Amarnath Yatra 2024: ಜೂನ್ 29ರಿಂದ ಅಮರನಾಥ ಯಾತ್ರೆ ಆರಂಭ- ನಾಳೆಯಿಂದಲೇ ಬುಕ್ ಮಾಡಿ
ಲೋಕಸಭೆ ಚುನಾವಣೆಯ ಸಂಭ್ರಮದ ನಡುವೆ ಅಮರನಾಥ ಯಾತ್ರೆಗೆ ಸಂಬಂಧಿಸಿದಂತೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಈ ವರ್ಷ ಅಮರನಾಥ ಯಾತ್ರೆ ಆರಂಭವಾಗುವ ದಿನಾಂಕ ಪ್ರಕಟವಾಗಿದೆ. ಜೊತೆಗೆ ಇಲ್ಲಿಗೆ ಭೇಟಿ ನೀಡಲು ಯಾತ್ರಿಕರು ನೋಂದಣಿ ಮಾಡಿಕೊಳ್ಳುವ ದಿನಾಂಕ ಕೂಡ ಪ್ರಕಟಿಸಲಾಗಿದೆ.
ಹಿಮಾಲಯದ ಅಮರನಾಥ ಯಾತ್ರೆ ಬಹಳ ಹಳೆಯದು ಮತ್ತು ಪವಿತ್ರವಾದದ್ದು. ಇಲ್ಲಿ ಸುಮಾರು 5000 ವರ್ಷಗಳಷ್ಟು ಹಳೆಯದಾದ ಶಿವಲಿಂಗವಿದ್ದು ಈ ಪರ್ವತ ಶಿಖರದ ಸಮೀಪದಲ್ಲಿರುವ ಅಮರನಾಥ ಗುಹೆಯು ಹಿಂದೂ ಧರ್ಮದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರನಾಥ ಯಾತ್ರೆ ಕೈಗೊಳ್ಳುತ್ತಾರೆ. ಇದನ್ನು ತೀರ್ಥಯಾತ್ರೆ ಎಂದು ಪರಿಗಣಿಸಲಾಗಿದೆ.

ಅಮರನಾಥ ಯಾತ್ರೆ ಯಾವಾಗ ಆರಂಭ?
ಈ ವರ್ಷದ ಶ್ರೀ ಬಾಬಾ ಅಮರನಾಥ ಯಾತ್ರೆಯು ಜೂನ್ 29 ರಿಂದ ಪ್ರಾರಂಭವಾಗುತ್ತಿದೆ. ಇದು ರಕ್ಷಾಬಂಧನ ದಿನದವರೆಗೆ ಇರಲಿದೆ. ಅಂದರೆ ಆಗಸ್ಟ್ 19 ರಂದು ಯಾತ್ರೆ ಕೊನೆಗೊಳ್ಳುತ್ತದೆ. ಹೀಗಾಗಿ ಜುಲೈ ಸಂಪೂರ್ಣ ತಿಂಗಳು ಹಾಗೂ ಆಗಸ್ಟ್ 19ರವರೆಗೆ ಭಕ್ತರು ಅಮರನಾಥನ ಯಾತ್ರೆ ಮಾಡಬಹುದು. ಇದಕ್ಕಾಗಿ ಮುಂಚಿತವಾಗಿ ಬುಕ್ ಮಾಡಿಕೊಳ್ಳಬೇಕಾಗುತ್ತದೆ.
ಬುಕ್ಕಿಂಗ್ ದಿನಾಂಕ ಯಾವಾಗ ಆರಂಭ?
ಇನ್ನೂ ಅಮರನಾಥ ಯಾತ್ರೆಗೆ ಹೋಗಲು ಬಯಸುವವರು ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬೇಕು. ಆ ಬಗ್ಗೆ ಮಾಹಿತಿಯನ್ನು ಅಮರನಾಥ ಪುಣ್ಯಕ್ಷೇತ್ರ ಮಂಡಳಿ ಹಂಚಿಕೊಂಡಿದೆ. ಮಾಹಿತಿ ಪ್ರಕಾರ ಅಮರನಾಥ ಯಾತ್ರೆ 2024 ಜೂನ್ 29, 2024 ರಿಂದ ಪ್ರಾರಂಭವಾಗಲಿದೆ. 19 ಆಗಸ್ಟ್ 2024 ರಂದು ಮುಕ್ತಾಯಗೊಳ್ಳುತ್ತದೆ. ಇಲ್ಲಿಗೆ ಭೇಟಿ ನೀಡುವ ಭಕ್ತರಿಗಾಗಿ ಮುಂಗಡ ನೋಂದಣಿಯು 15 ಏಪ್ರಿಲ್ 2024 ರಿಂದ ಪ್ರಾರಂಭವಾಗುತ್ತದೆ. ಹೀಗಾಗಿ ಆಸಕ್ತರು ಏಪ್ರಿಲ್ 15 ಅಂದರೆ ನಾಳೆಯಿಂದ ನೊಂದಣಿ ಮಾಡಿಕೊಳ್ಳಬಹುದಾಗಿದೆ.

ಹಿಮಾಲಯದ ಅಮರನಾಥ ಯಾತ್ರೆ
ಅಮರನಾಥ ಧಾಮವು ಹಿಮಾಲಯದ ದುರ್ಗಮ ಪರ್ವತ ಶ್ರೇಣಿಗಳ ನಡುವೆ ಇದೆ. ಭಾರತೀಯ ಸಂಸ್ಕೃತಿಯ ಸುಪ್ರಸಿದ್ಧ ತೀರ್ಥಯಾತ್ರೆಗಳಲ್ಲಿ ಬಾಬಾ ಅಮರನಾಥನ ತೀರ್ಥಯಾತ್ರೆಗೆ ಬಹುಳ ಮಹತ್ವದ ಸ್ಥಾನವಿದೆ. ಹೀಗಾಗಿ ಪ್ರತೀ ವರ್ಷವೂ ಲಕ್ಷಾಂತರ ಭಕ್ತರು ಇಲ್ಲಿ ಭೇಟಿ ನೀಡುತ್ತಾರೆ.
ಗುಹೆಯಲ್ಲಿ ನಿರ್ಮಿಸಲಾದ ಶಿವಲಿಂಗವನ್ನು ನಿಜವಾದ ಹೃದಯದಿಂದ ನೋಡುವ ಭಕ್ತನು ಹುಟ್ಟು ಮತ್ತು ಮರಣದ ಬಂಧನದಿಂದ ಮುಕ್ತನಾಗುತ್ತಾನೆ ಎನ್ನುವ ನಂಬಿಕೆಯಿದೆ. ಶಿವನು ಈ ಗುಹೆಯಲ್ಲಿ ತಾಯಿ ಪಾರ್ವತಿಗೆ ಅಮರತ್ವದ ರಹಸ್ಯವನ್ನು ಹೇಳಿದ್ದಾನೆ, ಆದ್ದರಿಂದ ಈ ಗುಹೆಯನ್ನು ಅಮರನಾಥ ಗುಹೆ ಎಂದು ಕರೆಯಲಾಗುತ್ತದೆ.
ಹಿಮದಿಂದ ಶಿವಲಿಂಗವು ರಚನೆಯಾಗುವುದರಿಂದ ಇದನ್ನು 'ಬಾಬಾ ಬರ್ಫಾನಿ'ಎಂದೂ ಕರೆಯುತ್ತಾರೆ. ಚಂದ್ರನ ಬೆಳಕನ್ನು ಅವಲಂಬಿಸಿ ಗಾತ್ರದಲ್ಲಿ ಹುಗ್ಗುವ ಮತ್ತು ಕುಗ್ಗುವ ಪ್ರಪಂಚದ ಏಕೈಕ ಶಿವಲಿಂಗ ಇದಾಗಿದೆ. ಪ್ರತಿ ವರ್ಷ ಶ್ರಾವಣಾ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಇಲ್ಲಿನ ಶಿವಲಿಂಗವು ಗಾತ್ರದಲ್ಲಿ ಬೆಳೆಯುತ್ತದೆ ಮತ್ತು ಅದರ ನಂತರ ಮುಂದಿನ ಅಮಾವಾಸ್ಯೆಯವರೆಗೆ ಗಾತ್ರದಲ್ಲಿ ಗಮನಾರ್ಹವಾಗಿ ಕಡಿಮೆಯಾಗುತ್ತಾ ಹೋಗುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications