Summer season: ನಂದಿ ಗಿರಿಧಾಮಕ್ಕೆ ಭೇಟಿ ನೀಡುವವರಿಗೆ ಸಿಹಿಸುದ್ದಿ, ನೂತನ ವೇಳಾಪಟ್ಟಿ ಗಮನಿಸಿ
ಬೆಂಗಳೂರು, ಏಪ್ರಿಲ್, 21: ಬೆಂಗಳೂರಿನ ಸಮೀಪದಲ್ಲಿರುವ ನಂದಿ ಬೆಟ್ಟವು ಪ್ರವಾಸಿಗರ ಅಚ್ಚುಮೆಚ್ಚಿನ ಅದ್ಭುತ ತಾಣವಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯವೂ ಸಾವಿರಾರು ಜನ ಭೇಟಿ ನೀಡುತ್ತಲೇ ಇರುತ್ತಾರೆ. ಈ ಮೊದಲು ಪ್ರವಾಸಿಗರಿಗೆ ಇಲ್ಲಿ ಬೆಳಗ್ಗೆ 5:30ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಸಮಯ ಬದಲಾವಣೆ ಮಾಡಿದ್ದು, ಬೆಳಗ್ಗೆ 5ರಿಂದ ಸಂಜೆ 7 ಗಂಟೆವರೆಗೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿದೆ.
ಕರ್ನಾಟಕ ರಾಜ್ಯದ ಅದ್ಭುತ ತಾಣಗಳಲ್ಲೊಂದಾದ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.

ಬೇಸಿಗೆ ಹಿನ್ನಲೆಯಲ್ಲಿ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರಸಿದ್ಧ ನಂದಿಗಿರಿಧಾಮದ ಪ್ರವೇಶದ ಅವಧಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಈ ಹಿಂದೆ ಬೆಳಗ್ಗೆ 5:30 ರಿಂದ ಸಂಜೆ 6 ಗಂಟೆಯವರೆಗೆ ಪ್ರವೇಶಕ್ಕೆ ಅವಕಾಶ ಇತ್ತು. ಇದೀಗ ಬೇಸಿಗೆ ರಜೆ ಪ್ರಾರಂಭವಾಗುತ್ತಿದ್ದು, ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದರು. ಈ ವಿಸ್ತರಣೆಯು ಸೆಪ್ಟೆಂಬರ್ 30ರವರೆಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ರೋಪ್ವೇ ನಿರ್ಮಾಣ ಕಾಮಗಾರಿಗೆ ಚಾಲನೆ
ಇನ್ನು ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್ವೇ ನಿರ್ಮಾಣ ಮಾಡುವ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ್ದರು.
ಈ ವೇಳೆ ಮಾತನಾಡಿದ್ದ ಅವರು, ಅಸಂಖ್ಯಾತ ಪ್ರವಾಸಿಗರ ಬಹುದಶಕಗಳ ಕನಸನ್ನು ನನಸಾಗಿಸುವ ಕಾರ್ಯಕ್ಕೆ ಈಗ ಚಾಲನೆ ದೊರೆತಿದ್ದು, ಖ್ಯಾತ ಕನ್ನಡ ಚಲನಚಿತ್ರ ನಟ ಶಂಕರ್ನಾಗ್ ಅವರು ಪಂಚಗಿರಿ ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಿಸಬೇಕು ಎಂದು ಒತ್ತಾಸೆ ಪಟ್ಟಿದ್ದರು. ಅವರ ಆಶಯ ಕೆಲವೇ ತಿಂಗಳಲ್ಲಿ ಈಡೇರಲಿದೆ ಎಂದಿದ್ದರು.

ರೋಪ್ ವೇ ಕಾಮಗಾರಿ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್ವೇ ಪ್ರೈವೇಟ್ ಲಿಮಿಟೆಡ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ 93.40 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.
ಸುಮಾರು 2.93 ಕಿ.ಮೀ ದೂರದ ರೋಪ್ವೇ ಅಭಿವೃದ್ಧಿಪಡಿಸಲಾಗುತ್ತದೆ. ಡೈನಾಮಿಕ್ ರೋಪ್ವೇ ಪ್ರೈವೇಟ್ ಲಿಮಿಟೆಡ್ 30 ವರ್ಷಗಳ ರಿಯಾಯಿತಿ ಅವಧಿಯೊಂದಿಗೆ ನಿರ್ಮಾಣ, ವಿನ್ಯಾಸ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (DBFOT) ಚೌಕಟ್ಟಿನ ಮೇಲೆ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದ್ದರು.
ಐತಿಹಾಸಿಕ ತಾಣ ಮತ್ತು ಪಾರಂಪರಿಕ ಸ್ಮಾರಕಗಳಿಗೆ ನೆಲೆಯಾಗಿರುವ ನಂದಿ ಬೆಟ್ಟ ಟ್ರಕ್ಕಿಂಗ್, ಸೈಕ್ಲಿಂಗ್ ಮತ್ತು ಪ್ಯಾರಾಗ್ರೆಡಿಂಗ್ನಂತಹ ಸಾಹಸ ಕ್ರೀಡೆಗಳಿಗೆ ಪ್ರಸಿದ್ಧಿ ಪಡೆದಿದೆ. ಇಂತಹ ತಾಣ ತಲುಪಲು ರೋಪ್ ವೇಯ ವೇಗ ಮತ್ತು ಪರಿಸರ ಸ್ನೇಹಿ ಸಾರಿಗೆ ಸೌಲಭ್ಯ, ಅನುಕೂಲ ಕಲ್ಪಿಸುವುದರೊಂದಿಗೆ ತಲುಪುವ ಸಮಯ ಉಳಿಸಲಾಗುತ್ತದೆ. ಪ್ರವಾಸಿಗರಿಗೆ ಸುತ್ತಮುತ್ತಲಿನ ಪ್ರದೇಶದ ಮೈಮಾನಿಕ ಚಿತ್ರಣ ನೀಡುವುದರ ಜೊತೆಗೆ ಈ ಭಾಗದಲ್ಲಿ ಮಾಲಿನ್ಯ ಕಡಿಮೆ ಮಾಡಲು ಸಹಕಾರಿಯಾಗಿದೆ.
ರೋಪ್ವೇ ನಿರ್ಮಾಣ ಸುಗಮ ಸಂಪರ್ಕದ ಜತೆಗೆ ನಂದಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ. ಬೆಟ್ಟದ ಮೇಲಿನ ಮತ್ತು ಕೆಳಗಿನ ಲ್ಯಾಂಡಿಂಗ್ ಸ್ಟೇಷನ್ಗಳಲ್ಲಿ ವಿವಿಧ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಸಲಾಗುತ್ತದೆ. ಬೆಟ್ಟದ ಕೆಳಗಿನ ಟರ್ಮಿನಲ್ ನಲ್ಲಿ- 480 ದ್ವಿಚಕ್ರ, 410 ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಪುಡ್ ಕೋರ್ಟ್, ಕುಡಿಯುವ ನೀರಿನ ಘಟಕಗಳು, ಶೌಚಾಲಯ ವ್ಯವಸ್ಥೆ, ಟಿಕೆಟ್ ಕೌಂಟರ್ ಗಳು, ವಿಶ್ರಾಂತಿ ಕೊಠಡಿಗಳು, ರೆಸ್ಟೋರೆಂಟ್, ಮಳಿಗೆಗಳು ಇರುತ್ತವೆ ಎಂದು ತಿಳಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications