Bengaluru to Mantralaya 5 Trains: ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ಇರುವ 5 ರೈಲುಗಳು
ಕಲಿಯುಗದ ಕಾಮಧೇನು, ಬೇಡಿದ ವರವನ್ನು ನೀಡುವ ಕರುಣಾಮಯಿ ರಾಘವೇಂದ್ರ ಸ್ವಾಮಿಗಳನ್ನು ಮಂತ್ರಾಲಯದಲ್ಲಿ ಪೂಜಿಸಲಾಗುತ್ತದೆ. ತಂಗಾ ಭದ್ರ ತಟದಲ್ಲಿ ನಿಂತಿರುವ ರಾಯರ ಸನ್ನಿಧಾನಕ್ಕೆ ನಿತ್ಯ ನೂರಾರು ಜನ ಭಕ್ತರು ಭೇಟಿ ನೀಡುತ್ತಾರೆ.
ಬೇಸಿಗೆ ರಜೆ ಮುಗಿತಾ ಬಂತು ಅಷ್ಟರಲ್ಲಿ ಮಂತ್ರಾಲಯಕ್ಕೆ ಹೋಗಿ ಬರಬೇಕು ಅಂದುಕೊಂಡಿದ್ದರೆ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ಇರುವ ಐದು ರೈಲುಗಳ ಬಗ್ಗೆ ಮಾಹಿತಿಯನ್ನು ನಾವು ನಿಮಗೆ ನೀಡಲಿದ್ದೇವೆ. ಆ ಮೂಲಕ ನೀವು ಮಂತ್ರಾಲಯಕ್ಕೆ ಸುಲಭವಾಗಿ ತೆರಳಬಹುದು. ಹಾಗಾದರೆ ಆ ಐದು ರೈಲುಗಳು ಯಾವವು? ಎಲ್ಲಿಂದ ಯಾವಾಗ ಸಂಚರಿಸುತ್ತವೆ ಎಂದು ತಿಳಿಯೋಣ.

ಮೊದಲನೇ ರೈಲು:
ರಾಯರ ಮಠಕ್ಕೆ ಮಂತ್ರಾಲಯ ರೈಲ್ವೆ ಸ್ಟೇಷನ್ ತುಂಬಾ ಹತ್ತಿರವಾದ ರೈಲ್ವೇ ಸ್ಟೇಷನ್ ಆಗಿದೆ. ಮಂತ್ರಾಲಯ ರೈಲ್ವೆ ಸ್ಟೇಷನ್ನಿಂದ ಮಠವು 15 ಕಿಮೀ ದೂರದಲ್ಲಿದೆ. ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳು ಇರುವ ಮೊದಲನೇ ರೈಲು 11014. ಇದು ಕೆಎಸ್ಆರ್ ಬೆಂಗಳೂರಿನಿಂದ ಸಂಜೆ 4 ಗಂಟೆಗೆ ಹೊರಡುತ್ತದೆ. ರಾತ್ರಿ 11.14ಕ್ಕೆ ತಲುಪುತ್ತದೆ. ಪ್ರಯಾಣ ದರ SL 245 ರೂಪಾಯಿ ಇದೆ.
ಎರಡನೇ ರೈಲು:
ಎರಡನೇ ರೈಲು ಯಶ್ವಂತಪುರದಿಂದ ಹೊರಡುತ್ತದೆ. ಈ ರೈಲು ಸಂಖ್ಯೆ YPR BIDR EXP(16577). ಈ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.15ಕ್ಕೆ ಹೊರಡುತ್ತದೆ. ಬೆಳಿಗ್ಗೆ 7.39ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಶನಿವಾರ ಮಾತ್ರ ಈ ರೈಲು ಇರುತ್ತದೆ. ಪ್ರಯಾಣ ದರ SL: 235 ರೂಪಾಯಿ ಇದೆ.

ಮೂರನೇ ರೈಲು:
ಇನ್ನೊಂದು ಕೆಎಸ್ಆರ್ ಬೆಂಗಳೂರಿನಿಂದ ರಾತ್ರಿ 8:40 ಕ್ಕೆ ಹೊರಡುತ್ತದೆ. ಬೆಳಗ್ಗೆ 3:49ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಈ ಬೆಂಗಳೂರು ಮಂತ್ರಾಲಯ ರೈಲು ಸಂಖ್ಯೆ UDYAN EXP(11302). ಇದರ ಪ್ರಯಾಣ ದರ SL:255 ರೂಪಾಯಿ ಇದೆ. ವಾರದ ಎಲ್ಲಾ ದಿನ ಈ ರೈಲು ಸಂಚರಿಸಲಿದೆ.
ನಾಲ್ಕನೇ ರೈಲು:
ಮತ್ತೊಂದು ರೈಲು ಸಂಖ್ಯೆ HAS SUR EXP(11312). ಈ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 8:50ಕ್ಕೆ ಹೊರಡುತ್ತದೆ ಬೆಳಿಗ್ಗೆ 2:34ಕ್ಕೆ ಮಂತ್ರಾಲಯ ತಲುಪುತ್ತದೆ. ಪ್ರಯಾಣ ದರ SL:256 ಇದೆ.
ಐದನೇ ರೈಲು:
ಅಲ್ಲದೇ ನೀವು ಬೆಂಗಳೂರಿನಿಂದ ಮಂತ್ರಾಲಯಕ್ಕೆ ವಂದೇ ಭಾರತ್ ರೈಲಿನಲ್ಲೂ ಕೂಡ ಹೋಗಬಹುದು. ಅದರ ಬಗ್ಗೆ ನೋಡುವುದಾದರೆ. ಈ ರೈಲು ಸಂಖ್ಯೆ KLBG VANDeBHARAT(22232). ಇದು ಕೆಎಸ್ಆರ್ ಬೆಂಗಳೂರಿನಿಂದ ಮಧ್ಯಾಹ್ನ 2.40 ಗಂಟೆಗೆ ಹೊರಡುತ್ತದೆ. ರಾತ್ರಿ 8:18ಕ್ಕೆ ಮಂತ್ರಾಯಲವನ್ನು ತಲುಪುತ್ತದೆ. ಇದರ ಪ್ರಯಾಣ ದರ cc: 1175 ರೂಪಾಯಿ ಇದೆ. ನೀವೇನಾದ್ರು ಮಂತ್ರಾಲಯಕ್ಕೆ ಹೋಗಬೇಕು ಅಂದುಕೊಂಡಿದ್ದರೆ ಈ ರೈಲು ಪ್ರಯಾಣ ಮಾಡಬಹುದು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Ugadi Special Train: ವಿಶೇಷ ರೈಲು ಸಂಚಾರ, ಬೆಂಗಳೂರು-ಬೆಳಗಾವಿ ಪ್ರಯಾಣಿಕರೇ ಗಮನಿಸಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications