ದೇಗುಲ ದರ್ಶನ : ಕಡಿಯಾಳಿಯ ಮಹಿಷಮರ್ಧಿನಿ

ಕ್ರಿ.ಶ. 8 - 9ನೇ ಶತಮಾನದ ಶಾಸನಗಳಲ್ಲಿ ಶಿವವಳ್ಳಿ - ಶಿವಳ್ಳಿ ಎಂಬ ಉಲ್ಲೇಖವಿದೆ. ಶಿವನ ಊರು ಶಿವಳ್ಳಿ. ಈ ಶಿವಳ್ಳಿಯಲ್ಲಿನ ಅತ್ಯಂತ ಪ್ರಾಚೀನ ದೇವಾಲಯಗಳಲ್ಲಿ ಒಂದಾದ ಕಡಿಯಾಳಿ ದೇವಾಲಯ ಕ್ರಿ.ಶ. 7 - 8ನೇ ಶತಮಾನದಿಂದ ಸನ್ನಿಹಿತಳಾಗಿ ಭಕ್ತರನ್ನು ರಕ್ಷಿಸುತ್ತಿದ್ದಾಳೆ ಎನ್ನುವುದು ನಂಬಿಕೆ. ಕಡೆಯಹಳ್ಳಿ, ಕುಡುಹಳ್ಳಿ ಇದ್ದಿದ್ದು ಕಡಿಯಾಳಿ ಆಯಿತೆಂದು ಅಂಬೋಣ.
ಕಡಿಯಾಳಿಯ ಮಹಿಷಮರ್ಧಿನಿ ತಾಯಿಯ ವಿಗ್ರಹದಲ್ಲಿ ಪ್ರಾಚೀನ ಇತಿಹಾಸವನ್ನು ಕಾಣಬಹುದು. ವಿಗ್ರಹವು ಕ್ರಿ.ಶ. 600 - 750ರವರೆಗಿನ ಶಿಲ್ಪಶೈಲಿಯನ್ನು ಹೊಂದಿದೆ. ಬಾದಾಮಿ ಚಾಲುಕ್ಯರ ಶಿಲ್ಪ ಲಕ್ಷಣವನ್ನು ವಿಗ್ರಹ ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ. ಸುಮಾರು 30 ಇಂಚು ಎತ್ತರದ ವಿಗ್ರಹದಲ್ಲಿ ಪ್ರಸನ್ನತೆ ಮತ್ತು ವಿಜಯದ ಮಂದಹಾಸವಿದೆ. ಮೇಲಿನ ಎರಡು ಕೈಗಳಲ್ಲಿ ಶಂಖ, ಚಕ್ರ, ಕೆಳಗಿನ ಬಲಗೈಯಲ್ಲಿ ತ್ರಿಶೂಲವಿದೆ. ತ್ರಿಶೂಲದ ಕೆಳಬದಿ ತಾಯಿಯ ಕಾಲ ಬುಡದಲ್ಲಿ ಸತ್ತು ಬಿದ್ದಿರುವ ಮಹಿಷನ ತಲೆಯನ್ನು ಒತ್ತಿ ಹಿಡಿದಿದೆ. ಹಿಂಗಾಲು ಎತ್ತಿ ಮುಗ್ಗರಿಸಿ ಬಿದ್ದ ಮಹಿಷನ ಬಾಲ ದೇವಿಯ ಎಡಗೈಯಲ್ಲಿದೆ. ಕ್ಷೇತ್ರದ ದುರ್ಗೆ ನಿರಾಭರಣ ಸುಂದರಿ. ಕಿರೀಟ, ಕುಂಡಲ, ಕೊರಳಲ್ಲಿ ಒಂದು ತಾಳಿ ಮತ್ತು ಸೊಂಟದಲ್ಲಿ ಒಂದು ಉದ್ಯಾಣ ಎಷ್ಟೋ ಅಷ್ಟೇ.
ಇತಿಹಾಸ : ತೌಳವ ರಾಜಮಂಡಲದ ರಾಜನಾಗಿದ್ದ ರಾಮಭೋಜ ಸಂತಾನವಾಗಬೇಕಂದು ಪುತ್ರಕಾಮೇಷ್ಠಿ ಯಾಗ ಮಾಡಿಸಿದ. ಯಾಗಭೂಮಿಯನ್ನು ನೇಗಿಲಿಂದ ಉಳುವಾಗ ಒಂದು ಸರ್ಪ ನೇಗಿಲಿಗೆ ಸಿಕ್ಕು ಸತ್ತು ಹೋಯಿತು. ಆ ಸರ್ಪದ ಹತ್ಯೆಯ ಪ್ರಾಯಶ್ಚಿತ್ತಕ್ಕಾಗಿ ನಾರಾಯಣನ ವಿಶೇಷ ಸನ್ನಿಧಾನವುಳ್ಳ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಿದ. ಅದು ಅನಂತೇಶ್ವರ ದೇವಾಲಯ. ಅಲ್ಲದೆ ಅನಂತೇಶ್ವರ ದೇವಾಲಯದ ಸುತ್ತಮುತ್ತ ನಾಲ್ಕು ದುರ್ಗೆಯ ದೇವಾಲಯವನ್ನು ಸ್ಥಾಪಿಸಿದ, ಅದರಲ್ಲಿ ಒಂದು ಕಡಿಯಾಳಿ ಮಹಿಷಮರ್ಧಿನಿ ದೇವಾಲಯ ಎನ್ನುವುದು ಪ್ರತೀತಿ. ಉಳಿದ ಮೂರು ದುರ್ಗೆಯ ದೇವಾಲಯವೆಂದರೆ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಲೂರು ಮಹಿಷಾಸುರಮರ್ಧಿನಿ ದೇವಾಲಯ, ಕನ್ನರ್ಪಾಡಿ ಜಯದುರ್ಗೆ, ಪುತ್ತೂರು ದುರ್ಗಾಪರಮೇಶ್ವರಿ ದೇವಾಲಯ.
ಉಡುಪಿ ಶ್ರೀಕೃಷ್ಣ ಮಠಕ್ಕೂ ಕಡಿಯಾಳಿ ದೇವಾಲಯಕ್ಕೂ ನಿಕಟವಾದ ಸಂಬಂಧವಿದೆ. ಉಡುಪಿ ಪರ್ಯಾಯ ಪೀಠವನ್ನು ಏರುವ ಸ್ವಾಮಿಗಳು ತಾಯಿಗೆ ಬಂದು ಮೊದಲು ಪ್ರಾರ್ಥನೆ ಸಲ್ಲಿಸುವುದು ಸಂಪ್ರದಾಯ. ಅಲ್ಲದೆ ಪ್ರತಿ ಶುಕ್ರವಾರ 12 ಸುವಾಸಿನಿಯರ ಸಮಾರಾಧನೆಯನ್ನು ಈ ದೇವಾಲಯದಲ್ಲಿ ನಡೆಸಿಕೊಂಡು ಬಂದಿದ್ದಾರೆ. ಮುಖ ಮಂಟಪದ ಕಂಭದಲ್ಲಿ ಕೊರೆದ ಗಣಪತಿ ವಿಗ್ರಹವಿದೆ. ದೇವಾಲಯದ ಒಂದು ಕಡೆಯಲ್ಲಿ ಧೂಮಾವತಿ ದೈವದ ಮಣೆಯಿದೆ. ಹೊರಗಡೆ ಮರದ ನಂದಿ, ವಾಯವ್ಯ ದಿಕ್ಕಿನಲ್ಲಿ ಸುಬ್ರಮಣ್ಯಸ್ವಾಮಿ ದೇವಾಲಯ ಮತ್ತು ಈಶಾನ್ಯ ಮೂಲೆಯಲ್ಲಿ ವ್ಯಾಘ್ರ ಚಾಮುಂಡಿ ಗುಡಿಯಿದೆ.
ಉಡುಪಿಯ ಬಸ್ ನಿಲ್ದಾಣದಿಂದ ಕೇವಲ ಒಂದೂವರೆ ಕಿ.ಮೀ. ದೂರದಲ್ಲಿದೆ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನ.
ವಿಳಾಸ
ಶ್ರೀ ಕಡಿಯಾಳಿ ಮಹಿಷಮರ್ಧಿನಿ ದೇವಾಲಯ,
ಕಡಿಯಾಳಿ, ಉಡುಪಿ - 576102
ದೂ: 0820 - 2521937
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications