Chardham Yatra 2024: ಚಾರ್ಧಾಮ್ ಹೆಲಿಕಾಪ್ಟರ್ ಆನ್ಲೈನ್ ಬುಕಿಂಗ್ ಪ್ರಾರಂಭ ದಿನಾಂಕ ಪ್ರಕಟ
ಉತ್ತರಖಂಡದ ಚಾರ್ಧಾಮ್ ಯಾತ್ರೆ ಆರಂಭಗೊಳ್ಳುತ್ತಿದ್ದು ಇದಕ್ಕಾಗಿ ಮುಂಗಡ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಈ ನಡುವೆ ಹೆಲಿಕಾಪ್ಟರ್ ಸೇವೆಗಾಗಿ ಆನ್ಲೈನ್ ಬುಕಿಂಗ್ ಪ್ರಾರಂಭ ದಿನಾಂಕ ಕೂಡ ಘೋಷಣೆ ಮಾಡಲಾಗಿದೆ. ಚಾರ್ಧಾಮ್ಗೆ ತೆರಳು ಬಯಸುವ ಭಕ್ತರು ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಲು ಆನ್ಲೈನ್ ಬುಕಿಂಗ್ ಮಾಡಬಹುದಾಗಿದೆ. ಹಾಗಾದರೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ಚಾರ್ಧಾಮ್ ದೇಶದಲ್ಲೇ ತುಂಬಾ ಪ್ರಸಿದ್ಧವಾದ ಯಾತ್ರೆಯಾಗಿದೆ. ಜೀವನದಲ್ಲಿ ಒಮ್ಮೆಯಾದರೂ ಇಲ್ಲಿಗೆ ಭೇಟಿ ನೀಡಿದರೆ ಮೋಕ್ಷ ಪಡೆಯುತ್ತಾರೆನ್ನುವ ನಂಬಿಕೆ ಇದೆ. ಹೀಗಾಗಿ ಜನ ಉತ್ತರಖಂಡದಲ್ಲಿ ಇರುವ ಕೇದಾರನಾಥ, ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಧಾಮಕ್ಕೆ ಭೇಟಿ ನೀಡಲು ಬಯಸುತ್ತಾರೆ.

ಈ ಬಾರಿ ಕೇದಾರನಾಥ ದೇವಸ್ಥಾನದ ಬಾಗಿಲು ಮೇ10ರಂದು ತೆರೆಯಲಿದ್ದು, ಈ ದಿನದಿಂದ ಭಕ್ತಾಧಿಗಳಿಗೆ ಕೇದಾರನಾಥನ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಇಲ್ಲಿಗೆ ಭೇಟಿ ನೀಡಲು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಹೀಗಾಗಿ ಭಕ್ತರಿಗಾಗಿ ಸೋಮವಾರ (ಏಪ್ರಿಲ್ 15) ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿ ಆರಂಭವಾದ ಮೊದಲ ದಿನವೇ ಚಾರ್ಧಾಮ್ ಯಾತ್ರೆಗಾಗಿ 2 ಲಕ್ಷಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದಾರೆ.
ಹೆಲಿಕಾಪ್ಟರ್ ಸೇವೆಗಾಗಿ ಆನ್ಲೈನ್ ಬುಕಿಂಗ್ ಪ್ರಾರಂಭ
ಚಾರ್ಧಾಮ್ ಯಾತ್ರೆಗಾಗಿ ಹೆಲಿಕಾಪ್ಟರ್ ಸೇವೆಗಳ ಬುಕಿಂಗ್ ಏಪ್ರಿಲ್ 20ರಿಂದ ಪ್ರಾರಂಭವಾಗಲಿದೆ. ಈ ಬಾರಿ ಚಾರ್ಧಾಮ್ಗೆ ಹೆಲಿಕಾಪ್ಟರ್ ಸೇವೆಯ ದರವನ್ನು ಶೇಕಡಾ ಐದರಷ್ಟು ಹೆಚ್ಚಿಸಲಾಗಿದೆ. ಐಆರ್ಸಿಟಿಸಿ ಮೂಲಕ ಬುಕ್ಕಿಂಗ್ ಮಾಡಲಾಗುವುದು.
ಒಂದು ಧಾಮ್ಗೆ ಪ್ರಯಾಣ ದರ:
ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಏಕ್ ಧಾಮ್ ಗೆ ಭೇಟಿ ನೀಡಲು 3.5 ಲಕ್ಷ ರೂಪಾಯಿಗೆ ಚಾರ್ಟರ್ಡ್ ಹೆಲಿಕಾಪ್ಟರ್ ಸೇವೆಯನ್ನು ಒದಗಿಸುತ್ತದೆ. ಕೆಸ್ಟ್ರೆಲ್ ಏವಿಯೇಷನ್ ಆರು ಲಕ್ಷಕ್ಕೆ ದೋ ಧಾಮ್ಗೆ ಪ್ರಯಾಣಿಸಲು ಚಾರ್ಟರ್ಡ್ ಹೆಲಿಕಾಪ್ಟರ್ ಸೇವೆಯನ್ನು ಒದಗಿಸುತ್ತದೆ.

ಎರಡು ಧಾಮ್ಗೆ ಪ್ರಯಾಣ ದರ:
ಎರಡು ಧಾಮ್ಗೆ ಪ್ರಯಾಣಿಸಲು UCADA ಪ್ರತಿ ಪ್ರಯಾಣಿಕರಿಗೆ ದರವನ್ನು ನಿಗದಿಪಡಿಸಿದೆ. ಇದರಲ್ಲಿ ಏರೋ ಕ್ರಾಫ್ಟ್ ಏವಿಯೇಷನ್ ಕಂಪನಿ ಚಾರ್ಟರ್ಡ್ ಹೆಲಿಕಾಪ್ಟರ್ನ ದರ ಪ್ರತಿ ಪ್ರಯಾಣಿಕರಿಗೆ 1.15 ಲಕ್ಷ ರೂಪಾಯಿ ಆದರೆ ಹಿಮಾಲಯನ್ ಹೆಲಿ ಸರ್ವೀಸ್ ಕಂಪನಿ ಪ್ರತಿ ಪ್ರಯಾಣಿಕರಿಗೆ 1.25 ಲಕ್ಷ ರೂಪಾಯಿ ನಿಗಧಿಪಡಿಸಿದೆ. ಇನ್ನೂ ಧಾಮ್ನಲ್ಲಿ ರಾತ್ರಿ ವಾಸ್ತವ್ಯವಿರುತ್ತದೆ. ಅದೇ ದಿನ ಹಿಂದಿರುಗಿದರೆ, ಪ್ರತಿ ಪ್ರಯಾಣಿಕರಿಗೆ 1.05 ಲಕ್ಷ ರೂಪಾಯಿ ಇರುತ್ತದೆ.
ಚಾರ್ಧಾಮ್ಗೆ ಪ್ರಯಾಣ ದರ:
ಇದಲ್ಲದೇ ಚಾರ್ಧಾಮ್ ಗೆ ಪ್ರಯಾಣಿಸಲು ಚಾರ್ಟರ್ಡ್ ಹೆಲಿಕಾಪ್ಟರ್ ದರವನ್ನು ಪ್ರತಿ ಪ್ರಯಾಣಿಕರಿಗೆ 1.95 ಲಕ್ಷದಿಂದ 2 ಲಕ್ಷ ರೂ.ಗೆ ನಿಗದಿಪಡಿಸಲಾಗುತ್ತದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications