Vande Bharat: ಕಲಬುರಗಿ-ಬೆಂಗಳೂರು ರೈಲಿಗೆ ಪ್ರತಿಕ್ರಿಯೆ ಹೇಗಿದೆ?
ಬೆಂಗಳೂರು, ಮೇ 16: ಬೆಂಗಳೂರು-ಕಲಬುರಗಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದರ ಹೆಚ್ಚಾಗಿದೆ ಎಂಬ ಆರೋಪದ ನಡುವೆಯೇ ರಾಜಧಾನಿ ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕಿಸುವ ರೈಲು ಬಹುತೇಕ ಭರ್ತಿಯಾಗಿ ಸಂಚಾರ ನಡೆಸುತ್ತಿದೆ.
ಬೆಂಗಳೂರು ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ನಡುವೆ ಮಾರ್ಚ್ 15ರಿಂದ ವಂದೇ ಭಾರತ್ ಕೇಸರಿ ಬಣ್ಣದ ರೈಲು ಸಂಚಾರ ಆರಂಭವಾಗಿದೆ. ವಾರದಲ್ಲಿ 6 ದಿನ ಸಂಚಾರ ನಡೆಸುವ ರೈಲು ಪ್ರಯಾಣಿಕರಿಂದ ತುಂಬುತ್ತಿದೆ.

ನೈಋತ್ಯ ರೈಲ್ವೆ ಮಾಹಿತಿ ಪ್ರಕಾರ ಮಾರ್ಚ್ 15 ರಿಂದ ಮೇ 1ರ ತನಕ ಶೇ 93.33ರಷ್ಟು ಆಸನಗಳು ಭರ್ತಿಯಾಗಿ ರೈಲು ಸಂಚಾರ ನಡೆಸುತ್ತಿದೆ. ಮೇ 7ರ ತನಕ ರೈಲು 21,016 ಜನರು ರೈಲಿನಲ್ಲಿ ಸಂಚಾರ ನಡೆಸಿದ್ದಾರೆ. ರೈಲಿನ ವೇಳಾಪಟ್ಟಿ ಬಗ್ಗೆಯೂ ಯಾವುದೇ ಅಪಸ್ವರ ಎತ್ತಿಲ್ಲ.
ಕಲ್ಯಾಣ ಕರ್ನಾಟಕಕ್ಕೆ ರೈಲು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಪರ್ಕ ಕಲ್ಪಿಸುವ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ವಂದೇ ಭಾರತ್ ರೈಲು ಸೇವೆಗೆ ಚಾಲನೆ ನೀಡಿದ್ದರು. ನೈಋತ್ಯ ರೈಲ್ವೆ ಈ ಮಾರ್ಗದಲ್ಲಿ ಕೇಸರಿ ಬಣ್ಣದ ವಂದೇ ಭಾರತ್ ರೈಲು ಓಡಿಸುತ್ತಿದೆ.
ಕಲಬುರಗಿಯಿಂದ ಬೆಳಗ್ಗೆ 5.15ಕ್ಕೆ ಹೊರಡುವ ರೈಲು ಮಧ್ಯಾಹ್ನ 2 ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೈಯಪ್ಪನಹಳ್ಳಿ ತಲುಪುತ್ತದೆ. ಮಧ್ಯಾಹ್ನ 2.40ಕ್ಕೆ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಡುವ ರೈಲು ರಾತ್ರಿ 11.30ಕ್ಕೆ ಕಲಬುರಗಿ ನಿಲ್ದಾಣ ತಲುಪಲಿದೆ.
ವಂದೇ ಭಾರತ್ ರೈಲಿನಲ್ಲಿ ಚೇರ್ ಕಾರ್ (ಸಿಸಿ) ಮತ್ತು ಎಕ್ಸಿಕ್ಯುಟಿವ್ ಚೇರ್ ಕಾರ್ (ಇಸಿ) ಎಂಬ ಎರಡು ಬಗೆಯ ಸೀಟುಗಳಿವೆ. ಮಾರ್ಚ್ 15 ರಿಂದ 31ರ ತನಕ ಚೇರ್ ಕಾರ್ನಲ್ಲಿ 7,170 ಮತ್ತು ಎಕ್ಸಿಕ್ಯುಟಿವ್ ಕ್ಲಾಸ್ನಲ್ಲಿ 780 ಸೀಟುಗಳು ಭರ್ತಿಯಾಗಿವೆ.
ಏಪ್ರಿಲ್ 1 ರಿಂದ 30ರ ತನಕ ಚೇರ್ ಕಾರ್ನಲ್ಲಿ 12,428 ಮತ್ತು ಎಕ್ಸಿಕ್ಯುಟಿವ್ ಕ್ಲಾಸ್ನಲ್ಲಿ 1352 ಸೀಟುಗಳು ಭರ್ತಿಯಾಗಿವೆ. ಮೇ 1 ರಿಂದ 7ರ ತನಕ ಚೇರ್ ಕಾರ್ನಲ್ಲಿ 2,868 ಮತ್ತು ಎಕ್ಸಿಕ್ಯುಟಿವ್ ಕ್ಲಾಸ್ನಲ್ಲಿ 312 ಸೀಟುಗಳು ಭರ್ತಿಯಾಗಿವೆ. ಒಟ್ಟಾರೆ ಶೇ 93.33ರಷ್ಟು ಸೀಟುಗಳು ಭರ್ತಿಯಾಗಿ ರೈಲು ಓಡುತ್ತಿದೆ.
ಈ ರೈಲಿನ ದರ ಕೊಂಚ ಜಾಸ್ತಿ ಎಂಬ ಆರೋಪವಿದೆ. ಕಲಬುರಗಿ-ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಚೇರ್ ಕಾರ್ನಲ್ಲಿ without food 1,216, with food 1,540. ಎಕ್ಸಿಕ್ಯುಟಿವ್ ಚೇರ್ ಕಾರ್ without food 2,386, with food 2,765 ರೂ. ಗಳ ದರವಿದೆ.
ವಂದೇ ಭಾರತ್ ರೈಲು ಮೂಲಕ ಬೆಂಗಳೂರಿಗೆ ಹೋಗಿ ಬರುವುದು ಸುಲಭವಾದ ಕಾರಣ ಹೆಚ್ಚು ಜನರು ಈ ರೈಲಿನಲ್ಲಿ ಸಂಚಾರ ನಡೆಸುತ್ತಿದ್ದಾರೆ. ಬಸ್ ಪ್ರಯಾಣಕ್ಕೆ ಹೋಲಿಕೆ ಮಾಡಿದರೆ ಎಸಿ ಕೋಚ್ಗಳಲ್ಲಿ ಅರಾಮವಾಗಿ ಸಂಚಾರ ನಡೆಸಬಹುದು, ತಳ್ಳಾಟ, ನೂಕಾಟ ಇರುವುದಿಲ್ಲ. ಆದ್ದರಿಂದ ಜನರು ರೈಲು ಸೇವೆ ಇಷ್ಟಪಟ್ಟಿದ್ದಾರೆ.
ರೈಲಿಗೆ ರಾಯಚೂರು, ಮಂತ್ರಾಲಯ ರಸ್ತೆ, ಗುಂತಕಲ್, ಅನಂತಪುರ ಮತ್ತು ಯಲಹಂಕದಲ್ಲಿ ನಿಲುಗಡೆ ಇದೆ. ಯಾದಗಿರಿಯಲ್ಲಿ ನಿಲುಗಡೆ ನೀಡಲು ಒಪ್ಪಿಗೆ ನೀಡಲಾಗಿದೆ. ಆದರೆ ರೈಲು ಇನ್ನು ನಿಲ್ಲುತ್ತಿಲ್ಲ ಎಂದು ಜನರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications