ಕ್ರಿಸ್ಮಸ್: ಡಿಸೆಂಬರ್ 21ರಿಂದ ಮಂಗಳೂರು ಜಂಕ್ಷನ್- ಗುಜರಾತ್ ಉಧ್ನಾ ನಡುವೆ ವಿಶೇಷ ರೈಲು, ವೇಳಾಪಟ್ಟಿ ಇಲ್ಲಿದೆ
ಮಂಗಳೂರು, ಡಿಸೆಂಬರ್, 20: ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಕಾರಣದಿಂದ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ರೈಲಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆಯೂ ಕೂಡ ಕಡಿಮೆಯಿತ್ತು. ಕ್ರಿಸ್ಮಸ್ ಆಚರಣೆಗೆ ಸಾಮಾನ್ಯವಾಗಿ ಜನರು ಬೇರೆ ಕಡೆಗೆ ಪ್ರವಾಸ ಮಾಡಲು ಯೋಜನೆ ರೂಪಿಸಿರುತ್ತಾರೆ. ಅದರಲ್ಲೂ ಈ ಬಾರಿ ಕೊರೊನಾ ತಗ್ಗಿದ ಕಾರಣ ಕ್ರಿಸ್ಮಸ್ಗೆ ತುಂಬಾ ಜನರು ಬೇರೆ ಕಡೆಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಆದ್ದರಿಂದ ಕ್ರಿಸ್ಮಸ್ ಉತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಮಂಗಳೂರು ಜಂಕ್ಷನ್ ಹಾಗೂ ಗುಜರಾತ್ನ ಉಧ್ನಾ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧಾರ ಮಾಡಿದೆ. ಮಂಗಳೂರು ಜಂಕ್ಷನ್ ಹಾಗೂ ಗುಜರಾತ್ನ ಉಧ್ನಾ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧಾರ ಮಾಡಿದೆ.
ನಂಬರ್ 09057 ವಿಶೇಷ ರೈಲು, ಉಧ್ನಾದಿಂದ ಡಿಸೆಂಬರ್ 21, 25, 28 ಹಾಗೂ ಜನವರಿ 1ರಂದು (ಬುಧ, ಭಾನುವಾರ) ರಾತ್ರಿ 8ಕ್ಕೆ ಹೊರಟು ಮಂಗಳೂರು ಜಂಕ್ಷನ್ಗೆ ಮರುದಿನ ಸಂಜೆ 6:30ಕ್ಕೆ ತಲುಪಲಿದೆ. ನಂಬರ್ 09058 ಮಂಗಳೂರು ಜಂಕ್ಷನ್ - ಉಧ್ನಾ ರೈಲು ಮಂಗಳೂರು ಜಂಕ್ಷನ್ನಿಂದ ಡಿಸೆಂಬರ್ 22, 26, 29 ಹಾಗೂ ಜನವರಿ 2ರಂದು (ಗುರು, ಸೋಮವಾರ) ಹೊರಟು ಮರುದಿನ ರಾತ್ರಿ 7:25ಕ್ಕೆ ಉಧ್ನಾ ತಲುಪಲಿದೆ. ಒಟ್ಟು ನಾಲ್ಕು ಸೇವೆಗಳಿರುತ್ತವೆ.

ವಿಶೇಷ ರೈಲು ಓಡಿಸಲು ಕೊಂಕಣ ರೈಲ್ವೆ ನಿರ್ಧಾರ
ವಲ್ಸಡ್, ವಾಪಿ, ಫಾಲ್ಗರ್, ವಸಾೖ ರೋಡ್, ಪನ್ವೇಲ್, ರೋಹ, ಖೇಡ್, ಚಿಪ್ಳೂಣ, ಸಂಗಮೇಶ್ವರ ರೋಡ್, ರತ್ನಾಗಿರಿ, ಕಂಕಾವಿಲಿ, ಸಿಂಧೂದುರ್ಗ, ಕುಡಾಳ್, ಸಾವಂತವಾಡಿ ರೋಡ್, ತಿವಿಂ, ಕರ್ಮಾಲಿ, ಮಡಗಾಂವ್, ಕಾಣಕೋಥ, ಕಾರವಾರ, ಅಂಕೋಲಾ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ/ ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಮತ್ತು ಸುರತ್ಕಲ್ಗಳಲ್ಲಿ ಈ ವಿಶೇಷ ರೈಲು ನಿಲುಗಡೆ ಆಗಲಿದೆ. ಈ ವಿಶೇಷ ರೈಲು 2 ಟಯರ್ ಎಸಿ ಸೇರಿದಂತೆ ಒಟ್ಟು 24 ಕೋಚ್ಗಳನ್ನು ಹೊಂದಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಆದೇಶ ಹೊರಡಿಸಿದ್ದ ನೈಋತ್ಯ ರೈಲ್ವೆ
ನೈಋತ್ಯ ರೈಲ್ವೆ ಹಲವು ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದ್ದು, ಮುಂದಿನ ಆದೇಶದ ತನಕ ವಿಸ್ತರಣೆ ಮಾಡಲಾಗಿದೆ. ನೈಋತ್ಯ ರೈಲ್ವೆ ಈ ಕುರಿತು ಆದೇಶ ಹೊರಡಿಸಿದೆ. ಇವುಗಳಲ್ಲಿ ಬೆಂಗಳೂರು, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿಂದ ಸಂಚಾರ ನಡೆಸುವ ಹಲವು ರೈಲುಗಳು ಸೇರಿವೆ. ರೈಲು ಪ್ರಯಾಣಿಕರು ಈ ರೈಲುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಮಾ. 26ರ ವರೆಗೂ ಸಂಚಾರ ವಿಸ್ತರಣೆ
ರೈಲು ನಂಬರ್ 07355 ಹುಬ್ಬಳ್ಳಿ-ರಾಮೇಶ್ವರಂ ವಾರಕ್ಕೊಮ್ಮೆ ಸಂಚಾರ ನಡೆಸುವ ವಿಶೇಷ ರೈಲು ಸೇವೆಯನ್ನು ಮಾರ್ಚ್ 25ರ ತನಕ ವಿಸ್ತರಣೆ ಮಾಡಲಾಗಿದೆ. ಈ ರೈಲು ಸೇವೆ ಡಿಸೆಂಬರ್ 31ಕ್ಕೆ ಅಂತ್ಯವಾಗಬೇಕಿತ್ತು. ರೈಲು ನಂಬರ್ 07356 ರಾಮೇಶ್ವರಂ-ಹುಬ್ಬಳ್ಳಿ ರೈಲು ಸಂಚಾರ ಮಾರ್ಚ್ 26ರ ತನಕ ವಿಸ್ತರಣೆ ಮಾಡಲಾಗಿದೆ.

ವಿಶೇಷ ರೈಲು ತಲುಪುವ ಮಾರ್ಗಗಳು
ಯಶವಂತಪುರ-ವಿಜಯಪುರ ರೈಲು ಸಂಖ್ಯೆ 06545 ಪ್ರತಿ ದಿನದ ವಿಶೇಷ ರೈಲು ಸೇವೆಯನ್ನು ಮಾರ್ಚ್ 31ರ ತನಕ ವಿಸ್ತರಣೆ ಮಾಡಲಾಗಿದೆ. ಈ ರೈಲು ಸೇವೆ ಸಹ ಡಿಸೆಂಬರ್ 31ಕ್ಕೆ ಅಂತ್ಯವಾಗಬೇಕಿತ್ತು. ವಿಜಯಪುರ-ಯಶವಂತಪುರ 06546 ರೈಲಿನ ಸೇವೆಯನ್ನು ಸಹ ಏಪ್ರಿಲ್ 1ರ ತನಕ ವಿಸ್ತರಿಸಲಾಗಿದೆ. ರೈಲು ಸಂಖ್ಯೆ 06223 ಶಿವಮೊಗ್ಗ ಟೌನ್- ಎಂಜಿಆರ್ ಚೆನ್ನೈ ವಾರಕ್ಕೆ ಎರಡು ಬಾರಿ ಸಂಚಾರ ನಡೆಸುವ ರೈಲನ್ನು 2023ರ ಮಾರ್ಚ್ 28ರ ತನಕ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ 27ಕ್ಕೆ ರೈಲು ಸಂಚಾರ ಅಂತ್ಯಗೊಳ್ಳಬೇಕಿತ್ತು. ರೈಲು ಸಂಖ್ಯೆ 06224 ಎಂಜಿಆರ್ ಚೆನ್ನೈ- ಶಿವಮೊಗ್ಗ ಟೌನ್ ವಾರಕ್ಕೆ ಎರಡು ಬಾರಿ ಸಂಚಾರ ನಡೆಸುವ ರೈಲನ್ನು 29/3/2023ರ ತನಕ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ 28ಕ್ಕೆ ರೈಲು ಸಂಚಾರ ಸ್ಥಗಿತವಾಗಬೇಕಿತ್ತು.ಈ ರೈಲು ಸೇವೆಗಳನ್ನು ಮುಂದಿನ ಆದೇಶದ ತನಕ ವಿಸ್ತರಣೆ ಮಾಡಲಾಗಿದೆ. ಬಳಿಕ ರೈಲ್ವೆ ಇಲಾಖೆ ಸೇವೆ ವಿಸ್ತರಣೆ ಮಾಡುವ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ ಎನ್ನುವ ಮಾಹಿತಿ ಹೊರಬಿದ್ದಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications