
ಚಾರ್ಧಾಮ್ ಯಾತ್ರೆಗೆ ಸಹಾಯಧನ; ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರು, ಡಿಸೆಂಬರ್ 06; ಕರ್ನಾಟಕ ಸರ್ಕಾರ ಮಾನಸ ಸರೋವರ ಯಾತ್ರೆಯಂತೆಯೇ ಚಾರ್ಧಾಮ್ ಯಾತ್ರೆಗೆ ಸಹ ಸಹಾಯಧನವನ್ನು ನೀಡಲಿದೆ. ಈ ಸಹಾಯಧನ ಪಡೆಯಲು ಆಸಕ್ತರು ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸಬೇಕಿದೆ.
ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ. 2022-23ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ. 20,000ಗಳಂತೆ ಸರ್ಕಾರದ ಸಹಾಯಧನವನ್ನು ನೀಡಲಾಗುತ್ತದೆ.
ಕೈಲಾಸ ಮಾನಸ ಸರೋವರ ಯಾತ್ರೆ; ಸಬ್ಸಿಡಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಮೂಲಕ ಅಥವ ಖುದ್ದಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅನುದಾನದ ಲಭ್ಯತೆಗೆ ಅನುಗುಣವಾಗಿಅನುದಾನವನ್ನು ವಿತರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಡಿಸೆಂಬರ್ 31ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
Tirupati; ತಿಮ್ಮಪ್ಪನ ಭಕ್ತರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ
ಅರ್ಜಿ ಹಾಕಲು ಅರ್ಹತೆಗಳು: ಅರ್ಜಿಗಳನ್ನು ಸಲ್ಲಿಸುವ ಯಾತ್ರಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರತಕ್ಕದ್ದು. 45ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಶಿರಸಿ, ಕಾರವಾರದಿಂದ 2 ದಿನದ ಪ್ಯಾಕೇಜ್ ಟೂರ್; ದರ, ವೇಳಾಪಟ್ಟಿ
ಯಾತ್ರಾರ್ಥಿಯು ಕಡ್ಡಾಯವಾಗಿ, ಬದರಿನಾಥ್, ಕೇದಾರ್ನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಕ್ಷೇತ್ರಗಳಿಗೆ ಭೇಟಿ ನೀಡಿರಬೇಕು. ಯಾತ್ರಾರ್ಥಿಯು ಆನ್ಲೈನ್ ಮತ್ತು ಖುದ್ದಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಯಾತ್ರಾರ್ಥಿ ಈ ಲಿಂಕ್ ಬಳಕೆ ಮಾಡಬೇಕು. http://karnemaka.kar.nic.in/yatrabenefit

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಯಾತ್ರಾರ್ಥಿ ಅಪ್ಲೋಡ್ ಮಾಡಿರುವ ದಾಖಲೆಗಳ ಪ್ರತಿಗಳನ್ನು ಖುದ್ದಾಗಿ ಅಥವ ಅಂಚೆ ಮೂಲಕ ಕಛೇರಿಗೆ ಸಲ್ಲಿಸತಕ್ಕದ್ದು.
ಒದಗಿಸಬೇಕಾದ ದಾಖಲೆಗಳು
* ಒಂದು ಭಾವಚಿತ್ರ (ಪಾಸ್ಪೋರ್ಟ್ ಅಳತೆ)
* ಆಧಾರ್ ಗುರುತಿನ ಚೀಟಿ
* ಚುನಾವಣಾ ಗುರುತಿನ ಚೀಟಿ
* ರದ್ದು ಪಡಿಸಿದ ಚೆಕ್ ಹಾಳೆ
* ಪಾಸ್ ಪುಸ್ತಕದ ಮೊದಲ ಪುಟದ ನಕಲು ಪ್ರತಿ
* 20 ರೂ. ಗಳ ಛಾಪಾ ಕಾಗದದಲ್ಲಿ ಸ್ಮ-ದೃಢೀಕರಣ
* ಯಾತ್ರೆ ಕೈಗೊಳ್ಳುವ ಮುನ್ನ ನೋಂದಾಯಿಸಿಕೊಂಡ ಪ್ರತಿ ಪತ್ರ
* ಯಾತ್ರೆ ಮುಗಿದ ನಂತರ ಉತ್ತರಖಾಂಡ ಪುವಾಸೋದ್ಯಮ ಇಲಾಖೆಯ ವತಿಯಿಂದ ನೀಡಲಾದ ಪ್ರಮಾಣ ಪತ್ರ (ಕಡ್ಡಾಯವಾಗಿ 4 ಧಾಮಗಳು ನಮೂದಾಗಿರತಕ್ಕದ್ದು).
ಆಸಕ್ತರು ಹೆಚ್ಚಿನ ವಿವರಗಳಿಗೆ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.
ಹಿಂದೂಗಳ ಕನಸು; ಜೀವನದಲ್ಲಿ ಒಮ್ಮೆಯಾದರೂ ಪವಿತ್ರವಾದ ಚಾರ್ಧಾಮ್ ಯಾತ್ರೆಯನ್ನು ಕೈಗೊಳ್ಳಬೇಕು ಎಂಬುದು ಹಿಂದೂಗಳ ಕನಸು. ಉತ್ತರಾಖಂಡದ 4 ಪವಿತ್ರ ಹಿಂದೂ ದೇವಾಲಯಗಳಿಗೆ ಭೇಟಿ ನೀಡುವುದನ್ನು ಚಾರ್ಧಾಮ್ ಯಾತ್ರೆ ಎಂದು ಕರೆಯಲಾಗುತ್ತದೆ.
ಚಾರ್ಧಾಮ್ ಯಾತ್ರೆಯಲ್ಲಿ ಯಮನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿವೆ. ಈ ದೇವಾಲಯಗಳನ್ನು ತಮ್ಮ ಜೀವಮಾನದಲ್ಲಿ ಒಮ್ಮೆಯಾದರೂ ಈ ದೇವಾಲಯಗಳನ್ನು ದರ್ಶನ ಮಾಡಿದರೆ ಮೋಕ್ಷ ಸಿಗುತ್ತದೆ ಎಂಬುದು ನಂಬಿಕೆಯಾಗಿದೆ.
ಯಾತ್ರಾರ್ಥಿಗಳು ಚಾರ್ಧಾಮ್ ಯಾತ್ರೆಯನ್ನು ಯಮನೋತ್ರಿಯಿಂದ ಆರಂಭಿಸುತ್ತಾರೆ. ಯಮುನಾ ನದಿಯ ಉಗಮ ಸ್ಥಾನವಾದ ಯಮನೋತ್ರಿ ಹಿಮಾಲಯದ ಅತಿ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಚಾರ್ಧಾಮ್ಗಳ ಪೈಕಿ ಅತ್ಯಂತ ಮೇಲ್ಭಾಗದಲ್ಲಿ ಇದು ಇದೆ.