Davanagere-Ayodhya train: ದಾವಣಗೆರೆ ಮೂಲಕ ಅಯೋಧ್ಯೆಗೆ ರೈಲು?-ಮಾಹಿತಿ ತಿಳಿಯಿರಿ
ದಾವಣಗೆರೆ, ಜನವರಿ, 31: ಅಯೋಧ್ಯೆಯ ರಾಮ ಮಂದಿರವನ್ನು ಜನವರಿ 22ರಂದು ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದರು. ಆಗಿನಿಂದಲೂ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ವಿಶೇಷ ರೈಲು ಸೇವೆಯನ್ನು ಭಾರತೀಯ ರೈಲ್ವೆ ಒದಗಿಸುತ್ತಾ ಬಂದಿದೆ.
ಅಲ್ಲದೆ ಕರ್ನಾಟಕ ಕೆಲವು ಜಿಲ್ಲೆಗಳಿಂದಲೂ ವಿಶೇಷ ರೈಲುಗಳನ್ನು ಬಿಡಲಾಗಿದೆ. ಹಾಗೆಯೇ ಇದೀಗ ದಾವಣಗೆರೆ ಮೂಲಕವೂ ಅಯೋಧ್ಯೆಗೆ ವಿಶೇಷ ರೈಲು ಸೇವೆ ಒದಗಿಸುವಂತೆ ಸಂಸದ ಜಿಎಂ ಸಿದ್ದೇಶ್ವರ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಒತ್ತಾಯಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಬಳಿಕ ಅಯೋಧ್ಯೆಗೆ ಪ್ರತಿದಿನ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಮೂಲಕವೂ ಅಯೋಧ್ಯೆಗೆ ವಿಶೇಷ ರೈಲು ಓಡಿಸುವಂತೆ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಒತ್ತಾಯಿಸಿದ್ದಾರೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಮಂಡಳಿ ಅಧ್ಯಕ್ಷೆ ಜಯವರ್ಮ ಸಿನ್ಹಾ ರವರಿಗೆ ಪತ್ರ ಬರೆದಿರುವ ಸಂಸದ ಜಿಎಂ ಸಿದ್ದೇಶ್ವರ ಅವರು, ರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮೂಲಕ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮೂಲಕ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ ಎಂದರು.
ಹಾಗೆಯೇ ಮಧ್ಯ ಕರ್ನಾಟಕದಲ್ಲಿನ ದಾವಣಗೆರೆ ಮೂಲಕವೂ ವಿಶೇಷ ರೈಲುಗಳು ಇಲ್ಲದೇ ಇರುವುದರಿಂದ ಈ ಭಾಗದ ಜನರಿಗೆ ಅನಾನುಕೂಲ ಆಗಲಿದೆ ಎಂಬುದನ್ನು ವಿವರಿಸಿದ್ದಾರೆ. ಬೆಂಗಳೂರು ಅಥವಾ ಮೈಸೂರು ಕಡೆಯಿಂದ ಹೊರಡುವ ವಿಶೇಷ ರೈಲುಗಳು ಅರಸೀಕರೆ-ಚಿಕ್ಕಾಜಾಜೂರು-ದಾವಣಗೆರೆ-ಹರಪನಹಳ್ಳಿ-ಕೊಟ್ಟೂರು ಮೂಲಕ ಹೊಸಪೇಟೆ ತಲುಪಿ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಬಹುದು ಎಂಬುದನ್ನು ಸಂಸದ ಸಿದ್ದೇಶ್ವರ ಅವರು ಗಮನಕ್ಕೆ ತಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications