Get Updates
Get notified of breaking news, exclusive insights, and must-see stories!

Chardham Yatra 2024: ಚಾರ್‌ಧಾಮ್ ಯಾತ್ರೆಗೆ ಮಳೆ ಅಡ್ಡಿ: ಬದರಿನಾಥ್-ಋಷಿಕೇಶ ಹೆದ್ದಾರಿ ಬಂದ್

ಚಾರ್‌ಧಾಮ್ ಯಾತ್ರೆ ಮೇ 10ರಿಂದ ಆರಂಭವಾಗಿದೆ. ಆದರೆ ಅದಾಗಲೇ ಉತ್ತರಖಂಡದಲ್ಲಿ ವರುಣನ ಅರ್ಭಟ ಹೆಚ್ಚಾಗಿದೆ. ಪ್ರಮುಖ ರಸ್ತೆಗಳು ತುಂಬಿ ಮಳೆ ನೀರು ರಬಸದಿಂದ ಹರಿಯುತ್ತಿದೆ. ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತವಾಗುವ ಭೀತಿ ಕೂಡ ಹೆಚ್ಚಾಗಿದ್ದು ಸಿರೋಬಗಡ ಬಳಿ ಬದರಿನಾಥ್-ಋಷಿಕೇಶ ಹೆದ್ದಾರಿಯನ್ನು ಮುಚ್ಚಲಾಗಿದೆ.

ಬದರಿನಾಥ್ ಮತ್ತು ಕೇದಾರನಾಥ ಕಡೆಗೆ ಹೋಗುವ ಪ್ರಯಾಣಿಕರನ್ನು ಶ್ರೀಕೋಟ್-ಶ್ರೀನಗರ ಮತ್ತು ಕಲಿಯಾಸೋಡ್‌ನಲ್ಲಿ ನಿಲ್ಲಿಸಲಾಗಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಶ್ರೀನಗರ ಕೊತ್ವಾಲ್ ಹೋಶಿಯಾರ್ ಸಿಂಗ್ ಪಂಖೋಲಿ ಹೇಳಿದ್ದಾರೆ. ಸಿರೋಬಗಡದಲ್ಲಿ ಧಾರಾಕಾರ ಮಳೆಗೆ ನಿರಂತರವಾಗಿ ಅವಶೇಷಗಳು ಬೀಳುತ್ತಿರುವುದರಿಂದ ರಸ್ತೆಯನ್ನು ಇನ್ನೂ ತೆರೆಯಲಾಗಿಲ್ಲ ಎಂದು ಅವರು ಹೇಳಿದರು. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

Chardham Yatra 2024 Chardham Yatra interrupted by rain Badrinath-Rishikesh highway closed

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ 2024 ಆರಂಭ

ಈ ವರ್ಷ ಚಾರ್ ಧಾಮ್ ಯಾತ್ರೆಯು ಮೇ 10 ರಂದು ಪ್ರಾರಂಭವಾಗಿದೆ. ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ಸೇರಿದಂತೆ ಮೂರು ನಾಲ್ಕು ದೇವಾಲಯಗಳನ್ನು ತೆರೆಯಲಾಗಿದೆ. ಮೇ 12 ರಂದು (ಭಾನುವಾರ) ಬದರಿನಾಥದ ಬಾಗಿಲು ತೆರೆಯಲಿದೆ.

ಚಾರ್ ಧಾಮ್ ಯಾತ್ರೆಯು ಹಿಂದೂ ಧರ್ಮದಲ್ಲಿ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಯಾತ್ರೆ ಸಾಮಾನ್ಯವಾಗಿ ಏಪ್ರಿಲ್-ಮೇ ನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯಲಿದೆ. ಈ ಯಾತ್ರೆಯು ಯಮುನೋತ್ರಿಯಿಂದ ಪ್ರಾರಂಭವಾಗುತ್ತದೆ. ನಂತರ ಗಂಗೋತ್ರಿ ಕಡೆಗೆ ಸಾಗಿ ಬಳಿಕ ಕೇದಾರನಾಥಕ್ಕೆ ಹೋಗಿ ಅಂತಿಮವಾಗಿ ಬದರಿನಾಥದಲ್ಲಿ ಕೊನೆಗೊಳ್ಳುತ್ತದೆ.

Chardham Yatra 2024 Chardham Yatra interrupted by rain Badrinath-Rishikesh highway closed

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನೇತೃತ್ವದಲ್ಲಿ ಚಾರ್ ಧಾಮ್ ಯಾತ್ರೆಯು ಕಳೆದ ಎರಡು ವರ್ಷಗಳಿಂದ ಕಾಲ್ನಡಿಗೆಯಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿದೆ.

ಕೇದಾರನಾಥ ದೇವಾಲಯ

ಮೇ 10 ರಂದು ಸುಮಾರು 10,000 ಭಕ್ತರು ಕೇದಾರನಾಥನ ದ್ವಾರಗಳನ್ನು ತೆರೆಯುವುದನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸುಮಾರು 20 ಕ್ವಿಂಟಾಲ್‌ಗೂ ಹೆಚ್ಚು ಬಗೆಯ ಹೂವುಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು. ದೇಗುಲದ ಬಾಗಿಲು ತೆರೆಯುವ ವೇಳೆ ಹೆಲಿಕಾಪ್ಟರ್ ಮೂಲಕ ಯಾತ್ರಾರ್ಥಿಗಳ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು.

ಉತ್ತರಕಾಶಿ ಜಿಲ್ಲೆಯಲ್ಲಿರುವ ಯಮುನೋತ್ರಿ ಧಾಮದ ಬಾಗಿಲು ಕೂಡ ಬೆಳಗ್ಗೆ 7 ಗಂಟೆಗೆ ಭಕ್ತರಿಗಾಗಿ ತೆರೆಯಲಾಯಿತು. ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆಯೇ ದೇವಾಲಯದ ಆವರಣದಲ್ಲಿ ನೆರೆದಿದ್ದ ಸಾವಿರಾರು ಭಕ್ತರು 'ಜೈ ಮಾ ಯಮುನಾ' ಎಂದು ಘೋಷಣೆ ಕೂಗಿದರು.

Chardham Yatra 2024 Chardham Yatra interrupted by rain Badrinath-Rishikesh highway closed

ಚಾರ್‌ಧಾಮ್ ಯಾತ್ರೆ:

ಕೇದಾರನಾಥ ಉತ್ತರಾಖಂಡ ರಾಜ್ಯದ ಅತ್ಯಂತ ಪವಿತ್ರವಾದ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಹಿಂದೂಗಳ ತೀರ್ಥಯಾತ್ರಾ ಸ್ಥಳವಾಗಿರುವ ಕೇದಾರನಾಥ ಚೋಟಾ ಚಾರ್‌ ಧಾಮ್‌ ಯಾತ್ರೆಯ ಒಂದು ಭಾಗವಾಗಿದೆ. ಕೇದಾರನಾಥ ಎಂಬ ಹೆಸರಿನಿಂದ ಕರೆಯಲ್ಪಡುವ ಮಹಾಶಿವನು ಇಲ್ಲಿ ನೆಲೆಸಿದ್ದಾನೆ.ಈ ಚೋಟಾ ಚಾರ್‌ ಧಾಮ್‌ ಆಲಯಗಳನ್ನು ಕೇವಲ 6 ತಿಂಗಳು ಮಾತ್ರ ತೆರೆಯಲ್ಪಡುತ್ತದೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಕೇದಾರನಾಥವು ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ವಿಶೇಷ ಸ್ಥಳವಾಗಿದೆ.

Chardham Yatra 2024 Chardham Yatra interrupted by rain Badrinath-Rishikesh highway closed

ನಮ್ಮ ಭಾರತದಲ್ಲಿರುವ 12 ಶಿವನ ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥ ಪ್ರಮುಖವಾದುದು. ಈ ಕಾರಣದಿಂದಲೇ ಹಿಂದೂಗಳು ಜೀವನದಲ್ಲಿ ಒಮ್ಮೆಯಾದರೂ ಸಂದರ್ಶಿಸಬೇಕು ಎಂದು ಬಯಸುತ್ತಾರೆ. ಪುರಾಣಗಳ ಪ್ರಕಾರ, ಕೇದಾರನಾಥ ದೇವಾಲಯವನ್ನು 8 ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ನಿರ್ಮಿಸಿದರು ಎಂದು ಹೇಳಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+