಲರೂ ಪಾಲ್ಗೊಳ್ಳಬಹುದಾಗಿದೆ.
ರಿವರ್ ರ್ಯಾಫ್ಟಿಂಗ್ ಆರಂಭವಾದ ಬಳಿಕ ಮಳೆಗಾಲದಲ್ಲಿಯೂ ದುಬಾರೆ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಇದು ಪ್ರವಾಸೋದ್ಯಮದ ಅಭಿವೃದ್ಧಿಗೂ ಸಹಕಾರಿಯಾಗಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಮಳೆಗಾಲದ ವಿಶೇಷ ಕ್ರೀಡೆಯಾಗಿ ಗಮನ ಸೆಳೆಯುತ್ತಿರುವ "ರಿವರ್ ರ್ಯಾಫ್ಟಿಂಗ್" ಮಳೆಗಾಲದ ಅಂತ್ಯದವರೆಗೂ ನಡೆಯುತ್ತದೆ.
ಕೊಡಗಿನ ಮಳೆಗೆ ಮೈಯೊಡ್ಡಿ, ಧುಮ್ಮಿಕ್ಕಿ ಹರಿಯುವ ಕಾವೇರಿ ಮೇಲೆ ಸವಾರಿ ಮಾಡಬೇಕೆನಿಸಿದರೆ ತಪ್ಪದೆ ದುಬಾರೆಗೆ ಬನ್ನಿ... ಹೆಚ್ಚಿನ ಮಾಹಿತಿಗೆ ಮುರುಳಿ: 94492 42477 ಸಂಪರ್ಕಿಸಿ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications