Shivamogga Airport: ಶಿವಮೊಗ್ಗದಿಂದ ನವದೆಹಲಿ, ಶಿರಡಿ, ಮುಂಬೈ, ಅಹಮದಾಬಾದ್ಗೆ ವಿಮಾನ ಸೇವೆ ಆರಂಭಕ್ಕೆ ಬೇಡಿಕೆ
Shivamogga Airport: ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಚ್ಚು ಭಾಗಗಳಿಗೆ ವಿಮಾನ ಸೇವೆ ಇಲ್ಲ ಎನ್ನುವ ಕೊರಗು ಇತ್ತು. ಆದರೆ ಇದೀಗ ಇದೇ ವಿಮಾನ ನಿಲ್ದಾಣದಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನ ಆರಂಭಿಸುವಂತೆ ಬೇಡಿಕೆ ಇಡಲಾಗಿದೆ. ಹಾಗಾದರೆ, ಯಾವ್ಯಾವ ಮಾರ್ಗಗಳಿಗೆ ಬೇಡಿಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ವಿಮಾನ ನಿಲ್ದಾಣದಿಂದ ದೇಶದ ಪ್ರಮುಖ ನಿಲ್ದಾಣಗಳಿಗೆ ವಿಮಾನ ಸಂಚಾರ ಆರಂಭಿಸುವಂತೆ ಬೇಡಿಕೆ ಬರುತ್ತಿದೆ. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ಮಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂಡಿಗೋ ಏರ್ ಲೈನ್ಸ್, ಸ್ಪೆತ್ರೖಸ್ ಜೆಟ್ ಏರ್ಲೈನ್ಸ್ ಮತ್ತು ಸ್ಟಾರ್ ಏರ್ಲೈನ್ಸ್ ಸಂಸ್ಥೆಗಳು ಬೆಂಗಳೂರು, ಚೆನ್ನೈ, ಹೈದ್ರಾಬಾದ್, ತಿರುಪತಿ, ಗೋವಾಕ್ಕೆ ಪ್ರತಿದಿನ ವಿಮಾನ ಹಾರಾಟ ನಡೆಯುತ್ತಿದೆ. ಈ ಮೂಲಕ ಪ್ರಯಾಣಿರ ಸಮಯವನ್ನು ಉಳಿತಾಯ ಆಗುತ್ತಿದೆ.

ಈಗಾಗಲೇ ಶಿವಮೊಗ್ಗದಿಂದ 5 ಕಡೆಗಳಿಗೆ ವಿಮಾನ ಸೇವೆ ಆರಂಭ ಆಗಿದ್ದು, ಜನಮನ್ನಣೆ ಪಡೆದುಕೊಂಡಿವೆ. ಇನ್ನು ಇದರ ನಡುವೆಯೇ ಇದೀಗ ದೇಶದ ಬೇರೆ ಬೇರೆ ನಗರಗಳಿಗೆ ವಿಮಾನ ಸೇವೆ ಆರಂಭ ಮಾಡುವಂತೆ ಎಂದು ಸಂಸದರು ಎಂದು ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಡಾನ್ ಯೋಜನೆಯಡಿ ಶಿವಮೊಗ್ಗ-ನವದೆಹಲಿ-ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸಲು ಅನುಮತಿ ಕೋರಲಾಗಿದೆ. ಅಲ್ಲದೆ, ಮಂಬೈ -ಶಿವಮೊಗ್ಗ, ಶಿರಡಿ -ಶಿವಮೊಗ್ಗ-ಶಿರಡಿ, ಬೆಂಗಳೂರು -ಶಿವಮೊಗ್ಗ-ಮುಂಬೈ-ಅಹಮದಾಬಾದ್ ಮಾರ್ಗಗಳು ಹೆಚ್ಚಿನ ಸಾಮರ್ಥ್ಯ ಹೊಂದಿವೆ ಎಂದು ಆಂತರಿಕ ಸಮೀಕ್ಷೆಯಿಂದ ತಿಳಿದುಬಂದಿದೆ. ಈ ಸ್ಥಳಗಳಿಗೆ ಆರ್ಸಿಎಸ್ ಉಡಾನ್ ಯೋಜನೆಯಡಿ ಅವಕಾಶ ಕಲ್ಪಿಸುವಂತೆ ವಿಮಾನಯಾನ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು 2023 ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದರು. ಇನ್ನು ಈ ವಿಮಾನ ನಿಲ್ದಾಣವನ್ನು ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕನಿಷ್ಠ ವೆಚ್ಚದಲ್ಲಿ ನಿರ್ಮಿಸಿದ ದೇಶದ ಮೊದಲ ವಿಮಾನ ನಿಲ್ದಾಣವಾಗಿದೆ. ಇಲ್ಲಿ ವಿಮಾನಗಳು ರಾತ್ರಿ ಇಳಿಯುವಂತಹ ಸುಧಾರಿತ ಸೌಲಭ್ಯಗಳನ್ನು ಹೊಂದಿದೆ.
500 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ 3.50 ಕಿಲೋ ಮೀಟರ್ ರನ್ ವೇ, ಕಾಂಪೌಂಡ್, ಕಾಂಪೌಂಡ್ಗೆ ಹೊಂದಿಕೊಂಡಂತೆ ರಸ್ತೆಗಳು, ನಿಲ್ದಾಣಕ್ಕೆ ಒಂದು ಕಿಲೋ ಮೀಟರ್ ಸಂಪರ್ಕ ರಸ್ತೆ, ವಿಮಾನಗಳು ನಿಲುಗಡೆ ಆಗುವಂತಹ ಏಪ್ರಾನ್, 100 ಕೆ.ವಿ. ಸಾಮಥ್ಯದ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ, ಉಪ ವಿದ್ಯುತ್ ಘಟಕ, ಕೊಳಚೆ ನೀರು ಶುದ್ಧೀಕರಣ ಘಟಕ ಕೂಡ ಇದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications