ಕಾರ್ತಿಕ ಸೋಮವಾರ ವಿಶೇಷ: ಎಲ್ಲೂರು ವಿಶ್ವೇಶ್ವರ ದೇಗುಲ

ಸ್ಥಳ ಪುರಾಣ:ಉದ್ಭವ ಮಹಾದೇವನು ಮೊದಲು ಬುಡಕಟ್ಟು ವರ್ಗದ ವೃದ್ದ ಮಹಿಳೆಗೆ ಗೋಚರಿಸಿದ್ದು. ಮಹಿಳೆ ಅಣಬೆ ತೆಗೆಯಲು ಕತ್ತಿಯನ್ನು ಉಪಯೋಗಿಸಿದಾಗ ಆ ಕತ್ತಿ, ಉದ್ಭವ ಲಿಂಗಕ್ಕೆ ತಾಗಿ ರಕ್ತ ಒಸರಿಸಲಾರಂಭಿಸಿತಂತೆ. ವಿಷಯ ತಿಳಿದ ಅರಸ ಮತ್ತು ಆತನ ಗುರುಗಳು ಆಗಮಿಸಿ ಎಳನೀರು ಸುರಿದಾಗ ಮಹಾದೇವ ಗೋಚರಿಸಿದನು. ಕುಂದ ಹೆಗ್ಗಡೆ ಅರಸು ಮನೆತನದ ಭೂರಿ ಕೀರ್ತಿ ಎಂಬ ಅರಸನು ಸಂತಾನ ಅಪೇಕ್ಷೆಯಿಂದ ಮತ್ತು ತನ್ನ ರಾಜ್ಯದಲ್ಲಿ ದೇವಾಲಯವಿಲ್ಲವೆಂಬ ಕಾರಣಕ್ಕೆ ಕಾಶಿಗೆ ಹೋಗಿ ತಪಸ್ಸನ್ನು ಆಚರಿಸಿ ದೇವರನ್ನು ಕರೆತಂದನೆಂದು ಕೂಡ ಇತಿಹಾಸ ಪುಟದಲ್ಲಿ ಗುರುತಿಸಲ್ಪಟ್ಟಿದ್ದಾನೆ.
ಅರಸು ತಪಸ್ಸನ್ನು ಆಚರಿಸಿದರೂ ಮಹಾದೇವ ಮೊದಲು ಗೋಚರಿಸಿದ್ದು ಮಣ್ಣಿನಮಗಳಿಗೆ, ಆಕೆಯಿಂದ "ಎಲ್ಲು" ಎಂದು ಮೊದಲು ಕರೆಯಲ್ಪಟ್ಟಿತು. ಅಂದಿನಿಂದ ಆಕೆಯ ನೆನಪಿಗಾಗಿ ಕ್ಷೇತ್ರಕ್ಕೆ ಎಲ್ಲೂರು ಎಂದಾಯಿತು.
ಎಳನೀರು ಸೇವೆ ವಿಶೇಷ:ಎಲ್ಲೂರು ಸೀಮೆ ವ್ಯಾಪ್ತಿಯಲ್ಲಿ ನಂದಿಕೂರು, ಕುಂಜೂರು, ಕಳತ್ತೂರುಗಳಲ್ಲಿ ಅನುಕ್ರಮವಾಗಿ ದುರ್ಗಾಪರಮೇಶ್ವರಿ, ದುರ್ಗಾ ಮತ್ತು ಮಹಾಲಿಂಗೇಶ್ವರ ದೇವಾಲಯಗಳಿವೆ. ಸೋದೆ ಮಠದ ಶ್ರೀ ವಾದಿರಾಜ ಸ್ವಾಮೀಜಿಯವರು ತಮ್ಮ ತೀರ್ಥ ಪ್ರಬಂಧ ಕಥನದಲ್ಲಿ ಕ್ಷೇತ್ರಕ್ಕೆ ಆಗಮಿಸಿ ಐದು ಶ್ಲೋಕಗಳಿಂದ ಎಲ್ಲೂರು ವಿಶ್ವೇಶ್ವರನನ್ನು ಸ್ತುತಿಸಿದ ಉಲ್ಲೇಖವಿದೆ.
ಕ್ಷೇತ್ರದಲ್ಲಿ ಎಳನೀರು ಸೇವೆ ಬಹಳ ವಿಶೇಷ. ಎಳ್ಳೆಣ್ಣೆ ಸೇವೆ ನೀಡಿದರೆ ಸಕಲ ಗ್ರಹದೋಷ, ದುಷ್ಟಾರಿಷ್ಟ, ಅಪತ್ತು ದೂರವಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ರೋಗಭಾದೆ, ಬಾಲಗ್ರಹ ನಿವಾರಣೆಗೆ ತುಲಾಭಾರ ಸೇವೆ ಕೂಡ ಸ್ವಾಮಿಗೆ ಅರ್ಪಣೆಯಾಗುತ್ತಿದೆ.
ಬಿಲ್ಲವ, ಮೊಗವೀರ, ಮಡಿವಾಳ, ದೇವಾಡಿಗ ವಿಶ್ವಕರ್ಮ , ಬಂಟ್ಸ್, ಬ್ರಾಹ್ಮಣ ಸಮಾಜದವರ ಸಹಭಾಗಿತ್ವ ಕ್ಷೇತ್ರದ ವೈಶಿಷ್ಟ್ಯ. ಇತ್ತೀಚಿಗೆ ಕ್ಷೇತ್ರದ ಜೀರ್ಣೋದ್ದಾರ ಹೆಚ್ಚುಕಮ್ಮಿ ಆರು ಕೋಟಿ ರುಪಾಯಿ ವೆಚ್ಚದಲ್ಲಿ 2009 ಮಾರ್ಚ್ ತಿಂಗಳಲ್ಲಿ ವಿಜೃಂಭಣೆಯಿಂದ ನಡೆದಿತ್ತು.
ಕ್ಷೇತ್ರದ ವಿಳಾಸ:
ಮಹತೋಭಾರ ವಿಶ್ವೇಶ್ವರ ದೇವಾಲಯ,
ಎಲ್ಲೂರು ಅಂಚೆ, ತಾಲೂಕು
ಮತ್ತು ಜಿಲ್ಲೆ - ಉಡುಪಿ
ದೂ. ಸ. 0820 -2550365
ಮಾರ್ಗ: ಉಡುಪಿಯಿಂದ : ರಾ.ಹೆ 17 ರಲ್ಲಿ ಬಂದು ಕಟಪಾಡಿ, ಕಾಪು, ಉಚ್ಚಿಲ ಬಳಿ ಎಡಕ್ಕೆ ತಿರುಗಬೇಕು(ಮದರಂಗಡಿಗೆ ಹೋಗುವ ರಸ್ತೆ)
ಮಂಗಳೂರಿನಿಂದ : ರಾ.ಹೆ 17 ರಲ್ಲಿ ಬಂದು ಸುರತ್ಕಲ್ , ಮೂಲ್ಕಿ, ಪಡುಬಿದ್ರೆ , ಉಚ್ಚಿಲ ಬಳಿ ಬಲಕ್ಕೆ ತಿರುಗಬೇಕು (ಮುದರಂಗಡಿಗೆ ಹೋಗುವ ರಸ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications