Deepavali Special Train: ಬೆಂಗಳೂರು-ಕಾರವಾರ ದೀಪಾವಳಿ ವಿಶೇಷ ರೈಲು, ವೇಳಾಪಟ್ಟಿ
ಬೆಂಗಳೂರು, ಅಕ್ಟೋಬರ್ 19: ಅಕ್ಟೋಬರ್ ತಿಂಗಳ ಅಂತ್ಯ ಮತ್ತು ನವೆಂಬರ್ ಮೊದಲ ವಾರದ ದೀಪಾವಳಿ ಮತ್ತು ವಾರಾಂತ್ಯದ ರಜೆಗಳ ಪ್ರಯುಕ್ತ ನೂರಾರು ಜನರು ಪ್ರಯಾಣಿಸುತ್ತಾರೆ. ಆದ್ದರಿಂದ ಈಗಾಗಲೇ ಬಸ್, ರೈಲುಗಳಲ್ಲಿ ಸೀಟುಗಳು ಭರ್ತಿಯಾಗಿವೆ. ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗಕ್ಕೆ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ಕೊಂಕಣ ರೈಲ್ವೆ ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ಪ್ರಯಾಣಿಕರು ರೈಲು ಸೇವೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಬೆಂಗಳೂರಿನ ಸರ್ ಎಂ. ವೀಶ್ವಶ್ವರಯ್ಯ ಟರ್ಮಿನಲ್, ಬೈಯಪ್ಪನಹಳ್ಳಿ ಮತ್ತು ಕಾರವಾರ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ರೈಲಿನ ವೇಳಾಪಟ್ಟಿ, ನಿಲ್ದಾಣಗಳ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ರೈಲಿನಲ್ಲಿ ಸಂಚಾರ ನಡೆಸುವವರು ಈ ಮಾಹಿತಿ ಆಧರಿಸಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಾರವಾರ-ಸರ್ ಎಂ. ವೀಶ್ವೇಶ್ವರಯ್ಯ ಟರ್ಮಿನಲ್ ನಡುವೆ ರೈಲು ಸಂಖ್ಯೆ 06597/ 06598 ಸಂಚಾರ ನಡೆಸಲಿದೆ ಎಂದು ಕೊಂಕಣ ರೈಲ್ವೆ ಹೇಳಿದೆ. ಈ ರೈಲು 18 ಕೋಚ್ಗಳನ್ನು ಹೊಂದಿರಲಿದೆ. 3ಟೈರ್ ಎಸಿ 2, 10 ಸ್ಲೀಪರ್, 4 ಜನರಲ್, ಎಸ್ಎಲ್ಆರ್ 2 ಕೋಚ್ಗಳನ್ನು ರೈಲು ಹೊಂದಿದೆ.
ವೇಳಾಪಟ್ಟಿ, ನಿಲ್ದಾಣ: ರೈಲು ನಂಬರ್ 06597 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ 13:00 ಗಂಟೆಗೆ 30/10/2024ರ ಬುಧವಾರ ಹೊರಡಲಿದೆ. ಕಾರವಾರಕ್ಕೆ ಮರುದಿನ 4 ಗಂಟೆಗೆ ತಲುಪಲಿದೆ.
ರೈಲು ನಂಬರ್ 06598 ಕಾರವಾರ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಎಕ್ಸ್ಪ್ರೆಸ್ ರೈಲು ಕಾರವಾರದಿಂದ 31/10/2024ರ ಗುರುವಾರ 12:00 ಗಂಟೆಗೆ ಹೊರಡಲಿದೆ. ಮರುದಿನ 4 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ತಲುಪಲಿದೆ.
ಈ ರೈಲು ಹೋಗುವಾಗ ಮತ್ತು ಬರುವಾಗ ಚಿಕ್ಕಬಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕ ರೋಡ್ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲ ನಿಲ್ದಾಣದಲ್ಲಿ ನಿಲುಗಡೆ ಹೊಂದಿದೆ.
ಬೆಂಗಳೂರು-ಮಂಗಳೂರು ವಿಶೇಷ ರೈಲು: ನೈಋತ್ಯ ರೈಲ್ವೆ ಸಹ ಹಬ್ಬದ ಸಂದರ್ಭದಲ್ಲಿ ಉಂಟಾಗುವ ದಟ್ಟಣೆ ತಪ್ಪಿಸಲು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಹಬ್ಬದ ವಿಶೇಷ ರೈಲು ಓಡಿಸುವುದಾಗಿ ಘೋಷಣೆ ಮಾಡಿದೆ. ಅಕ್ಟೋಬರ್ 30, 31ರಂದು ಈ ರೈಲುಗಳು ಸಂಚಾರವನ್ನು ನಡೆಸಲಿವೆ.
ರೈಲು ನಂಬರ್ 06565 ಯಶವಂತಪುರ-ಮಂಗಳೂರು ಜಂಕ್ಷನ್ ರೈಲು ಅಕ್ಟೋಬರ್ 30ರ ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದೆ. ಮರುದಿನ ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ನಂಬರ್ 06566 ಮಂಗಳೂರು ಜಂಕ್ಷನ್-ಯಶವಂತಪುರ ರೈಲು ಅಕ್ಟೋಬರ್ 31ರ ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ ಮೂಲಕ ಸಂಚಾರ ನಡೆಸಲಿದೆ. ರೈಲು 21 ಬೋಗಿಯನ್ನು ಒಳಗೊಂಡಿದೆ.
-
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ











Click it and Unblock the Notifications