ಪ್ರವಾಸಿಗರೇ ಎಚ್ಚರ; ಗೋವಾ ಪ್ರವಾಸೋದ್ಯಮದಲ್ಲಿ ಹೊಸ ಬದಲಾವಣೆಗಳು
ಪಣಜಿ, ನ.13: ಕೊರೊನಾ ಸಾಂಕ್ರಾಮಿಕದ ನಂತರ ಗೋವಾದಲ್ಲಿ ಪ್ರವಾಸೋದ್ಯಮ ಸೀಸನ್ ಉತ್ತುಂಗಕ್ಕೇರಿದೆ. ಹೆಚ್ಚುತ್ತಿರುವ ಒತ್ತಡದಲ್ಲಿಯೂ ಸರ್ಕಾರವು ಪ್ರಪಂಚದಾದ್ಯಂತದ ಪ್ರವಾಸಿಗರನ್ನು ಸ್ವಾಗತಿಸಲು ಸಜ್ಜಾಗಿದೆ.
ಇದರ ನಡುವೆಯೇ ಜನಜಂಗುಳಿಯಿಂದ ಕೂಡಿರುವ ಜನಪ್ರಿಯ ತಾಣಗಳು ಮತ್ತು ಕಡಲತೀರಗಳಲ್ಲಿ ಕಸವನ್ನು ಎಸೆಯುವುದು, ಬೀಚ್ನಲ್ಲಿ ಮದ್ಯಪಾನ ಮಾಡುವುದು, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದು ಮತ್ತು ಬೀದಿಗಳಲ್ಲಿ ಅಡುಗೆ ಮಾಡುವುದು ಸೇರಿದಂತೆ ಹಲವು ಕೃತ್ಯಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸಿದ್ಧರಾಗಿದ್ದಾರೆ.
ಪ್ರವಾಸೋದ್ಯಮವು ರಾಜ್ಯದ ಆದಾಯದ ಪ್ರಾಥಮಿಕ ಮೂಲಗಳಲ್ಲಿ ಒಂದಾಗಿದ್ದರೂ, ಕೂಡ ಈ ಬಾರಿ ಜನಸಂದಣಿಯನ್ನು ನಿಯಂತ್ರಣದಲ್ಲಿಡಲು ಅಕ್ರಮಗಳನ್ನು ತಡೆಯಲು ದಂಡ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ.
ಜನಪ್ರಿಯ ಸ್ಥಳಗಳು ಮತ್ತು ಕಡಲತೀರಗಳಲ್ಲಿ ಅವ್ಯವಸ್ಥೆಯನ್ನು ಮಾಡುವವರ ವಿರುದ್ಧ ಕಾನೂನಿನ ಪ್ರಕಾರ ದಂಡ ವಿಧಿಸುವ ನಿಯಮಗಳನ್ನು ಜಾರಿಗೆ ತರಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ರೋಹನ್ ಖೌಂಟೆ ಮಾಹಿತಿ ನೀಡಿದ್ದಾರೆ.

ಬೀಚ್ಗಳಲ್ಲಿ ಅವ್ಯವಸ್ಥೆ ಮಾಡುವವರ ವಿರುದ್ಧ ಕಾನೂನು ಕ್ರಮ
"ನಾವು ಜವಾಬ್ದಾರಿಯುತ ಮತ್ತು ಸುಸ್ಥಿರ ಪ್ರವಾಸೋದ್ಯಮವನ್ನು ನಂಬುತ್ತೇವೆ. ಆದರೆ ಈಗ ಕೆಲವು ಹೊಸ ಅಭ್ಯಾಸಗಳು ಜನರಿಗೆ ಅಂಟಿಕೊಂಡಿವೆ. ಜನರು ಬೀಚ್ಗಳಿಗೆ ಬರುತ್ತಾರೆ ಅಲ್ಲಿಯೇ ಬಿಯರ್ ಬಾಟಲಿಗಳನ್ನು ಒಡೆಯುತ್ತಾರೆ. ಕೆಲವರು ಖಾಲಿ ಬಿಯರ್ ಬಾಟಲಿಗಳನ್ನು ಅಲ್ಲಿಯೇ ಬಿಟ್ಟು ಬಿಡುತ್ತಾರೆ. ಈ ಬಗ್ಗೆ ಇಲ್ಲಿಯವರೆಗೆ ಕಾನೂನು ಸ್ಪಷ್ಟವಾಗಿಲ್ಲ. ಆದ್ದರಿಂದ ನಾವು ಈ ಕೃತ್ಯಗಳ ಬಗ್ಗೆ ನಿರ್ದಿಷ್ಟಪಡಿಸುವ ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಈ ಕೆಲಸಗಳನ್ನು ತಕ್ಷಣವೇ ನಿಲ್ಲಿಸುವುದು ಮುಖ್ಯವಾಗಿದೆ. ಹೀಗಾಗಿ ನಾವು ಸಾಕಷ್ಟು ದಂಡ ವಿಧಿಸಿದ್ದೇವೆ'' ಎಂದು ಪ್ರವಾಸೋದ್ಯಮ ಸಚಿವ ರೋಹನ್ ಖೌಂಟೆ ಹೇಳಿದ್ದಾರೆ.

ಪ್ರವಾಸಿಗರಿಂದ ಬಸವಳಿದ ಪಣಜಿಯ ಜನರು!
ಪ್ರವಾಸಿಗರು ರಸ್ತೆಗಳು ಮತ್ತು ಫುಟ್ಪಾತ್ಗಳನ್ನು ಹಾಳುಮಾಡುವ ಮತ್ತು ಟ್ರಾಫಿಕ್ ಜಾಮ್ ಮಾಡುವ ಬಗ್ಗೆ ಪ್ರಮುಖವಾಗಿ ರಾಜಧಾನಿ ಪಣಜಿಯ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
''ತಮ್ಮ ವಸತಿ ಪ್ರದೇಶಗಳಲ್ಲಿ ಪಾರ್ಕಿಂಗ್, ಟ್ರಾಫಿಕ್ ಜಾಮ್, ಪ್ರವಾಸಿಗರ ಫೋಟೋ ಶೂಟ್ಗಳು, ಹಾಳಾದ ಫುಟ್ಪಾತ್ಗಳು, ಗುಂಡಿ ಬಿದ್ದ ರಸ್ತೆಗಳು ಮುಂತಾದ ವಿವಿಧ ಅಂಶಗಳಿಂದಾಗಿ ಪಣಜಿಯ ಜನರು ಕೋಪಗೊಂಡಿದ್ದಾರೆ, ಹತಾಶರಾಗಿದ್ದಾರೆ ಮತ್ತು ಒತ್ತಡದಲ್ಲಿದ್ದಾರೆ. ನಮ್ಮ ನಗರವು ಆರೋಗ್ಯಕರವಾಗಿಲ್ಲ. ದಿನದಿಂದ ದಿನಕ್ಕೆ ಅನಾರೋಗ್ಯಕ್ಕೆ ಒಳಗಾಗುತ್ತಿದೆ'' ಎಂದು ಪಣಜಿ ನಗರದ ಕಾರ್ಪೊರೇಷನ್ನ ಮಾಜಿ ಕೌನ್ಸಿಲರ್ ಪೆಟ್ರೀಷಿಯಾ ಪಿಂಟೋ ತಿಳಿಸಿದ್ದಾರೆ.

ಪ್ರವಾಸಿಗರಿಗೆ ಆದ್ಯತೆ, ಸ್ಥಳೀಯರ ಕಡೆಗಣನೆ
ಸರ್ಕಾರದ ಸಂಪೂರ್ಣ ಗಮನವು ಜೂಜು, ಮನರಂಜನೆ ಮತ್ತು ಆದಾಯದ ಮೇಲೆ ನಿಂತಿದೆ. ಸ್ಥಳೀಯರ ಹಣದಲ್ಲಿ ನಿರ್ಮಾಣವಾಗುವ ಪಾರ್ಕ್ಗಳಿಗೆ ಅವರ ಮಕ್ಕಳಿಗೆ ಆಟವಾಡಲು ಬಿಡುವುದಿಲ್ಲ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬಂದಿವೆ.
''ಪಣಜಿ ಒಂದು ವಿಶಿಷ್ಟ ಸಾಂಸ್ಕೃತಿಕ ಮತ್ತು ಪಾರಂಪರಿಕ ನಗರ ಎಂಬುದನ್ನು ಕಡೆಗಣಿಸಲಾಗಿದೆ. ಬದಲಾಗಿ, ಸಂಪೂರ್ಣ ಗಮನವು ಜೂಜು, ವಿನೋದ ಮತ್ತು ಮನರಂಜನೆಯ ಮೇಲೆ ಕೇಂದ್ರೀಕೃತವಾಗಿದೆ. ನಗರದ ನಾಗರಿಕರಿಗೆ ಟ್ರಾಫಿಕ್ನಿಂದ ಅವ್ಯವಸ್ಥೆ ಸಂಕಷ್ಟ ನೀಡುತ್ತಿದೆ. ನಮ್ಮ ಊರು ಪಾರಂಪರಿಕ ನಗರದಿಂದ ಕ್ಯಾಸಿನೊ ನಗರವಾಗಿ ಬದಲಾಗಿದೆ'' ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಗೋವಾ ಜಿಡಿಪಿಗೆ 16.43% ಕೊಡುಗೆ ನೀಡುವ ಪ್ರವಾಸೋದ್ಯಮ
ಗೋವಾದ ಪ್ರವಾಸೋದ್ಯಮ ಕ್ಷೇತ್ರವು ರಾಜ್ಯಕ್ಕೆ ದೊಡ್ಡ ಆದಾಯದ ಮೂಲವಾಗಿದೆ. ಗೋವಾದ ಪ್ರವಾಸೋದ್ಯಮವು ರಾಜ್ಯದ ಒಟ್ಟು ದೇಶೀಯ ಉತ್ಪನ್ನಕ್ಕೆ (GDP) ನೇರವಾಗಿ 16.43% ಕೊಡುಗೆ ನೀಡುತ್ತದೆ. ಅಧಿಕೃತ ಅಂದಾಜಿನ ಪ್ರಕಾರ ಈ ವಲಯದ ಮೇಲೆ ಅವಲಂಬಿತವಾಗಿರುವ ರಾಜ್ಯದ ಜನಸಂಖ್ಯೆಯ ಸುಮಾರು 35% ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications