ಪ್ರವಾಸಿ ವಾಹನಗಳ ತಪಾಸಣೆ: ಚಿಕ್ಕಮಗಳೂರು ಪ್ರವಾಸ, ಪೊಲೀಸರ ಸಲಹೆಗಳು
ಚಿಕ್ಕಮಗಳೂರು, ಜುಲೈ 14: ನೈಋತ್ಯ ಮುಂಗಾರು ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಬ್ಬರಿಸುತ್ತಿದೆ. ಈ ಸಮಯದಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಆದರೆ ಕೆಲವು ಪ್ರವಾಸಿಗರಿಂದ ಉಳಿದವರಿಗೆ ಕಿರಿಕಿರಿ ಉಂಟಾಗುತ್ತಿದೆ. ಆದ್ದರಿಂದ ಜಿಲ್ಲಾ ಪೊಲೀಸರು ಪ್ರವಾಸಿ ವಾಹನಗಳ ತಪಾಸಣೆ ಆರಂಭಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಮತ್ತು ಚಿಕ್ಕಮಗಳೂರು ಅಡ್ವೆಂಚರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿರುವ ಕೈಮರ ಚೆಕ್ಪೋಸ್ಟ್ನಲ್ಲಿ ಎಸ್ಪಿ ಡಾ. ವಿಕ್ರಮ ಅಮಟೆ ನೇತೃತ್ವದಲ್ಲಿ ಪ್ರವಾಸಿ ವಾಹನಗಳ ತಪಾಸಣೆ ನಡೆಸಲಾಯಿತು. ಪ್ಲಾಸ್ಟಿಕ್, ಮದ್ಯ ಮತ್ತು ತಂಬಾಕು ಉತ್ಪನ್ನಗಳಿಗಾಗಿ ಹುಡುಕಾಟ ನಡೆಸಲಾಯಿತು.

ತಪಾಸಣೆ ವೇಳೆಯಲ್ಲಿ ಕರ್ನಾಟಕ ಪೊಲೀಸ್ ಆಕ್ಟ್ ಅಡಿಯಲ್ಲಿ 86 ಲಘು ಪ್ರಕರಣಗಳು, ಅಬಕಾರಿ ಕಾಯ್ದೆಯಡಿಯಲ್ಲಿ 1 ಪ್ರಕರಣ ಮತ್ತು ಸಂಚಾರಿ ನಿಯಮ ಉಲ್ಲಂಘನೆ ವಿರುದ್ಧ 6 ಪ್ರಕರಣಗಳನ್ನು ದಾಖಲಿಸಲಾಗಿದೆ. ಇಂತಹ ಕಾರ್ಯಾಚರಣೆಯನ್ನು ಜಿಲ್ಲೆಯ ಇತರ ಪ್ರವಾಸಿ ಸ್ಥಳಗಳಲ್ಲಿಯೂ ಸಹ ನಡೆಸಲಾಗುತ್ತಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಕೆ. ಪಿ. ಆಕ್ಟ್ ಮತ್ತು ಸಂಚಾರಿ ನಿಯಮ ಉಲ್ಲಂಘನೆ ವಿರುದ್ಧ 225 ಪ್ರಕರಣಗಳು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಿರುದ್ಧ 2 ಪ್ರಕರಣಗಳು, ಕೋಟ್ಪಾ ಕಾಯ್ದೆಯಡಿಯಲ್ಲಿ 10 ಪ್ರಕರಣಗಳು ಮತ್ತು ಅಬಕಾರಿ ಕಾಯ್ದೆಯಡಿಯಲ್ಲಿ 2 ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರವಾಸಿಗರಿಗೆ ಸಲಹೆಗಳು
* ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ, ತೊಂದರೆ ಉಂಟುಮಾಡುವ ಯಾವುದೇ ರೀತಿಯ ಚಟುವಟಿಕೆಯಲ್ಲಿ ತೊಡಗಬೇಡಿ
* ಪ್ರವಾಸಿ ಸ್ಥಳಗಳಲ್ಲಿ ಮದ್ಯಪಾನ ಮಾಡಬೇಡಿ
* ಇತರರಿಗೆ ಅನಾನುಕೂಲತೆ ಮಾಡುವ ರೀತಿಯಲ್ಲಿ ನಿಮ್ಮ ವಾಹನಗಳನ್ನು ನಿಲ್ಲಿಸಬೇಡಿ
* ಪ್ರವಾಸಿ ತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಿ
* ಪ್ರವಾಸಿ ತಾಣಗಳಲ್ಲಿ ಮಹಿಳೆಯರು ಅಥವಾ ಹೆಣ್ಣು ಮಕ್ಕಳನ್ನು ಚುಡಾಯಿಸಬೇಡಿ
* ಪ್ಲಾಸ್ಟಿಕ್ ಬಾಟಲ್ ಅಥವಾ ಇತರೆ ಅನುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ
* ಪ್ರಕೃತಿ, ಅದರ ಉತ್ತಮ ನಿರ್ವಹಣೆ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿ ಎಂಬುದು ತಿಳಿಯಿರಿ
* ಶಿಸ್ತು, ಕಾನೂನು ಹಾಗೂ ನೀತಿ ನಿಯಮಗಳನ್ನು ಸದಾ ಅನುಸರಿಸಿ ಹಾಗೂ ಗೌರವಿಸಿ
* ಅರಣ್ಯ ಇಲಾಖೆ, ಜಿಲ್ಲಾಡಳಿತದ ಸೂಚನೆಗಳನ್ನು ತಪ್ಪದೆ ಪಾಲಿಸಿ
* ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಬೇಡಿ
* ದಯವಿಟ್ಟು ಪ್ರವಾಸಿ ಸ್ಥಳಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬೇಡಿ/ ಎಸೆಯಬೇಡಿ
* ನಿಮ್ಮ ಸುರಕ್ಷತೆ ಮತ್ತು ನಿಮ್ಮ ಪ್ರೀತಿಪಾತ್ರರ ಸುರಕ್ಷತೆಯ ಬಗ್ಗೆ ಸದಾ ಜಾಗರೂಕರಾಗಿರಿ
ಮುಂಗಾರು ಮಳೆ ಅವಧಿಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಕೆಲವು ಪ್ರವಾಸಿಗರ ಹುಚ್ಚಾಟದಿಂದಾಗಿ ದೇವರಮನೆ ಮೋಜು, ಮಸ್ತಿಯ ಅಡ್ಡವಾಗಿತ್ತು. ಇದರಿಂದಾಗಿ ಶ್ರೀ ಕ್ಷೇತ್ರ ಕಾಲಭೈರವೇಶ್ವರನ ಸನ್ನಿಧಿಗೆ ಆಗಮಿಸುವ ಭಕ್ತರು ಮುಜುಗರ ಅನುಭವಿಸಿದ್ದರು.
ದೇವರಮನೆಯಲ್ಲಿ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ದೇವಾಲಯವಿದೆ. ಈ ಕ್ಷೇತ್ರಕ್ಕೆ ಭಕ್ತರು ಆಗಮಿಸುತ್ತಾರೆ. ಆದರೆ ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕೆಲವು ಪ್ರವಾಸಿಗತು ಮದ್ಯ ಕುಡಿದು, ಧಮ್ ಹೊಡೆದುಕೊಂಡು, ರಸ್ತೆ ಮಧ್ಯೆ ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸಿಕೊಂಡು, ಜೋರಾಗಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಕೆಲವು ಪ್ರವಾಸಿಗರು ಜೋರಾಗಿ ಕಿರುಚಾಡಿ ಗದ್ದಲವನ್ನು ಎಬ್ಬಿಸುತ್ತಿದ್ದರು. ಸ್ಥಳೀಯರ ಮಾತನ್ನು ಸಹ ಯಾರೂ ಕೇಳುತ್ತಿರಲಿಲ್ಲ. ಆದ್ದರಿಂದ ಪೊಲೀಸರು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು. ಬಳಿಕ ಬಣಕಲ್ ಠಾಣೆ ಪೊಲೀಸರು ದೇವರಮನೆ ಸಂಪರ್ಕಿಸುವ ರಸ್ತೆಯಲ್ಲಿ ಪ್ರವಾಸಿ ವಾಹನಗಳಲ್ಲಿ ಪಾರ್ಟಿ ಮಾಡುವವರ ಮೇಲೆ ದಾಳಿ ಮಾಡಿ ಪ್ರಕರಣ ದಾಖಲು ಮಾಡಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications