ಆಷಾಢ ಶುಕ್ರವಾರ: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಈ ವಾಹನಗಳಿಗೆ ಮಾತ್ರ ಅವಕಾಶ, ಇಲ್ಲಿದೆ ವಿವರ
ಮೈಸೂರು, ಜೂನ್, 22: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಗೆಯೇ ಈ ವೇಳೆ ಚಾಮುಂಡಿ ಬೆಟ್ಟಕ್ಕೆ ಕೆಎಸ್ಆರ್ಟಿಸಿ ಬಸ್ಗಳನ್ನು ಹೊರತುಪಡಿಸಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.
ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ ಗರಿಗೆದರಿದೆ. ಆದರೆ ಈ ಬಾರಿ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಜಿಲ್ಲಾಡಳಿತದಿಂದ ಭಕ್ತರಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತಾವರೆಕಟ್ಟೆ ಕಡೆಯಿಂದ, ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಇಂಡಸ್ವ್ಯಾಲಿ ರಸ್ತೆ ಮೂಲಕ ಹೋಗುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.
ಬೆಟ್ಟದ ಪಾದದಿಂದ ಮೆಟ್ಟಿಲು ಮುಖಾಂತರ ದೇವಸ್ಥಾನಕ್ಕೆ ಹೋಗುವ ಭಕ್ತರು ವಾಹನಗಳನ್ನು ಪಿಂಜರಾಪೋಲ್ ಮುಂಭಾಗದ ಮೈದಾನದಲ್ಲಿ ಹಾಗೂ ಪೊಲೀಸರು ಸೂಚಿಸುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ದೇವಸ್ಥಾನಕ್ಕೆ ಹೋಗಬೇಕು ಎಂದು ಮಾಹಿತಿ ನೀಡಿದರು.
ಜೂನ್ 23, 30, ಜುಲೈ 7, 14ರ ಆಷಾಢ ಶುಕ್ರವಾರ ಮತ್ತು ಜುಲೈ 10ರ ಶ್ರೀ ಚಾಮುಂಡೇಶ್ವರಿ ವರ್ಧಂತಿಯಂದು ಉಚಿತ ಬಸ್ ಸೇವೆ ಇರಲಿದೆ. ಬೆಟ್ಟಕ್ಕೆ ಬರುವ ಭಕ್ತರು ತಮ್ಮ ವಾಹನಗಳನ್ನು ಲಲಿತ ಮಹಲ್ ಮೈದಾನದಲ್ಲಿ ನಿಲುಗಡೆ ಮಾಡಿ ಜಿಲ್ಲಾಡಳಿತದ ವತಿಯಿಂದ ವ್ಯವಸ್ಥೆ ಮಾಡಿರುವ ಬಸ್ಗಳಲ್ಲಿ ದೇವಸ್ಥಾನಕ್ಕೆ ತೆರಳಬಹುದಾಗಿದೆ. ಮುಂಜಾನೆ 3 ಗಂಟೆಯಿಂದ ರಾತ್ರಿ 10ರವರೆಗೆ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತ್ಯೇಕ ಹೆಲ್ಪ್ ಡೆಸ್ಕ್ಗಳ ಸ್ಥಾಪನೆ
ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ಪ್ರತ್ಯೇಕ ಹೆಲ್ಪ್ ಡೆಸ್ಕ್ ಸ್ಥಾಪಿಸಲಾಗಿದೆ. ಇದರೊಂದಿಗೆ ಭದ್ರತಾ ದೃಷ್ಟಿಯಿಂದ ವಿದ್ಯುದೀಪಗಳ ವ್ಯವಸ್ಥೆ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಲಲಿತ ಮಹಲ್ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಭದ್ರತಾ ವ್ಯವಸ್ಥೆ, ತಾತ್ಕಾಲಿಕ ಬಸ್ ನಿಲ್ದಾಣ, ಶೌಚಗೃಹ, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಸಹ ಕಲ್ಪಿಸಲಾಗಿದೆ.
ವಾಹನ ನಿಲುಗಡೆಗಳ ಮಾಹಿತಿ
ಇನ್ನು ಲಲಿತಾದ್ರಿಪುರದ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ತಮ್ಮ ವಾಹನಗಳಲ್ಲಿ ಲಲಿತಾದ್ರಿಪುರದ ರಸ್ತೆ ಮೂಲಕ ಲಲಿತಮಹಲ್ ಮೈದಾನ ತಲುಪಬಹುದಾಗಿದೆ. ಬಳಿಕ ಲಲಿತಮಹಲ್ ಮೈದಾನದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಹಾಗೆಯೇ ಉತ್ತನಹಳ್ಳಿ ರಸ್ತೆ ಕಡೆಯಿಂದ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳು ನಂಜನಗೂಡು ರಸ್ತೆ ಮೂಲಕ ಎಂ.ಎಲ್.ಸೋಮಸುಂದರಂ ವೃತ್ತ, ಮಹಾರಾಣಾ ಪ್ರತಾಪ ಸಿಂಹ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಲಲಿತಮಹಲ್ ರಸ್ತೆ ಮೂಲಕ ಲಲಿತಮಹಲ್ ಮೈದಾನದ ಖಾಲಿ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು ಎನ್ನುವ ಸೂಚನೆಯನ್ನು ನೀಡಿದ್ದಾರೆ.
ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸಿ
ಅಷ್ಟೇ ಅಲ್ಲದೆ ಚಾಮುಂಡಿ ಬೆಟ್ಟದ ಆವರಣದಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸಿ ಪೊಲೀಸ್ ಇಲಾಖೆಯು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಸಚಿವ ಎಚ್.ಸಿ.ಮಹದೇವಪ್ಪ ಇತ್ತೀಚೆಗಷ್ಟೇ ಸೂಚನೆ ನೀಡಿದ್ದರು.
ಗಣ್ಯ ವ್ಯಕ್ತಿಗಳಿಗೆ ವಾಹನ ಪಾಸ್ ನೀಡಬೇಕು. ಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ಆಷಾಢ ಶುಕ್ರವಾರದಂದು ಹಿಂದಿನ ಹಾಗೂ ಮಾರನೇ ದಿನ ಸ್ವಚ್ಛತೆ ಕಾಪಾಡುವುದು, ಸಂಚಾರ ಶೌಚಾಲಯ ವ್ಯವಸ್ಥೆಯನ್ನಯ ಮಾಡಬೇಕು. ಹಾಗೂ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಭಕ್ತರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದರು.
ಹಾಗೆಯೇ ಚಾಮುಂಡೇಶ್ವರಿ ದೇಗುಲದ ಹೈ ಮಾಸ್ಟ್ ದೀಪವನ್ನು ಕೂಡಲೇ ದುರಸ್ತಿಪಡಿಸಿ ಎಂದು ಸೂಚಿಸಿದ್ದರು.ಸೆಸ್ಕ್ ವತಿಯಿಂದ ಚಾಮುಂಡಿ ಬೆಟ್ಟದ ದೇಗುಲದ ಸುತ್ತ, ದೇವೀಕೆರೆ ಹಾಗೂ 1,000 ಮೆಟ್ಟಿಲುಗಳ ಬಳಿಯ ವಿದ್ಯುತ್ ದೀಪಗಳನ್ನು ದುರಸ್ತಿಗೊಳಿಸಬೇಕು. ಅಷ್ಟೇ ಅಲ್ಲದೇ ಬೆಟ್ಟದಲ್ಲಿರುವ ದೇವಾಲಯಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ವಿಶೇಷ ದೀಪಾಲಂಕಾರ, ಎಲ್ಇಡಿ ದೀಪಗಳ ವ್ಯವಸ್ಥೆ ಮಾಡಿ ಎಂದು ಸೂಚನೆ ನೀಡಿದ್ದರು.
-
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications