Tour Guide: ಮಲೆ ಮಾದಪ್ಪನ ಬೆಟ್ಟಕ್ಕೆ ಬಂದಾಗ ಈ ಅದ್ಭುತ ತಾಣಗಳಿಗೆ ಭೇಟಿ ನೀಡುವುದನ್ನು ಮರೆಯದಿರಿ
Tour Guide: ದಕ್ಷಿಣ ಭಾರತದ ಪ್ರಮುಖ ಯಾತ್ರಸ್ಥಳಗಳಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕೂಡ ಒಂದಾಗಿದೆ. ಇಲ್ಲಿದೆ ವಾರಾಂತ್ಯ, ಸೋಮವಾರ ಹಾಗೂ ಅಮಾವಾಸ್ಯೆ ದಿನಗಳಂದು ಅಪಾದ ಸಂಖ್ಯೆಯಲ್ಲಿ ಭಕ್ತರ ದಂಡೇ ಹರಿದುಬರುತ್ತದೆ. ಒಂದು ವೇಳೆ ನೀವು ಇಲ್ಲಿಗೆ ಪ್ರವಾಸದ ಯೋಜನೆ ಕೈಗೊಂಡಿದ್ದರೆ, ಮಾದಪ್ಪನ ದರ್ಶನದ ಜೊತೆಗೆ ಈ ಹಲವು ಪ್ರಸಿದ್ಧ ತಾಣಗಳನ್ನು ಕೂಡ ನೋಡಬಹುದಾಗಿದೆ.
ಮಲೆ ಮಹದೇಶ್ವರ ಕೇಳಿದ್ದನ್ನು ಶೀಘ್ರವಾಗಿ ದಯಪಾಲಿಸುವ ಕರುಣಾಮಯಿ ಅಂಥಲೇ ನಂಬಿಕೆ ಇದ್ದು, ಅದೇ ರೀತಿ ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದ ಬಳಿಕ ಕೆಲವೊಂದು ಸ್ಥಳಗಳಿಗೂ ನೀವು ಹೋಗಿ ನಿಮ್ಮ ಪ್ರವಾಸವನ್ನು ಮತ್ತಷ್ಟು ಮೆಮೊರಬಲ್ ಮಾಡಬಹುದಾಗಿದೆ.

ನಾಗಮಲೆ ಟ್ರೆಕ್ಕಿಂಗ್: ಮಲೆ ಮಹದೇಶ್ವರ ಬೆಟ್ಟದ ಸಮೀಪವೇ ನಾಗಮಲೆ ಎಂಬ ಮಹದೇಶ್ವರನ ಸಾನ್ನಿಧ್ಯವಿದ್ದು, ಇಲ್ಲಿಗೆ ಕಾಲ್ನಡಿಗೆಯಲ್ಲಿ ತೆರಳಬೇಕಾಗುತ್ತದೆ. ಅರಣ್ಯ ಇಲಾಖೆಯ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡರೇ ಚಾರಣದ ಮೂಲಕ ನಾಗಮಲೆಗೆ ತೆರಳಬಹುದು. ಆಧ್ಯಾತ್ಮಿಕತೆ ಹಾಗೂ ದಟ್ಟ ಕಾಡಿನ ಪರಿಸರವನ್ನು ಅನುಭವಿಸಬಹುದಾಗಿದೆ.
ಗೋಪಿನಾಥಂ ಮಿಸ್ಟ್ರೀ ಕ್ಯಾಂಪ್: ಕಾಡುಗಳ್ಳ ವೀರಪ್ಪನ್ ನೆನಪಿನಿಂದ ದೂರ ಸರಿದಿರುವ ಗೋಪಿನಾಥಂ ಕೂಡ ಮಲೆ ಮಹದೇಶ್ವರ ಬೆಟ್ಟಕ್ಕೆ ಹತ್ತಿರವಿದ್ದು, ಗೋಪಿನಾಥಂನಲ್ಲಿ ಮಿಸ್ಟ್ರಿಂ ಕ್ಯಾಂಪ್ ಹೆಸರಿನ ವಸತಿ ಗೃಹವಿದೆ. ಇಲ್ಲಿ ತಂಗಬಹುದಾಗಿದ್ದು, ಪಿಕ್ನಿಕ್ಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಜೊತೆಗೆ, ಪಕ್ಷಿ ವೀಕ್ಷಣೆ, ಅರಣ್ಯ ವೀಕ್ಷಣೆ, ಗಡಿನಾಡಿನ ಪರಿಚಯ ನಿಮಗಾಗಲಿದೆ.
ಹೊಗೆನಕಲ್ ಜಲಪಾತ: ಭಾರತದ ನಯಾಗರ ಅಂಥಲೇ ಕರೆಯುವ ಹೊಗೆನಕಲ್ ಜಲಪಾತವು ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿದೆ. ಕಲ್ಲುಗಳ ನಡುವೆ ರಭಸದಿಂದ ಧುಮ್ಮಿಕ್ಕುವ, ಮರಳಿನ ನಡುಗಡ್ಡೆಯಲ್ಲಿ ಕುಳಿತು ಕಾವೇರಿ ವಿಶಾಲ ಹರಿವನ್ನು ಕಾಣುವುದೇ ರುದ್ರ ರಮಣೀತವಾಗಿದೆ. ಇಲ್ಲಿ ತೆಪ್ಪ ಸವಾರಿ ಮೂಲಕ ತಮಿಳುನಾಡಿನ ಭಾಗದ ಜಲಪಾತಕ್ಕೂ ಹೋಗಬಹುದಾಗಿದ್ದು, ಚೆಂದನೆಯ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಮೀನಿನ ಊಟ, ಮಸಾಜ್, ಆಟೋಟಗಳು ಕೂಡ ಇಲ್ಲಿ ಜನಪ್ರಿಯ.
ಪಿ.ಜಿ.ಪಾಳ್ಯ ಸಫಾರಿ: ಮೊದಲೆಲ್ಲಾ ಸಫಾರಿ ನಡೆಸಬೇಕಾದರೇ ಬಂಡೀಪುರ, ಕೆ.ಗುಡಿಗೆ ತೆರಳಬೇಕಿತ್ತು. ಈಗ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದಿಂದಲೇ ವನ್ಯಜೀವಿ ಸಫಾರಿ ಆರಂಭಗೊಂಡಿದ್ದು, ಮಾದಪ್ಪನ ಭಕ್ತರು ಈಗ ಸಫಾರಿ ಆನಂದವಯ ಅನುಭವಿಸಬಹುದಾಗಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟ: ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಸ್ವಾಮಿ ಬೆಟ್ಟವಂತೂ ಹಸಿರಿನ ಜೊತೆ ಮಂಜಿನ ಹೊದಿಕೆ ಹೊದ್ದಿರುತ್ತದೆ. ಬೆಳಗ್ಗೆ 9 ಗಂಟೆ ಆದರೂ ಮಂಜು ಮುಸುಕಿದ ವಾತಾವರಣ ಇರುತ್ತದೆ. ಇಲ್ಲಿನ ಈ ಅದ್ಭುತ ವಾತಾವರಣ ಮನಸಿಗೆ ಇಂಪು ನೀಡುತ್ತಲೇ ಇರುತ್ತದೆ. ಇದು ಬೆಂಗಳೂರಿನಿಂದ ಸುಮಾರು 220 ಕಿ.ಮೀ. ಆದರೆ ಮೈಸೂರಿನಿಂದ 80 ಕಿಲೋ ಮೀಟರ್ ದೂರದಲ್ಲಿದೆ.
ಗೋಪಾಲಸ್ವಾಮಿ ಬೆಟ್ಟದ ವಿಶೇಷತೆ ಏನು?: ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತೀ ಎತ್ತರದ ಶಿಖರವಾಗಿದೆ. ಗುಂಡ್ಲುಪೇಟೆ ಬಳಿಯಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಹಚ್ಚ ಹಸಿರಿನಿಂದ ಕೂಡಿದ ನೈಸರ್ಗಿಕ ಪರಿಸರದಿಂದಾಗಿ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಲೇ ಇದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications