Kundapur-Talapady Highway: ಕುಂದಾಪುರ-ತಲಪಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಬಿಡುಗಡೆಯಾದ ಹಣವೆಷ್ಟು?
Kundapur-Talapady National Highway: ರಾಜ್ಯದಲ್ಲಿ ಈಗಾಗಲೇ ಹಲವೆಡೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದೀಗ ಕುಂದಾಪುರ-ತಲಪಾಡಿ ವರೆಗೆ ರಾಷ್ಟ್ರೀಯ ಹೆದ್ದಾರಿ 66 ಅನ್ನು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಎನ್ಎಚ್ಎಐ ಮುಂದಾಗಿದೆ. ಹಾಗಾದರೆ, ಎಷ್ಟು ಬಿಡುಗಡೆಯಾಗಿದೆ ಹಾಗೂ ಇದರಿಂದ ಯಾವೆಲ್ಲ ಪ್ರಯೋಜನೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕುಂದಾಪುರ-ತಲಪಾಡಿ ವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ 135 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರೂಪಿಸಿದೆ. ಕುಂದಾಪುರದಿಂದ ಸುರತ್ಕಲ್ ಎನ್ಐಟಿಕೆ ಮತ್ತು ನಂತೂರಿನಿಂದ ತಲಪಾಡಿ ನಡುವೆ ಮಾತ್ರ ಈ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. 13 ಕಡೆಗಳಲ್ಲಿ ಸರ್ವಿಸ್ ರಸ್ತೆಗಳು, 7 ಕಡೆ ಪಾದಚಾರಿ ಮೇಲ್ಸೇತುವೆ ಮತ್ತು ಕಟಪಾಡಿ ಜಂಕ್ಷನ್ನಲ್ಲಿ ವಾಹನ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಈಗಾಗಲೇ ಸಚಿವಾಲಯದಿಂದ ಅನುಮೋದನೆ ದೊರೆತಿದೆ.

2010ರಲ್ಲಿ ಆರಂಭಗೊಂಡು 8 ವರ್ಷಗಳ ಕಾಲ ನಡೆದು, ಪೂರ್ಣಗೊಂಡಿರುವ ಚತುಷ್ಪಥ ಯೋಜನೆ ಕೆಲವೆಡೆ ಇನ್ನೂ ಸರ್ವಿಸ್ ರಸ್ತೆ ಆಗಿಲ್ಲ. ಕೆಲವೆಡೆ ಜಂಕ್ಷನ್ಗಳಿದ್ದು, ಹೆದ್ದಾರಿಯಲ್ಲೇ ಅಕ್ಕಪಕ್ಕದ ಊರಿಂದ ಬರುವ-ಹೋಗುವ ವಾಹನಗಳಿಗೆ ತೊಡಕು ಆಗುತ್ತಿದೆ. ಅಪಘಾತಗಳೂ ಕೂಡ ನಡೆಯುತ್ತಿವೆ. ಮಧ್ಯೆ ಬಿಟ್ಟು ಹೋಗಿರುವ 13 ಕಡೆ ಸುಮಾರು 8 ಕಿ.ಮೀಟರ್ನಷ್ಟು ಹೊಸದಾಗಿ ಸರ್ವಿಸ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.
ನೀರಿನ ಕೊಳವೆ, ವಿದ್ಯುತ್ ಕಂಬ, ಟೆಲಿಕಾಂ ಕೇಬಲ್, ಮರಗಳು, ಕಟ್ಟಡಗಳ ತೆರವು ಕಾರ್ಯ ಆಗಬೇಕಿದೆ. ಹೆಚ್ಚಿನ ಕಡೆ ಸಾರ್ವಜನಿಕರು ಹೆದ್ದಾರಿ ಜಾಗ ಅತಿಕ್ರಮಣ ಮಾಡಿದ್ದಾರೆ. ಕೆಲವರು ಪರಿಹಾರ ಪಡೆದಿದ್ದರೂ, ಭೂಮಿ ಬಿಟ್ಟು ಕೊಟ್ಟಿಲ್ಲ. ಕೆಲವೆಡೆ ಅಧಿಕಾರಿಗಳು ಪರಿಹಾರ ನೀಡಿಲ್ಲ. ಅಂತಹವರ ದಾಖಲೆ ಪರಿಶೀಲಿಸಲು ಕಚೇರಿಗೆ ಕರೆಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಈ ಕಾಮಗಾರಿಗಳನ್ನು ನಡೆಸಲು ಟೆಂಡರ್ ಕರೆಯಲಾಗಿದೆ. ಎಲ್ಲಾ ಭೂಸ್ವಾಧೀನ ನಡೆದ ಬಳಿಕ ಕಾಮಗಾರಿ ಆರಂಭ ಆಗಲಿದೆ. ಭೂಸ್ವಾಧೀನ ನಡೆಸದೆ, ಕೋರ್ಟ್ ತಡೆಯಾಜ್ಞೆ ಮತ್ತಿತರ ವಿವಾದದಿಂದ ಕಾಮಗಾರಿ ವಿಳಂಬ ಆದರೆ, ಗುತ್ತಿಗೆದಾರರು ನಷ್ಟದ ಭಯದಿಂದ ಕಾಮಗಾರಿ ಆರಂಭಿಸುತ್ತಿಲ್ಲ. ಹೆಜಮಾಡಿ ಟೋಲ್ ಪ್ಲಾಝಾ ಬಳಿ ಹೆದ್ದಾರಿ ಜಾಗದಲ್ಲಿ ಅಂಗಡಿ ತೆರೆದು, ಅದನ್ನು ತೆರವು ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.
ಪಣಂಬೂರು ಆರ್ಒಬಿ ಪಣಂಬೂರು ಎಂಸಿಎಫ್ ಬಳಿ ಗೂಡ್ಸ್ ರೈಲು ಸಂಚಾರದಿಂದ ಹೆದ್ದಾರಿ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದು, ಇಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾಪ ಸಲ್ಲಿಸಿದ್ದು, ಪ್ರಾಥಮಿಕ ಹಂತದಲ್ಲೇ ಇದೆ. ಇದರ ಮೊತ್ತವನ್ನು ಎನ್ಎಂಪಿಎ ಪಾವತಿ ಮಾಡಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications