ಚಾಲಕನಿಲ್ಲದೆ ಜಮ್ಮುವಿಂದ ಪಂಜಾಬ್ಗೆ ಇದ್ದಕ್ಕಿದ್ದಂತೆ ಓಡಿದ ಚಿಕುಪುಕು!
ಚಂಡೀಗಢ ಫೆಬ್ರವರಿ 26: ರೈಲು ಚಾಲಕ ಹ್ಯಾಂಡ್ ಬ್ರೇಕ್ ಹಾಕದೆ ರೈಲಿನಿಂದ ಕೆಳಗಿಳಿದ ಪರಿಣಾಮ ಗೂಡ್ಸ್ ರೈಲೊಂದು ಯಾವುದೇ ಚಾಲಕನಿಲ್ಲದೆ ತಂತಾನೇ ಬರೋಬ್ಬರಿ 70 ಕಿ.ಮೀ ದೂರ ಚಲಿಸಿದ ಅಚ್ಚರಿಯ ಘಟನೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್ನಲ್ಲಿ ನಡೆದಿದೆ. ಕೊನೆಗೆ ಮರಳು ಚೀಲ ಇಟ್ಟು ರೈಲು ನಿಲ್ಲಿಸಲಾಗಿದೆ.
ಜಮ್ಮುವಿನಿಂದ ಪಂಜಾಬ್ಗೆ ತೆರಳುತ್ತಿದ್ದ ಸುಮಾರು 53 ವ್ಯಾಗನ್ಗಳಿದ್ದ ರೈಲು ಗಂಟೆಗೆ ನೂರು ಕಿ.ಮೀ ವೇಗದಲ್ಲಿ ಚಲಿಸಿದೆ. ರೈಲು ಚಲಿಸುತ್ತಿರುವುದನ್ನು ಕಂಡ ಚಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಭಾನುವಾರ ರೈಲು ತಂತಾನೇ ಚಲಿಸಿದ ತಕ್ಷಣ ಅಧಿಕಾರಿಗಳ ಗಮನಕ್ಕೆ ಬಂದಿದೆಯಾದರೂ ಅಷ್ಟು ವೇಗದಲ್ಲಿದ್ದ ರೈಲನ್ನು ನಿಲ್ಲಿಸುವುದು ಸವಾಲಿನ ಕೆಲಸವಾಗಿತ್ತು. ಕೊನೆಗೆ ರೈಲು 70 ಕಿ.ಮೀ ಕ್ರಮಿಸಿದ ಬಳಿಕ ಹಳಿಯಲ್ಲಿ ಮರಳಿನ ಚೀಲಗಳನ್ನು ಇಟ್ಟು ರೈಲನ್ನು ನಿಲ್ಲಿಸಲಾಗಿದೆ.

ತನ್ಮೂಲಕ ರೈಲ್ವೆ ಇಲಾಖೆಯ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಎದುರಿನ ಹಳಿಯಲ್ಲಿ ಬೇರೆ ಯಾವುದೇ ರೈಲು ಇರಲಿಲ್ಲ, ಇಲ್ಲದಿದ್ದರೆ ದೊಡ್ಡ ಅಪಘಾತ ಸಂಭವಿಸಬಹುದಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರೈಲ್ವೇ ಈ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಕಾರಣಗಳನ್ನು ಕಂಡುಹಿಡಿಯಲು ಫಿರೋಜ್ಪುರದಿಂದ ತಂಡವನ್ನು ಕಳುಹಿಸಲಾಗಿದೆ.
ಮೊದಲ ಸಿಬ್ಬಂದಿ ತೆರಳಿದಾಗ ಮತ್ತು ಎರಡನೇ ಸಿಬ್ಬಂದಿ ಅಧಿಕಾರ ವಹಿಸಿಕೊಂಡಾಗ ರೈಲಿನ ಕ್ಯಾಬಿನ್ ಸುರಕ್ಷಿತವಾಗಿರಲಿಲ್ಲ ಎಂದು ಮೇಲ್ನೋಟಕ್ಕೆ ತೋರುತ್ತದೆ ಎಂದು ರೈಲ್ವೆ ಮೂಲಗಳು ಹೇಳುತ್ತವೆ. ಗೂಡ್ಸ್ ರೈಲು ರೈಲ್ವೇ ನಿರ್ಮಾಣಕ್ಕೆ ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಏನಿದು ಘಟನೆ?
ಜಮ್ಮುವನಿಂದ ಪಂಜಾಬ್ಗೆ ಚಲಿಸುತ್ತಿದ್ದ ರೈಲು, ಚಾಲಕನ ಬದಲಾವಣೆಗಾಗಿ ಜಮ್ಮುವಿನ ಕಠವಾ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 7.25 ರ ಸುಮಾರಿಗೆ ನಿಂತಿತ್ತು. ಗೂಡ್ಸ್ ರೈಲು ಸಂಖ್ಯೆ 14806 ಆರ್ ರೈಲು ನಿಲ್ಲಿಸಿದ ಚಾಲಕ ಅದರಿಂದ ಕೆಳಗಿಳಿವ ವೇಳೆಗೆ ಹ್ಯಾಂಡ್ ಬ್ರೇಕ್ ಹಾಕಲು ಮರೆತುಬಿಟ್ಟಿದ್ದಾನೆ.

ಹೀಗಾಗಿ ಇಳಿಜಾರಿದ್ದ ಕಾರಣ ರೈಲು ಚಲಿಸಲು ಪ್ರಾರಂಭಿಸಿದೆ. ಈ ವೇಳೆ ಲೋಕೋ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ಯಾರೂ ಕೂಡ ರೈಲಿನಲ್ಲಿ ಇರಲಿಲ್ಲ. ಬಳಿಕ 9 ಗಂಟೆ ವೇಳೆ ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಮರಳಿನ ಚೀಲಗಳನ್ನು ಇಟ್ಟು ರೈಲನ್ನು ನಿಲ್ಲಿಸಲಾಗಿದೆ. ಚಾಲಕನಿಲ್ಲದೇ ರೈಲು ಓಡುತ್ತಿರುವ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆ ಬಗ್ಗೆ ರೈಲ್ವೆ ಇಲಾಖೆ ತನಿಖೆಗೆ ಆದೇಶಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications