ಬೀದರ್-ಯಶವಂತಪುರ ರೈಲು ಪ್ರತಿದಿನ ಓಡಿಸಲು ಬೇಡಿಕೆ
ಬೀದರ್, ಜನವರಿ 05: ಕಲಬುರಗಿ ಮತ್ತು ಬೀದರ್ನಿಂದ ರಾಜಧಾನಿ ಬೆಂಗಳೂರು ಸಂಪರ್ಕಿಸಲು ಹೆಚ್ಚಿನ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ ಇದೆ. ಈ ಕುರಿತು ಈಗ ಜನರು ಸಹ ಕೇಂದ್ರ ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ. ಪತ್ರವನ್ನು ಬರೆದು ರೈಲು ಓಡಿಸುವಂತೆ ಒತ್ತಾಯಿಸಿದ್ದಾರೆ.
ಕಲಬುರಗಿಯ ಸಂಸದ ಡಾ. ಉಮೇಶ್ ಜಾಧವ್ ಮೂಲಕ ಕಲಬುರಗಿ ನಗರ ಹಾಗೂ ಲೋಕಸಭಾ ವ್ಯಾಪ್ತಿಗೆ ಹೆಚ್ಚಿನ ರೈಲು ಸೌಲಭ್ಯಗಳು ಬೇಕು ಎಂದು ಸಾಯೀಂದ್ರ ದೇಶಪಾಂಡೆ ಹಾಗೂ ರಾಘವೇಂದ್ರ ರಾವ್ ಕುಲಕರ್ಣಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಪತ್ರ ಬರೆದಿದ್ದಾರೆ.

ಡಿಸೆಂಬರ್ 30ರಂದು ಬರೆದಿರುವ ಪತ್ರದಲ್ಲಿ ಕಲಬುರಗಿ ವ್ಯಾಪ್ತಿಯ ಹಲವು ಬೇಡಿಕೆಗಳನ್ನು ಸಲ್ಲಿಕೆ ಮಾಡಲಾಗಿದೆ. ಬೀದರ್-ಯಶವಂತಪುರ ನಡುವೆ ಭಾನುವಾರ ಸಂಚಾರ ನಡೆಸುವ ರೈಲನ್ನು ಪ್ರತಿದಿನ ಓಡಿಸಬೇಕು ಎಂದು ಮನವಿ ಮಾಡಲಾಗಿದೆ.
ಮನವಿಗಳು ಏನು?; ಕಲಬುರಗಿ ರೈಲ್ವೆ ವಿಭಾಗೀಯ ಕಛೇರಿ 10 ವರ್ಷಗಳ ಹಿಂದೆ ಮಂಜೂರಾಗಿದೆ. ಆದರೆ ಉಳಿದ ಯಾವ ಕೆಲಸಗಳು ಸಹ ಆಗಿಲ್ಲ. ಯಾದಗಿರಿಯ ಸೈದಾಪುರದಲ್ಲಿ ರೈಲ್ವೆ ಕೋಚ್ ಕಾರ್ಖಾನೆ ಮಂಜೂರಾಗಿದೆ, ಆದರೆ ಇನ್ನೂ ಕಾರ್ಯಾರಂಭ ಮಾಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಹಲಕರ್ಟಿ ನಿಲ್ದಾಣಕ್ಕೆ ತೆರಳುವ ರೈಲುಗಳು ವಾಡಿ ಜಂಕ್ಷನ್ಗೆ ಬರುವಂತೆ ಮಾಡಬೇಕು. ಕಲಬುರಗಿ-ಬೆಂಗಳೂರು ನಡುವೆ ಇನ್ನೊಂದು ಹೊಸ ರೈಲು ಓಡಿಸಬೇಕು ಎಂದು ರೈಲ್ವೆ ಸಚಿವರಿಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಅಲ್ಲದೇ ಈ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಹ ಕಳಿಸಲಾಗಿದೆ.
ಕಲಬುರಗಿ-ಹೈದರಾಬಾದ್ ಇಂಟರ್ ಸಿಟಿ ರೈಲು: ಮತ್ತೊಂದು ಕಡೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಕೋವಿಡ್ ಸಮಯದಲ್ಲಿ ರದ್ದುಗೊಂಡಿರುವ ಕಲಬುರಗಿ-ಹೈದರಾಬಾದ್ ರೈಲನ್ನು ಮರು ಆರಂಭಿಸಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಮಾಡಿದೆ.
ರೈಲು ನಂಬರ್ 11307/ 11308 ರೈಲುಗಳ ಸಂಚಾರದಿಂದ ಜನರಿಗೆ ಸಾಕಷ್ಟು ಅನುಕೂಲವಾಗಿತ್ತು. ಕಲಬುರಗಿ, ಶಹಬಾದ್, ವಾಡಿ, ಸೇಡಂ ಸೇರಿದಂತೆ ಅನೇಕ ಪಟ್ಟಣಗಳ ಜನರು, ವ್ಯಾಪಾರಿಗಳಿಗೆ ರೈಲು ಸಂಚಾರದಿಂದ ಉಪಯೋಗವಾಗಿತ್ತು, ಎಂದು ಇಲಾಖೆಗೆ ನೀಡಿರುವ ಮನವಿ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಈ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಈಗ ಜನರಿಗೆ ಅನುಕೂಲವಾಗಲು ಮತ್ತೆ ಈ ರೈಲನ್ನು ಆರಂಭಿಸಬೇಕು ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಮನವಿಯನ್ನು ಸಲ್ಲಿಸಿದೆ.
-
2000 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಯ ಸೊಬಗು: 1.32 ಲಕ್ಷ ಕುಶಲಕರ್ಮಿಗಳಿಗೆ ಮಾರುಕಟ್ಟೆ ಭಾಗ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications