ವಾದಿರಾಜರ ತಪೋಭೂಮಿ ಶಿರಸಿ ಬಳಿಯ ಸೊಂದೆ

ಶಾಲ್ಮಲಾ ನದಿ ಹರಿಯುತ್ತಿರವ ನೈಸರ್ಗಿಕವಾಗಿ ರಮ್ಯ ಮನೋಹರವಾಗಿರುವ ಈ ಪುಣ್ಯಕ್ಷೇತ್ರ ಕ್ರಿ.ಶ.1555ರಿ೦ದ 1598ರಲ್ಲಿ ವಿಜಯನಗರದ ಸಾಮ೦ತರಾಜ ಅರಸಪ್ಪನಾಯಕನ ಆಳ್ವಿಕೆಗೆ ಸೇರಿತ್ತು. ಭಾವೀ ಸಮೀರರಾದ ಶ್ರೀವಾದಿರಾಜರು ತಪಗೈದು, ಸ್ಥಳವನ್ನು ಪುನೀತಗೊಳಿಸಿ ಪುಣ್ಯಕ್ಷೇತ್ರವನ್ನಾಗಿ ಮಾಡಿದರು ಎನ್ನುವುದು ಪ್ರತೀತಿ.
ಬೆಂಗಳೂರಿನಿಂದ 450 ಕಿ.ಮೀ. ಮತ್ತು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಿ೦ದ 25 ಕಿಲೋ ಮೀಟರ್ ದೂರದಲ್ಲಿ ಈ ಕ್ಷೇತ್ರವಿದೆ. ಕ್ಷೇತ್ರವನ್ನು ಸೊಂದ ಅಥವಾ ಸೋದೆ ಎಂದು ಕೂಡಾ ಕರೆಯುವರು. ಇಲ್ಲಿ ಮೂರು ಮಠಗಳು ಇರುತ್ತವೆ. ಶ್ರೀವಾದಿರಾಜರ ಮಠ, ಶ್ರೀ ಜೈನಮಠ ಮತ್ತು ಶ್ರೀ ಸ್ವಣ೯ವಲ್ಲಿಮಠವಿರುವ ತ್ರಿವಳಿ ಮಠಗಳ ಸ೦ಗಮವೇ ಸೋದೆ.
ಪುರಾಣ : ಶಾವ೯ರಿ ಫಾಲ್ಗುಣ ಕ್ರಷ್ಣ ಪಕ್ಷ ತೃತೀಯ ಶಾಲಿವಾಹನ ಶಕ 1522ನೇ ಬುಧವಾರ ಸ್ವಾತಿ ನಕ್ಷತ್ರದಲ್ಲಿ ಶ್ರೀ ವಾದಿರಾಜರು ಮೂದಲೇ ನಿಮಾ೯ಣಗೊ೦ಡು ಪೂಜಿತವಾದ ಪ೦ಚವೃಂದಾವನಗಳಲ್ಲಿ ಶ್ರೀಹಯಗ್ರೀವ ದೇವರನ್ನು ಹಾಗೂ ಶ್ರೀವೇದವ್ಯಾಸ ದೇವರನ್ನು ಆರಾಧಿಸುತ್ತಾ, ಮಧ್ಯ ವೃ೦ದಾವನದಲ್ಲಿ ಪ್ರವೇಶಮಾಡಿ ಕುಳಿತರು. ತಮ್ಮ ಕೈಯಲ್ಲಿರುವ ಜಪಮಣಿ ಸರಿದಾಡುವುದು ನಿ೦ತಕೂಡಲೇ ಮು೦ಭಾಗದ ಶಿಲೆಯನ್ನು ಮುಚ್ಚಲು ಅಪ್ಪಣೆಯಿತ್ತು ವೃಂದಾವನದೊಳಗೆ ಕುಳಿತು ಧ್ಯಾನಮಗ್ನರಾದರು. ಮರುದಿನ ಶಾಲಿವಾಹನ ಶಕ 1522ನೇ ಶಾವ೯ರಿ ಫಾಲ್ಗುಣ ಕೃಷ್ಣ ಪಕ್ಷ ತೃತೀಯ ಬುಧವಾರ ಸ್ವಾತಿ ನಕ್ಷತ್ರದಲ್ಲಿ ಶ್ರೀಮದ್ವಾದಿರತೀಥ೯ ಪರಮಹ೦ಸ ಕುಲತಿಲಕರ ಹಸ್ತದಿ೦ದ ಜಪಸರವು ಕೆಳಗೆ ಬಿದ್ದಿತು. ಕೂಡಲೇ ವೃಂದಾವನದ ಮುಚ್ಚಳವನ್ನು ಮುಚ್ಚಲಾಯಿತು.
ಆಗ ಮಿ೦ಚುವ ವಿಮಾನದಲ್ಲಿ ಶ್ರೀಗಳು ಕುಳಿತಕೂಡಲೇ ಅದು ಮೇಲಕ್ಕೇರಲಾರ೦ಭಿಸಿತು. ಭಕ್ತವೃಂದದ ಆತ೯ಧ್ವನಿ ಆಲಿಸಿದ ಶ್ರೀಗಳು ಕರುಣೆಯಿ೦ದ ಪಾದುಕೆಗಳನ್ನು ಮತ್ತು ತಾವು ಹೊದ್ದುಕೊ೦ಡಿರುವ ಶಾಟಿಯನ್ನು ಭಕ್ತರ ಕಡೆಗೆ ಹಾಕಿ "ನಾನು ಇಲ್ಲಿಯೆ ವೃಂದಾವನದಲ್ಲಿ ಸನ್ನಿಹಿತರಾಗಿ, ಶ್ರೀಭೂತರಾಜರ ಸೇವೆ ಕೈಗೊ೦ಡು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತೇನೆ" ಎ೦ದು ಹೇಳಿ ವಿಮಾನದ ಜೊತೆ ಕಣ್ಮರೆಯಾದರೆನ್ನುವುದು ಕ್ಷೇತ್ರದ ಇತಿಹಾಸ.
ಕ್ಷೇತ್ರದ ಕಾರಣಿಕ ಎಂದರೆ ಕ್ಷೇತ್ರವನ್ನು ಮುನ್ನಡೆಸುತ್ತಿದೆ ಎಂದು ನಂಬಲಾಗುವ ದೈವಶಕ್ತಿ "ಶ್ರೀ ಭೂತರಾಜರು". ಮಾರ್ಚ್ ತಿಂಗಳಲ್ಲಿ ಹೋಳಿ ಹುಣ್ಣಿಮೆ ಸಂದರ್ಭದಲ್ಲಿ ಇಲ್ಲಿ ಮೂರು ದಿನಗಳ ಆರಾಧನೆ ಕೂಡ ಇರುತ್ತದೆ. ಮಠದಲ್ಲಿ ಊಟ ಇಲ್ಲದಿದ್ದರೆ ಭಟ್ಟರ ಮನೆಯಲ್ಲಿ ಸಂಮೃದ್ಧ ಭೋಜನ ಸಿಗುತ್ತದೆ. ಉಡುಪಿಯ ಅಷ್ಠ ಮಠಗಳಲ್ಲಿ ಸೋದೆ ಮಠ ಕೂಡ ಒಂದು.
ಪ್ರೇಕ್ಷಣೀಯ ಸ್ಥಳಗಳು : ಶಿರಸಿಯಲ್ಲಿಯೇ ಸರ್ವಾಭಿಷ್ಟ ಸಿದ್ಧಿಸುವ ಶಿರಸಿ ಮಾರಿಕಾಂಬಾ ದೇವಿಯ ದೇವಸ್ಥಾನವಿದೆ. ಫೆಬ್ರವರಿಯಲ್ಲಿ ಇಲ್ಲಿ 9 ದಿನಗಳ ಉತ್ಸವವಿರುತ್ತದೆ. ಶಿರಸಿಯ ಸುತ್ತಮುತ್ತ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಸಾವಿರ ಲಿಂಗಗಳಿರುವ ಸಹಸ್ರಲಿಂಗ ನೋಡತಕ್ಕ ರಮಣೀಯ ಸ್ಥಳ. ಶಿರಸಿಯಿಂದ ಕೇವಲ 45 ಕಿ.ಮೀ. ದೂರದಲ್ಲಿರುವ ಪಶ್ಚಿಮಘಟ್ಟದಲ್ಲಿರುವ ಯಾಣ ಚಾರಣಿಗರಿಗೆ ಹೇಳಿ ಮಾಡಿದ ಸ್ಥಳ. ಸೊಂದೆಗಾಗಲಿ ಯಾಣಕ್ಕಾಗಲಿ ಶಿರಸಿಯಿಂದ ತಲುಪಲು ಸಾಕಷ್ಟು ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ವಾಹನಗಳ ಸೌಕರ್ಯವಿದೆ.
ಸೋದೆಮಠದ ವಿಳಾಸ:
ಸೋದೆ ಶ್ರೀವಾದಿರಾಜ ಮಠ
ಶಿರಸಿ ತಾಲೂಕ್, ಉತ್ತರ ಕನ್ನಡ ಜಿಲ್ಲೆ
ದೂರವಾಣಿ : 08384 279685
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications