Chardham Yatra 2024: ಚಾರ್ಧಾಮ್ ಯಾತ್ರೆಗೆ ಭಕ್ತರಲ್ಲಿ ಹೆಚ್ಚಿದ ಉತ್ಸಾಹ- ಆರು ದಿನಗಳಲ್ಲಿ ಲಕ್ಷಾಂತರ ಜನ ನೋಂದಣಿ
ಉತ್ತರಖಂಡದ ಚಾರ್ಧಾಮ್ ಯಾತ್ರೆ ಮೇ ತಿಂಗಳಲ್ಲಿ ಶುರುವಾಗಲಿದೆ. ಇಲ್ಲಿಗೆ ಭೇಟಿ ನೀಡುವವರು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ವರ್ಷದಲ್ಲಿ ಆರು ತಿಂಗಳು ತೆರೆದಿರುವ ಚಾರ್ಧಾಮ್ ಯಾತ್ರೆಗೆ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಈ ಬಾರಿಯೂ ಲಕ್ಷಾಂತರ ಜನ ಕೆಲವೇ ದಿನದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ಈ ಬಾರಿ ಕೇದಾರನಾಥ ದೇವಸ್ಥಾನದ ಬಾಗಿಲು ಮೇ10ರಂದು ತೆರೆಯಲಿದ್ದು, ಈ ದಿನದಿಂದ ಭಕ್ತಾಧಿಗಳಿಗೆ ಕೇದಾರನಾಥನ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಇಲ್ಲಿಗೆ ಭೇಟಿ ನೀಡಲು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಹೀಗಾಗಿ ಭಕ್ತರಿಗಾಗಿ ಸೋಮವಾರದಿಂದ (ಏಪ್ರಿಲ್ 15) ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಈಗಾಗಲೇ ಚಾರ್ಧಾಮ್ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು. ಕಳೆದ ಆರು ದಿನಗಳಲ್ಲಿ ಚಾರ್ಧಾಮ್ ಯಾತ್ರೆಗಾಗಿ 11 ಲಕ್ಷಕ್ಕೂ ಹೆಚ್ಚು ಜನ ನೋಂದಣಿ ಮಾಡಿಕೊಂಡಿದ್ದಾರೆ. ಆರು ದಿನಗಳಲ್ಲಿ ಉತ್ತರಾಖಂಡದ ಚಾರ್ ಧಾಮ್ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆಗೆ 11,45000 ಯಾತ್ರಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಗರಿಷ್ಠ ಸಂಖ್ಯೆಯ ನೋಂದಣಿಗಳು ಕೇದಾರನಾಥ ಧಾಮಕ್ಕೆ ಆಗಿದ್ದು 382159 ಜನ ನೋಂದಣಿ ಮಾಡಿಕೊಂಡಿದ್ದಾರೆ.
ಉತ್ತರಾಖಂಡ್ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು ಏಪ್ರಿಲ್ 15ರಿಂದ ಚಾರ್ಧಾಮ್ ಯಾತ್ರೆ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆಗೆ ಆನ್ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದರಲ್ಲಿ ಶನಿವಾರ ಸಂಜೆ 4 ಗಂಟೆಯವರೆಗೆ, 1145014 ಯಾತ್ರಾರ್ಥಿಗಳು ಚಾರ್ಧಾಮ್ ಮತ್ತು ಹೇಮಕುಂಡ್ ಸಾಹಿಬ್ಗೆ ಆನ್ಲೈನ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ.
ಇದರಲ್ಲಿ ಕೇದಾರನಾಥ ಧಾಮಕ್ಕೆ 383159 ಜನ, ಬದರಿನಾಥ ಧಾಮಕ್ಕೆ 326677 ಜನ ಭಕ್ತರು, ಗಂಗೋತ್ರಿ ಧಾಮಕ್ಕೆ 214302 ಜನ ಸೇರಿದಂತೆ ಯಮುನೋತ್ರಿ ಧಾಮಕ್ಕೆ 205561 ಯಾತ್ರಿಕರು ನೋಂದಣಿ ಮಾಡಿಕೊಂಡಿದ್ದಾರೆ. 15315 ಯಾತ್ರಿಕರು ಹೇಮಕುಂಡ್ ಸಾಹಿಬ್ಗೆ ನೋಂದಾಯಿಸಿಕೊಂಡಿದ್ದಾರೆ.

ಚಾರ್ಧಾಮ್ ಯಾತ್ರೆಗಾಗಿ ಹೆಲಿಕಾಪ್ಟರ್ ಸೇವೆಗಳ ಬುಕಿಂಗ್ ಏಪ್ರಿಲ್ 20ರಿಂದ ಪ್ರಾರಂಭವಾಗದೆ. ಈ ಬಾರಿ ಚಾರ್ಧಾಮ್ಗೆ ಹೆಲಿಕಾಪ್ಟರ್ ಸೇವೆಯ ದರವನ್ನು ಶೇಕಡಾ ಐದರಷ್ಟು ಹೆಚ್ಚಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications