Tirupati Tour Package: ಬೆಂಗಳೂರು-ತಿರುಪತಿ ವಿಶೇಷ ಟೂರ್ ಪ್ಯಾಕೇಜ್, ಒಂದೇ ದಿನದಲ್ಲಿ ದರ್ಶನ ಭಾಗ್ಯ
ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಕ್ಕೆ ಬೆಂಗಳೂರು ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಅಪಾರ ಪ್ರಮಾಣದ ಭಕ್ತರು ಆಗಮಿಸುತ್ತಾರೆ. ರಾಜಧಾನಿ ಬೆಂಗಳೂರಿನಿಂದ ತೆರಳುವವರ ಸಂಖ್ಯೆ ಹೆಚ್ಚು ಎನ್ನಬಹುದು. ಈ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ಬೆಂಗಳೂರು-ತಿರುಮಲ-ಮಂಗಾಪುರಂಗೆ ಟೂರ್ ಪ್ಯಾಕೇಜ್ ಆರಂಭಿಸಿದೆ. ಮೂರು ವಿಧದ ಲಕ್ಸುರಿ ಡಿಲಕ್ಸ್ ಬಸ್ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ದರ, ದೇವರ ದರ್ಶನ ಸಮಯ, ಎಲ್ಲೆಲ್ಲಿ ಭೇಟಿ ನೀಡಬಹುದು ಪೂರ್ಣ ಮಾಹಿತಿ ಮುಂದಿದೆ.
ಬೆಂಗಳೂರಿನಿಂದ ಒಂದು ದಿನದಲ್ಲಿ ತಿರುಪತಿ ದರ್ಶನ್ ಮಾಡಿಸಿ ಮರಳಿ ಕರೆದುಕೊಂಡು ಬರುವ ವಿಶೇಷ ಟೂರ್ ಪ್ಯಾಕೇಜ್ ಇದಾಗಿದ್ದು. ಯಾರೆಲ್ಲ ಬೆಂಗಳೂರಿನಿಂದ ಹೊರಬೇಕೆನ್ನುವವರು, ಒಮ್ಮೆಯಾದರೂ ತಿರುಪತಿ ನೋಡಿಲ್ಲ, ನೋಡಬೇಕು ಎಂದುಕೊಂಡವರು ಹಾಗೂ ಆಗಾಗ ಭೇಟಿ ನೀಡುವವರಿಗೆ ಈ ಟೂರ್ ಪ್ಯಾಕೇಜ್ ಸಾಕಷ್ಟು ಅನುಕೂಲ ಒದಗಿಸಲಿದೆ.

ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ (ತಿರುಪತಿ) ಹಿಂದೂಗಳಿಗೆ ಧಾರ್ಮಿಕ ವಿಚಾರದಲ್ಲಿ ಮಹತ್ವದ ಸ್ಥಳವಾಗಿದೆ. ಕತ್ತಲೆಯ ಯುಗದಲ್ಲಿ ಮಾನವಕುಲಕ್ಕೆ ಸಹಾಯ ಮಾಡಲು ವಿಷ್ಣು ತನ್ನನ್ನು ತಾನು ಶಿಲೆಯಾಗಿ ಪರಿವರ್ತಿಸಿಕೊಂಡನೆಂದು ಭಕ್ತರು ನಂಬಿದ್ದಾರೆ. ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತ ಭಾವ ಹೊಂದುತ್ತಾರೆ. ಈ ಕಾರಣದಿಂದಲೇ ತಿರುಪತಿ ದೇವಸ್ಥಾನ ವರ್ಷಪೂರ್ತಿಯು ಸದಾ ಭಕ್ತರಿಂದ ತುಂಬಿರುತ್ತದೆ.
ಒಂದೇ ದಿನದಲ್ಲಿ ತಿಮ್ಮಪ್ಪನ ದರ್ಶನ ಭಾಗ್ಯ
ಮೂರು ವಿಧದ ಎ/ಸಿ ವೋಲ್ವೋ ಬಸ್ಗಳನ್ನು ಪ್ರವಾಸೋದ್ಯಮ ಇಲಾಖೆ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನ ಇಲಾಖೆಯ ಕಚೇರಿ ಇರುವ ಯಶವಂತಪುರದ ಬಸ್ ನಿಲ್ದಾಣದಿಂದ ಪ್ರತಿ ದಿನ ಬಸ್ ಹೊರಡುತ್ತವೆ. ತಿರುಪತಿ, ಮಂಗಾಪುರ ಮತ್ತು ತಿರುಮಲಕ್ಕೆ ಭೇಟಿ ನೀಡಲಿದೆ. ಭಕ್ತರಿಗೆ ಒಂದೇ ದಿನದಲ್ಲೇ ಬಾಲಾಜಿ ದರ್ಶನ ಮಾಡಿಕೊಂಡು ಬರಬಹುದಾದ ಪ್ಯಾಕೇಜ್ ಇದಾಗಿದೆ.
ಯಾವೆಲ್ಲ ಸ್ಥಳಗಳಿಗೆ ಭೇಟಿ
ತಿರುಮಲ, ತಿರುಪತಿ ಹಾಗೂ ಮಂಗಾಪುರದಲ್ಲಿರುವ ದೇವಾಲಯ, ದೇವರ ದರ್ಶನ ಮಾಡಿಕೊಂಡು ಅಲ್ಲಿನ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ, ಸಾಕಷ್ಟು ಸಮಯ ವೀಕ್ಷಣೆಗೆ ಅವಕಾಶ ನೀಡುವಂತೆ ಈ ಟೂರ್ ಪ್ಯಾಕೇಜ್ ಅನ್ನು ರೂಪಿಸಿರುವುದು ಮತ್ತೊಂದು ವಿಶೇಷ. ಪ್ರವಾಸಿ ತಾಣಗಳು ಮತ್ತು ರಾಜ್ಯ, ಕೇಂದ್ರ ಮತ್ತು ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ಎಲ್ಟಿಸಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಒಬ್ಬರಿಗೆ ಟಿಕೆಟ್ ದರ ಎಷ್ಟು?:
ಬೆಂಗಳೂರು-ತಿರುಪತಿ ಟೂರ್ ಪ್ಯಾಕೇಜ್ ಡಿಲಕ್ಸ್ ಎಸಿ ಬಸ್ ಮೊತ್ತ 2270 ರೂಪಾಯಿ. ವೋಲ್ವೋ ಎಸಿ ಬಸ್ ನಲ್ಲಿ ಪ್ರಯಾಣಿವವರಿದ್ದರೆ ಆ ಆಯ್ಕೆ ಸಹ ಇದ್ದು, ಒಬ್ಬರಿಗೆ 2300 ರೂಪಾಯಿ ಇದೆ. ಇನ್ನೂ ಮಲ್ಟಿ - ಆಕ್ಸಲ್ ಬಸ್ ಸಹ ನಿಯೋಜಿಸಲಾಗಿದ್ದು, ಅದನ್ನು ಬುಕ್ ಮಾಡಿದ ಪ್ರತಿಯೊಬ್ಬರಿಗೂ 2405 ರೂಪಾಯಿ ನಿಗದಿಗೊಳಿಸಲಾಗಿದೆ. ಆಸಕ್ತರು ತಮ್ಮ ತಮ್ಮ ಅನುಕೂಲ ನೋಡಿಕೊಂಡು ಯಾವ ಬಸ್ ಆದರೂ ಬುಕ್ ಮಾಡಿಕೊಳ್ಳಬಹುದಾಗಿದೆ.
ತಿರುಪತಿ ತಿಮ್ಮಪ್ಪನ ದರ್ಶನ ಸಮಯ, ವಿವರ
ಈ ಮೂರು ಬಸ್ಗಳು ಪ್ರತಿದಿನ ರಾತ್ರಿ 8 ಗಂಟೆ ಬೆಂಗಳೂರಿನ ಯಶವಂತಪುರದ ನಿಗದಿತ ಸ್ಥಳದಿಂದ ನಿರ್ಗಮಿಸಲಿವೆ. ಮರುದಿನ ಬೆಳಗಿನ ಜಾವ 2 ಗಂಟೆಗೆ ತಿರುಪತಿ ತಲುಪುವ ಬಸ್ ಪ್ರಯಾಣಿಕರಿಗೆ ಫ್ರೆಶ್ ಅಪ್ ಆಗಲು ಬೆಳಗ್ಗೆ 4.30 ವರೆಗೂ ಸಮಯ ನೀಡಲಾಗುತ್ತದೆ. ಆ ಹೊತ್ತಿಗೆ ಉಪಹಾರ ಸಿದ್ಧವಿರುತ್ತದೆ. ಬೆಳಗಿನ ಉಪಹಾರ ಮುಗಿಸಿಕೊಂಡು ಅಲ್ಲಿಂದ ತಿರುಮಲ ಸರ್ವ ದರ್ಶನಕ್ಕೆ ಹೊರಡಲಾಗುತ್ತದೆ. ಜನಸಂದಣಿ ಅವಲಂಬಿಸಿ ದರ್ಶನದ ವ್ಯವಸ್ಥೆ ಮಾಡಲಾಗಿರುತ್ತದೆ. ವೆಂಕಟೇಶ್ವರನ ದರ್ಶನ ಬಳಿಕ ಶ್ರೀ ಪದ್ಮಾವತಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ದರ್ಶನ, ದೇವಾಲಯ ವೀಕ್ಷಣೆ ಬಳಿಕ ಬೆಂಗಳೂರಿಗೆ ಬಸ್ ಹಿಂತಿರುಗುತ್ತದೆ.
ಟಿಕೆಟ್ ಬುಕ್ಕಿಂಗ್ ಹೇಗೆ?
ತಿರುಪತಿ ಬಾಲಾಜಿ ಭಕ್ತರು ಪ್ರಯಾಣಿಕರು/ಪ್ರವಾಸಿಗರು ಪ್ರವಾಸೊದ್ಯಮ ಇಲಾಖೆಯ ಅಧಿಕೃತ ಜಾಲತಾಣದ ಈ https://kstdc.co/tour_packages/tirupathi-mangapura-tptf/ ಲಿಂಕ್ ಬಳಸಿ ನೀವು ಬುಕ್ ಮಾಡಬೇಕು. ದೂರವಾಣಿ 080-43344334 ಇಲ್ಲವೇ ಮೊಬೈಲ್ 8970650070 ಸಂಖ್ಯೆಗೆ ಕರೆ ಮಾಡಿಯೂ ನೀವು ಬುಕ್ ಮಾಡಿಕೊಳ್ಳಬಹುದು. ಇಲ್ಲವೇ ಖದ್ದು ಇಲಾಖೆ ಕಚೇರಿಗೆ ತೆರಳಿಯು ಬುಕ್ ಮಾಡಬಹುದಾಗಿದೆ. ಅನುಕೂಲಕರ ದಿನಾಂಕ ನೋಡಿಕೊಂಡು ಟಿಕೆಟ್ ಬುಕ್ ಮಾಡುವಂತೆ ಇಲಾಖೆ ಕೋರಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications