Bengaluru to Mantralaya 5 Trains: ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ಇರುವ 5 ರೈಲುಗಳು
ಕಲಿಯುಗದ ಕಾಮಧೇನು, ಬೇಡಿದ ವರವನ್ನು ನೀಡುವ ಕರುಣಾಮಯಿ ರಾಘವೇಂದ್ರ ಸ್ವಾಮಿಗಳನ್ನು ಮಂತ್ರಾಲಯದಲ್ಲಿ ಪೂಜಿಸಲಾಗುತ್ತದೆ. ತಂಗಾ ಭದ್ರ ತಟದಲ್ಲಿ ನಿಂತಿರುವ ರಾಯರ ಸನ್ನಿಧಾನಕ್ಕೆ ನಿತ್ಯ ನೂರಾರು ಜನ ಭಕ್ತರು ಭೇಟಿ ನೀಡುತ್ತಾರೆ.
ಬೇಸಿಗೆ ರಜೆ ಮುಗಿತಾ ಬಂತು ಅಷ್ಟರಲ್ಲಿ ಮಂತ್ರಾಲಯಕ್ಕೆ ಹೋಗಿ ಬರಬೇಕು ಅಂದುಕೊಂಡಿದ್ದರೆ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ಇರುವ ಐದು ರೈಲುಗಳ ಬಗ್ಗೆ ಮಾಹಿತಿಯನ್ನು ನಾವು ನಿಮಗೆ ನೀಡಲಿದ್ದೇವೆ. ಆ ಮೂಲಕ ನೀವು ಮಂತ್ರಾಲಯಕ್ಕೆ ಸುಲಭವಾಗಿ ತೆರಳಬಹುದು. ಹಾಗಾದರೆ ಆ ಐದು ರೈಲುಗಳು ಯಾವವು? ಎಲ್ಲಿಂದ ಯಾವಾಗ ಸಂಚರಿಸುತ್ತವೆ ಎಂದು ತಿಳಿಯೋಣ.

ಮೊದಲನೇ ರೈಲು:
ರಾಯರ ಮಠಕ್ಕೆ ಮಂತ್ರಾಲಯ ರೈಲ್ವೆ ಸ್ಟೇಷನ್ ತುಂಬಾ ಹತ್ತಿರವಾದ ರೈಲ್ವೇ ಸ್ಟೇಷನ್ ಆಗಿದೆ. ಮಂತ್ರಾಲಯ ರೈಲ್ವೆ ಸ್ಟೇಷನ್ನಿಂದ ಮಠವು 15 ಕಿಮೀ ದೂರದಲ್ಲಿದೆ. ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳು ಇರುವ ಮೊದಲನೇ ರೈಲು 11014. ಇದು ಕೆಎಸ್ಆರ್ ಬೆಂಗಳೂರಿನಿಂದ ಸಂಜೆ 4 ಗಂಟೆಗೆ ಹೊರಡುತ್ತದೆ. ರಾತ್ರಿ 11.14ಕ್ಕೆ ತಲುಪುತ್ತದೆ. ಪ್ರಯಾಣ ದರ SL 245 ರೂಪಾಯಿ ಇದೆ.
ಎರಡನೇ ರೈಲು:
ಎರಡನೇ ರೈಲು ಯಶ್ವಂತಪುರದಿಂದ ಹೊರಡುತ್ತದೆ. ಈ ರೈಲು ಸಂಖ್ಯೆ YPR BIDR EXP(16577). ಈ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.15ಕ್ಕೆ ಹೊರಡುತ್ತದೆ. ಬೆಳಿಗ್ಗೆ 7.39ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಶನಿವಾರ ಮಾತ್ರ ಈ ರೈಲು ಇರುತ್ತದೆ. ಪ್ರಯಾಣ ದರ SL: 235 ರೂಪಾಯಿ ಇದೆ.

ಮೂರನೇ ರೈಲು:
ಇನ್ನೊಂದು ಕೆಎಸ್ಆರ್ ಬೆಂಗಳೂರಿನಿಂದ ರಾತ್ರಿ 8:40 ಕ್ಕೆ ಹೊರಡುತ್ತದೆ. ಬೆಳಗ್ಗೆ 3:49ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಈ ಬೆಂಗಳೂರು ಮಂತ್ರಾಲಯ ರೈಲು ಸಂಖ್ಯೆ UDYAN EXP(11302). ಇದರ ಪ್ರಯಾಣ ದರ SL:255 ರೂಪಾಯಿ ಇದೆ. ವಾರದ ಎಲ್ಲಾ ದಿನ ಈ ರೈಲು ಸಂಚರಿಸಲಿದೆ.
ನಾಲ್ಕನೇ ರೈಲು:
ಮತ್ತೊಂದು ರೈಲು ಸಂಖ್ಯೆ HAS SUR EXP(11312). ಈ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 8:50ಕ್ಕೆ ಹೊರಡುತ್ತದೆ ಬೆಳಿಗ್ಗೆ 2:34ಕ್ಕೆ ಮಂತ್ರಾಲಯ ತಲುಪುತ್ತದೆ. ಪ್ರಯಾಣ ದರ SL:256 ಇದೆ.
ಐದನೇ ರೈಲು:
ಅಲ್ಲದೇ ನೀವು ಬೆಂಗಳೂರಿನಿಂದ ಮಂತ್ರಾಲಯಕ್ಕೆ ವಂದೇ ಭಾರತ್ ರೈಲಿನಲ್ಲೂ ಕೂಡ ಹೋಗಬಹುದು. ಅದರ ಬಗ್ಗೆ ನೋಡುವುದಾದರೆ. ಈ ರೈಲು ಸಂಖ್ಯೆ KLBG VANDeBHARAT(22232). ಇದು ಕೆಎಸ್ಆರ್ ಬೆಂಗಳೂರಿನಿಂದ ಮಧ್ಯಾಹ್ನ 2.40 ಗಂಟೆಗೆ ಹೊರಡುತ್ತದೆ. ರಾತ್ರಿ 8:18ಕ್ಕೆ ಮಂತ್ರಾಯಲವನ್ನು ತಲುಪುತ್ತದೆ. ಇದರ ಪ್ರಯಾಣ ದರ cc: 1175 ರೂಪಾಯಿ ಇದೆ. ನೀವೇನಾದ್ರು ಮಂತ್ರಾಲಯಕ್ಕೆ ಹೋಗಬೇಕು ಅಂದುಕೊಂಡಿದ್ದರೆ ಈ ರೈಲು ಪ್ರಯಾಣ ಮಾಡಬಹುದು.
-
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ











Click it and Unblock the Notifications