ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಬ್ಬದ ಪ್ರಯುಕ್ತ ಭರ್ಜರಿ ಬಸ್ ವ್ಯವಸ್ಥೆ

By Mahesh
|
Google Oneindia Kannada News

Special buses from KSRTC
ಬೆಂಗಳೂರು, ಆ.17: ವರ ಮಹಾಲಕ್ಷ್ಮಿ ಹಾಗೂ ತಿರು ಓಣಂ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಆ.19ರಿಂದ 24 ರವರೆಗೆ ಸಾರ್ವಜನಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಬಿಜಾಪುರ, ರಾಯಚೂರು, ಗುಲ್ಬರ್ಗಾ, ಬಳ್ಳಾರಿ, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳ ಸಂಚಾರ ಸೇವೆಯನ್ನು ಆರಂಭಿಸಿದೆ.

ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಿಗೆ ಹಾಗೂ ಶಾಂತಿನಗರದಿಂದ ವೋಲ್ವೊ ಹೊರತುಪಡಿಸಿ ತಮಿಳುನಾಡಿನ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಕಲ್ಪಿಸಲಿದೆ ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲು ಬೆಂಗಳೂರಿನಲ್ಲಿ 162, ಮೈಸೂರಿನಲ್ಲಿ 15, ಮಂಗಳೂರಿನಲ್ಲಿ 42 ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ 189 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳನ್ನು ತೆರೆಯಲಾಗಿದೆ. ಹೆಚ್ಚಿನ ವಿವರಗಳಿಗೆ ನಿಗಮ ವೆಬ್‌ಸೈಟ್ ನೋಡಬಹುದಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X