Chardham Yatra 2024: ಚಾರ್ಧಾಮ್ ಯಾತ್ರೆಗೆ ಮಳೆ ಅಡ್ಡಿ: ಬದರಿನಾಥ್-ಋಷಿಕೇಶ ಹೆದ್ದಾರಿ ಬಂದ್
ಚಾರ್ಧಾಮ್ ಯಾತ್ರೆ ಮೇ 10ರಿಂದ ಆರಂಭವಾಗಿದೆ. ಆದರೆ ಅದಾಗಲೇ ಉತ್ತರಖಂಡದಲ್ಲಿ ವರುಣನ ಅರ್ಭಟ ಹೆಚ್ಚಾಗಿದೆ. ಪ್ರಮುಖ ರಸ್ತೆಗಳು ತುಂಬಿ ಮಳೆ ನೀರು ರಬಸದಿಂದ ಹರಿಯುತ್ತಿದೆ. ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತವಾಗುವ ಭೀತಿ ಕೂಡ ಹೆಚ್ಚಾಗಿದ್ದು ಸಿರೋಬಗಡ ಬಳಿ ಬದರಿನಾಥ್-ಋಷಿಕೇಶ ಹೆದ್ದಾರಿಯನ್ನು ಮುಚ್ಚಲಾಗಿದೆ.
ಬದರಿನಾಥ್ ಮತ್ತು ಕೇದಾರನಾಥ ಕಡೆಗೆ ಹೋಗುವ ಪ್ರಯಾಣಿಕರನ್ನು ಶ್ರೀಕೋಟ್-ಶ್ರೀನಗರ ಮತ್ತು ಕಲಿಯಾಸೋಡ್ನಲ್ಲಿ ನಿಲ್ಲಿಸಲಾಗಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಶ್ರೀನಗರ ಕೊತ್ವಾಲ್ ಹೋಶಿಯಾರ್ ಸಿಂಗ್ ಪಂಖೋಲಿ ಹೇಳಿದ್ದಾರೆ. ಸಿರೋಬಗಡದಲ್ಲಿ ಧಾರಾಕಾರ ಮಳೆಗೆ ನಿರಂತರವಾಗಿ ಅವಶೇಷಗಳು ಬೀಳುತ್ತಿರುವುದರಿಂದ ರಸ್ತೆಯನ್ನು ಇನ್ನೂ ತೆರೆಯಲಾಗಿಲ್ಲ ಎಂದು ಅವರು ಹೇಳಿದರು. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
#WATCH | Due to heavy rains, the Badrinath-Rishikesh highway has been closed near Sirobagadh, due to which passengers going to Badrinath and Kedarnath have been stopped at Srikot-Srinagar and Kaliyasod.
— ANI UP/Uttarakhand (@ANINewsUP) May 11, 2024
Srinagar Kotwal Hoshiyar Singh Pankholi said that care is being taken to… pic.twitter.com/tL9145RkHJ

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ 2024 ಆರಂಭ
ಈ ವರ್ಷ ಚಾರ್ ಧಾಮ್ ಯಾತ್ರೆಯು ಮೇ 10 ರಂದು ಪ್ರಾರಂಭವಾಗಿದೆ. ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ಸೇರಿದಂತೆ ಮೂರು ನಾಲ್ಕು ದೇವಾಲಯಗಳನ್ನು ತೆರೆಯಲಾಗಿದೆ. ಮೇ 12 ರಂದು (ಭಾನುವಾರ) ಬದರಿನಾಥದ ಬಾಗಿಲು ತೆರೆಯಲಿದೆ.
ಚಾರ್ ಧಾಮ್ ಯಾತ್ರೆಯು ಹಿಂದೂ ಧರ್ಮದಲ್ಲಿ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಯಾತ್ರೆ ಸಾಮಾನ್ಯವಾಗಿ ಏಪ್ರಿಲ್-ಮೇ ನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯಲಿದೆ. ಈ ಯಾತ್ರೆಯು ಯಮುನೋತ್ರಿಯಿಂದ ಪ್ರಾರಂಭವಾಗುತ್ತದೆ. ನಂತರ ಗಂಗೋತ್ರಿ ಕಡೆಗೆ ಸಾಗಿ ಬಳಿಕ ಕೇದಾರನಾಥಕ್ಕೆ ಹೋಗಿ ಅಂತಿಮವಾಗಿ ಬದರಿನಾಥದಲ್ಲಿ ಕೊನೆಗೊಳ್ಳುತ್ತದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನೇತೃತ್ವದಲ್ಲಿ ಚಾರ್ ಧಾಮ್ ಯಾತ್ರೆಯು ಕಳೆದ ಎರಡು ವರ್ಷಗಳಿಂದ ಕಾಲ್ನಡಿಗೆಯಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿದೆ.
ಕೇದಾರನಾಥ ದೇವಾಲಯ
ಮೇ 10 ರಂದು ಸುಮಾರು 10,000 ಭಕ್ತರು ಕೇದಾರನಾಥನ ದ್ವಾರಗಳನ್ನು ತೆರೆಯುವುದನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸುಮಾರು 20 ಕ್ವಿಂಟಾಲ್ಗೂ ಹೆಚ್ಚು ಬಗೆಯ ಹೂವುಗಳಿಂದ ದೇವಸ್ಥಾನವನ್ನು ಅಲಂಕರಿಸಲಾಗಿತ್ತು. ದೇಗುಲದ ಬಾಗಿಲು ತೆರೆಯುವ ವೇಳೆ ಹೆಲಿಕಾಪ್ಟರ್ ಮೂಲಕ ಯಾತ್ರಾರ್ಥಿಗಳ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು.
ಉತ್ತರಕಾಶಿ ಜಿಲ್ಲೆಯಲ್ಲಿರುವ ಯಮುನೋತ್ರಿ ಧಾಮದ ಬಾಗಿಲು ಕೂಡ ಬೆಳಗ್ಗೆ 7 ಗಂಟೆಗೆ ಭಕ್ತರಿಗಾಗಿ ತೆರೆಯಲಾಯಿತು. ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆಯೇ ದೇವಾಲಯದ ಆವರಣದಲ್ಲಿ ನೆರೆದಿದ್ದ ಸಾವಿರಾರು ಭಕ್ತರು 'ಜೈ ಮಾ ಯಮುನಾ' ಎಂದು ಘೋಷಣೆ ಕೂಗಿದರು.

ಚಾರ್ಧಾಮ್ ಯಾತ್ರೆ:
ಕೇದಾರನಾಥ ಉತ್ತರಾಖಂಡ ರಾಜ್ಯದ ಅತ್ಯಂತ ಪವಿತ್ರವಾದ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಹಿಂದೂಗಳ ತೀರ್ಥಯಾತ್ರಾ ಸ್ಥಳವಾಗಿರುವ ಕೇದಾರನಾಥ ಚೋಟಾ ಚಾರ್ ಧಾಮ್ ಯಾತ್ರೆಯ ಒಂದು ಭಾಗವಾಗಿದೆ. ಕೇದಾರನಾಥ ಎಂಬ ಹೆಸರಿನಿಂದ ಕರೆಯಲ್ಪಡುವ ಮಹಾಶಿವನು ಇಲ್ಲಿ ನೆಲೆಸಿದ್ದಾನೆ.ಈ ಚೋಟಾ ಚಾರ್ ಧಾಮ್ ಆಲಯಗಳನ್ನು ಕೇವಲ 6 ತಿಂಗಳು ಮಾತ್ರ ತೆರೆಯಲ್ಪಡುತ್ತದೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಕೇದಾರನಾಥವು ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ವಿಶೇಷ ಸ್ಥಳವಾಗಿದೆ.

ನಮ್ಮ ಭಾರತದಲ್ಲಿರುವ 12 ಶಿವನ ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥ ಪ್ರಮುಖವಾದುದು. ಈ ಕಾರಣದಿಂದಲೇ ಹಿಂದೂಗಳು ಜೀವನದಲ್ಲಿ ಒಮ್ಮೆಯಾದರೂ ಸಂದರ್ಶಿಸಬೇಕು ಎಂದು ಬಯಸುತ್ತಾರೆ. ಪುರಾಣಗಳ ಪ್ರಕಾರ, ಕೇದಾರನಾಥ ದೇವಾಲಯವನ್ನು 8 ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ನಿರ್ಮಿಸಿದರು ಎಂದು ಹೇಳಲಾಗುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications