ಬೆಂಗಳೂರು-ಮುರುಡೇಶ್ವರ ರೈಲು; ಪ್ರಯಾಣಿಕರಿಗೆ ಮಹತ್ವದ ಮಾಹಿತಿ
ಬೆಂಗಳೂರು, ಮಾರ್ಚ್ 18: ಬೆಂಗಳೂರು-ಮುರುಡೇಶ್ವರ ರೈಲುನ್ನು ಕಾರವಾರದ ತನಕ ವಿಸ್ತರಣೆ ಮಾಡಬೇಕು ಎಂಬುದು ಬಹಳ ವರ್ಷಗಳ ಬೇಡಿಕೆ. ಪ್ರಯಾಣಿಕರು, ವಿವಿಧ ರೈಲು ಹೋರಾಟ ಸಮಿತಿಗಳು ಸಹ ಈ ಕುರಿತು ರೈಲ್ವೆ ಇಲಾಖೆಗೆ ಮನವಿಗಳನ್ನು ಸಲ್ಲಿಸಿದ್ದವು. ಅಂತಿವಾಗಿ ಈ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ.
ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಕೊಂಕಣ ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರು-ಮುರುಡೇಶ್ವರ ರೈಲು ಕಾರವಾರದ ತನಕ ವಿಸ್ತರಣೆ ಮಾಡಬೇಕು ಎಂದು ಸಹ ಚರ್ಚೆ ನಡೆಯಿತು.

ಕರ್ನಾಟಕದ ಪ್ರತಿನಿಧಿಯಾಗಿ ಈ ಸಭೆಯಲ್ಲಿ ಶಾಸಕರು ಹಾಗೂ ಎಂಸಿಎ ಲಿಮಿಟೆಡ್ ಅಧ್ಯಕ್ಷ ಸತೀಶ್ ಸೈಲ್ ಪಾಲ್ಗೊಂಡಿದ್ದರು. ಸತೀಶ್ ಸೈಲ್ ಕೊಂಕಣ ರೈಲ್ವೆ ಅಧಿಕಾರಿಗಳ ಬಳಿ ಬೆಂಗಳೂರು-ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟರು. ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಿಸಿದರು.
ಅಧಿಕಾರಿಗಳ ಒಪ್ಪಿಗೆ: ತಾತ್ಕಾಲಿಕ ವೇಳಾಪಟ್ಟಿಯನ್ನು ನೋಡಿದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ನೈಋತ್ಯ ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿ, ರೈಲು ವಿಸ್ತರಣೆ ಮಾಡುವ ವೇಳಾಪಟ್ಟಿಯನ್ನು ಅಂತಿಮಗೊಳಿಸುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದರು.
ಬೆಂಗಳೂರು-ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆಯ ನಡುವೆಯೇ ಬೆಂಗಳೂರು-ಮುರುಡೇಶ್ವರ ರೈಲನ್ನು ಕಾರವಾರದ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಈಗಾಗಲೇ ಬೆಂಗಳೂರು-ಮೈಸೂರು-ಮಂಗಳೂರು ತನಕ ವಿಸ್ತರಣೆ ಮಾಡಲಾಗಿದೆ.
2023ರಲ್ಲಿಯೂ ಸತೀಶ್ ಸೈಲ್ ಕೊಂಕಣ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರವನ್ನು ಬರೆದು ಬೆಂಗಳೂರು-ಮುರುಡೇಶ್ವರ ರೈಲು ವಿಸ್ತರಣೆ ಮಾಡುವ ಕುರಿತು ಗಮನ ಸೆಳೆದಿದ್ದರು. ಈಗ ಸಭೆಯಲ್ಲಿಯೂ ಸಹ ಇದೇ ವಿಚಾರ ಪ್ರಸ್ತಾಪಿಸಿದ್ದಾರೆ.
ಕೊಂಕಣ ರೈಲು ಯೋಜನೆಗಾಗಿ ಉತ್ತರ ಕನ್ನಡದ ಜನರು ಭೂಮಿ ನೀಡಿದ್ದಾರೆ. ಅವರಿಗೆ ರಾಜಧಾನಿಗೆ ಸಂಪರ್ಕ ಕಲ್ಪಿಸಲು ಅನುಕೂಲ ಮಾಡಿಕೊಡಬೇಕು. ಅದಕ್ಕಾಗಿ ರೈಲು ಸೇವೆ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಡಲಾಗಿತ್ತು.
ಸದ್ಯ ಬೆಂಗಳೂರು-ಕಾರವಾರ ನಡುವೆ ಸಂಚಾರ ನಡೆಸುವ ರೈಲುಗಳು ತುಂಬಿ ತುಳುಕುತ್ತಿವೆ. ಆದ್ದರಿಂದ ಹೊಸ ರೈಲುಗಳು ಬೇಕು. ಅಲ್ಲದೇ ಬೆಂಗಳೂರು-ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಲು ಅವಕಾಶವಿದೆ. ಆದ್ದರಿಂದ ವಿಸ್ತರಣೆ ಮಾಡಬೇಕು ಎಂದು ಕೊಂಕಣ ರೈಲ್ವೆ ಮುಂದೆ ಬೇಡಿಕೆ ಇಡಲಾಗಿತ್ತು.
ಸಭೆಯಲ್ಲಿ ಚರ್ಚಿಸಿದ ಇತರ ವಿಚಾರಗಳು
* ಕರಾವಳಿಯಿಂದ ಮುಂಜಾನೆ ಸಂಚಾರ ನಡೆಸುವ ಮಡಗಾಂವ್-ಮಂಗಳೂರು ಮೆಮೊ ರೈಲಿಗೆ ಹಾರವಾಡ, ಮಿರ್ಜಾನ್ನಲ್ಲಿ ನಿಲುಗಡೆ ನೀಡಬೇಕು ಎಂಬ ಪ್ರಸ್ತಾಪಕ್ಕೂ ಒಪ್ಪಿಗೆ ಸಿಕ್ಕಿದೆ.
* ಕೊಂಕಣ ರೈಲು ಯೋಜನೆಗೆ ಭೂಮಿ ನೀಡಿದ ಕೆಲವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂಬ ಚರ್ಚೆ ನಡೆಯಿತು. ಜಿಲ್ಲಾಧಿಕಾರಿಗಳು ಸಲ್ಲಿಸುವ ಪ್ರಸ್ತಾವನೆಯನ್ನು ಕೂಡಲವೇ ವಿಲೇವಾರಿ ಮಾಡಲು ಇಲಾಖೆ ಒಪ್ಪಿಗೆ ನೀಡಿದೆ.
* ಕಾರವಾರ ರೈಲು ನಿಲ್ದಾಣದಲ್ಲಿ ಮುಂದಿನ ಕಾಮಗಾರಿ ಕೈಗೊಳ್ಳುವುದು ಮತ್ತು ಪ್ಲಾಟ್ ಫಾರ್ಮ್ನಲ್ಲಿ ಲಿಫ್ಟ್ ಅವಳಡಿಕೆ ಮಾಡುವ ಬೇಡಿಕೆಗೆ ಸಹ ಇಲಾಖೆ ಒಪ್ಪಿದೆ.
* ಮಂಗಳೂರು-ಮಡಗಾಂವ್ ನಡುವಿನ ವಂದೇ ಭಾರತ್ ರೈಲಿಗೆ ಗೋಕರ್ಣ, ಕುಂದಾಪುರದಲ್ಲಿ ನಿಲುಗಡೆ ನೀಡಲು ಸಹ ಸಭೆಯಲ್ಲಿ ವಿಷಯ ಪ್ರಸ್ತಾಪ ಮಾಡಲಾಗಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications