ಮೈಸೂರಿಗೆ 50 ಹೊಸ ಕೆಎಸ್ಆರ್ಟಿಸಿ ಬಸ್ ನೀಡಿದ ಸರ್ಕಾರ
ಮೈಸೂರು, ಜೂನ್ 02: ಮೈಸೂರು ನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ನಗರ ಸಾರಿಗೆ ಸೇವೆಯನ್ನು ನೀಡುತ್ತಿದೆ. ಈ ಸೇವೆಗೆ ಅನುಕೂಲವಾಗಲು ರಾಜ್ಯ ಸರ್ಕಾರ 50 ಹೊಸ ಬಸ್ಗಳನ್ನು ನೀಡಿದೆ.
ನಗರದ ಹಲವು ಮಾರ್ಗಗಳಲ್ಲಿ ಸಂಚಾರ ನಡೆಸುವ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ಗಳು ಹಳೆಯದಾಗಿವೆ. ಕೆಎಸ್ಆರ್ಟಿಸಿ ನಿಯಮದಂತೆ ಬಸ್ಗಳನ್ನು ಬದಲಾವಣೆ ಮಾಡಬೇಕಿದೆ. ಆದ್ದರಿಂದ ಹೊಸ ಬಸ್ ಮಂಜೂರು ಮಾಡಲಾಗಿದೆ.

ಮಹಿಳೆಯರ ಉಚಿತ ಬಸ್ ಪ್ರಯಾಣ 'ಶಕ್ತಿ' ಯೋಜನೆ ಆರಂಭವಾದ ಬಳಿಕ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಅಧಿಕವಾಗುತ್ತಿದೆ. ಆದ್ದರಿಂದ ಹಳೆಯ ಬಸ್ಗಳನ್ನು ಸ್ಕ್ರಾಪ್ ಮಾಡಿ, ಆ ಮಾರ್ಗದಲ್ಲಿ ಹೊಸ ಬಸ್ಗಳನ್ನು ಓಡಿಸಲಾಗುತ್ತದೆ. ಇದಕ್ಕಾಗಿ 50 ಬಸ್ಗಳನ್ನು ಮಂಜೂರು ಮಾಡಲಾಗಿದೆ.
ಕಡಿಮೆ ಬಸ್ಗಳಿವೆ ಎಂಬ ಆರೋಪ: ಮೈಸೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈಗ ಹಳೆಯ ಬಸ್ಗಳನ್ನು ಸ್ಕ್ರಾಪ್ ಮಾಡಿದರೆ ಮತ್ತಷ್ಟು ಬಸ್ಗಳ ಕೊರತೆ ಉಂಟಾಗುತ್ತಿತ್ತು. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ನಗರಕ್ಕೆ 50 ಹೊಸ ಬಸ್ಗಳನ್ನು ಮಂಜೂರು ಮಾಡಿಸಿದ್ದಾರೆ.
ಹಂತ-ಹಂತವಾಗಿ 5 ದಿನಗಳಿಂದ ಹೊಸ ಬಸ್ಗಳು ಮೈಸೂರು ನಗರಕ್ಕೆ ಆಗಮಿಸಿ ವಿಭಾಗೀಯ ಕಛೇರಿಯನ್ನು ಸೇರಿಕೊಳ್ಳುತ್ತಿವೆ. ಪ್ರಯಾಣಿಕರ ಸಂಚಾರಕ್ಕೆ ಬಸ್ಗಳು ಸಿದ್ಧವಾಗಿದ್ದು, ಹೊಸ ಬಸ್ಗಳು ಕೆಲವೇ ದಿನಗಳಲ್ಲಿ ರಸ್ತೆಗೆ ಇಳಿಯಲಿವೆ.
ಆರು ತಿಂಗಳ ಹಿಂದೆ ಟಾಟಾ ಕಂಪನಿಯ 5 ಬಸ್ಗಳನ್ನು ಮೈಸೂರು ನಗರದಲ್ಲಿ ಓಡಿಸಲಾಗಿತ್ತು. ಈ ಬಸ್ಗಳ ಕಾರ್ಯಕ್ಷಮತೆ, ಪ್ರಯಾಣಿಕರ ಸಂಖ್ಯೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಿದ ಬಳಿಕ ಹೊಸ ಬಸ್ಗಳನ್ನು ತರಿಸಲಾಗಿದೆ.
ಬಿಳಿ ಮತ್ತು ಆಕಾಶ ನೀಲಿ ಬಣ್ಣದ ಬಸ್ಗಳು ಇದಾಗಿದ್ದು, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಂಚಾರ ನಡೆಸುತ್ತವೆ. ಗ್ರಾಮಾಂತರ ಭಾಗದಲ್ಲಿ 2+3 ಆಸನ ಇರುವ ಬಸ್, ನಗರದಲ್ಲಿ 2+2 ಆಸನ ಇರುವ ಬಸ್ಗಳನ್ನು ಓಡಿಸಲಾಗುತ್ತದೆ.
ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಕೆಲವು ಮಾರ್ಪಾಡುಗಳನ್ನು ಮಾಡಿ ಕೆಲವೇ ದಿನಗಳಲ್ಲಿ ಹೊಸ ಬಸ್ಗಳ ಸಂಚಾರವನ್ನು ಆರಂಭಿಸಲಾಗುತ್ತದೆ. ಜೂನ್ ತಿಂಗಳ ಅಂತ್ಯದಲ್ಲಿ ನಗರ ಸಾರಿಗೆ ಸೇವೆಗಾಗಿ ಇನ್ನಷ್ಟು ಬಸ್ಗಳು ಮೈಸೂರು ನಗರಕ್ಕೆ ಆಗಮಿಸಲಿವೆ.
ಈ ಹೊಸ ಬಸ್ಗಳಲ್ಲಿ ಎಲೆಕ್ಟ್ರಾನಿಕ್ ಬೋರ್ಡ್ಗಳು ಇರುವುದಿಲ್ಲ. ಕೈ ಬರಹದಲ್ಲೇ ಬರೆದ ಮಾರ್ಗ ಸಂಖ್ಯೆ, ಅಕ್ಷರಗಳು ಇರುತ್ತವೆ. ಎಲೆಕ್ಟ್ರಾನಿಕ್ ಬೋರ್ಡ್ಗಳು ಆಗಾಗ ಕೆಟ್ಟು ಜನರ ಆಕ್ರೋಶಕ್ಕೆ ಗುರಿಯಾಗುವುದು ತಪ್ಪಿಸಲು ಹಳೆಯ ಬೋರ್ಡ್ಗಳ ಮಾದರಿಯನ್ನು ಅನುಸರಿಸಲಾಗುತ್ತಿದೆ.
ಯಾವ ಮಾರ್ಗದ ಹಳೆ ಬಸ್ಗಳನ್ನು ಸ್ಕ್ರಾಪ್ ಮಾಡಿ ಹೊಸ ಬಸ್ಗಳನ್ನು ಪರಿಚಯಿಸಬೇಕು?. ಯಾವ ಹೊಸ ಮಾರ್ಗದಲ್ಲಿ ಹೊಸ ಬಸ್ಗಳನ್ನು ಓಡಿಸಬೇಕು ಎಂದು ವಿಭಾಗೀಯ ಕಛೇರಿ ತೀರ್ಮಾನ ಮಾಡಿ ಬಸ್ ಸಂಚಾರವನ್ನು ಆರಂಭಿಸಲಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications