Ooty-Kodaikanal: ಬಿರು ಬೇಸಿಗೆಯಲ್ಲಿ ತಣ್ಣಗೆ ಊಟಿಗೆ ಹೋಗುವ ಪ್ಲ್ಯಾನ್ ಇದ್ದರೆ ಮೊದಲು ಈ ವಿಷಯ ತಿಳಿಯಿರಿ
ಚೆನ್ನೈ, ಏಪ್ರಿಲ್. 30: ಈ ಬಿರು ಬೇಸಿಗೆಯಲ್ಲಿ ತಣ್ಣಗೆ ಊಟಿ ಮತ್ತು ಕೊಡೈಕೆನಾಲ್ಗೆ ಒಂದು ಒಳ್ಳೆ ಟ್ರಿಪ್ ಹೋಗಬೇಕು ಎಂದು ಪ್ಲ್ಯಾನ್ ಮಾಡಿದ್ದಿರಾ? ಹಾಗಾದರೆ ಮೊದಲು ಇಲ್ಲಿ ಓದಿ. ಈ ಜಾಗಗಳಿಗೆ ಭೇಟಿ ನೀಡಲು ನಿಮಗೆ ಇ-ಪಾಸ್ ಕಡ್ಡಾಯವಾಗಿದೆ. ವಾಹನಗಳ ಒಳಹರಿವು, ಪ್ರಸ್ತುತ ಇರುವ ವಿವಿಧ ವಾಹನಗಳು ಮತ್ತು ಬೇಸಿಗೆಯ ತಿಂಗಳುಗಳಲ್ಲಿ ಈ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಗೆ ಸಂಬಂಧಿಸಿದಂತೆ ಡೇಟಾವನ್ನು ಸಂಗ್ರಹಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಮೇ 7 ಮತ್ತು ಜೂನ್ 30 ರ ನಡುವೆ ನೀಲಗಿರಿ ಮತ್ತು ಕೊಡೈಕೆನಾಲ್ಗೆ ಪ್ರವೇಶಿಸಲು ಬಯಸುವ ಎಲ್ಲಾ ಮೋಟಾರು ವಾಹನಗಳು ಎಲೆಕ್ಟ್ರಾನಿಕ್ ಪಾಸ್ಗಳನ್ನು (ಇ-ಪಾಸ್ಗಳು) ಪಡೆಯಬೇಕು. ಎರಡು ಗಿರಿಧಾಮಗಳಿಗೆ ಪ್ರವೇಶಿಸುವ ವಾಹನಗಳ ಸಂಖ್ಯೆ ಸೇರಿ ಎಲ್ಲಾ ಡೇಟಾವನ್ನು ಸಂಗ್ರಹ ಮಾಡಲು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಊಟಿ, ಕೊಡೈಕೆನಾಲ್ಗೆ ಭೇಟಿ ನೀಡಲು ಇ- ಪಾಸ್ ಕಡ್ಡಾಯ
ಮೇ 7 ರಿಂದ ಜೂನ್ 30 ರವರೆಗೆ ಊಟಿ ಮತ್ತು ಕೊಡೈಕೆನಾಲ್ಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಇ-ಪಾಸ್ ಪಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಎನ್.ಸತೀಶ್ ಕುಮಾರ್ ಮತ್ತು ಡಿ.ಭರತ ಚಕ್ರವರ್ತಿ ಅವರನ್ನೊಳಗೊಂಡ ವಿಶೇಷ ವಿಭಾಗೀಯ ಪೀಠ ಸೋಮವಾರ ಆದೇಶ ನೀಡಿದೆ.
ಇದರ ಜೊತೆಗೆ ವಿಶೇಷ ವಿಭಾಗೀಯ ಪೀಠವು ನೀಲಗಿರಿ ಮತ್ತು ದಿಂಡುಗಲ್ ಕಲೆಕ್ಟರೇಟ್ಗಳಿಂದ ಇ-ಪಾಸ್ಗಳ ವಿತರಣೆಗೆ ಯಾವುದೇ ಮಿತಿಯಿಲ್ಲ ಎಂದು ಹೇಳಿದೆ. ಗಮನಾರ್ಹವಾಗಿ, ಈ ಪಾಸ್ಗಳನ್ನು ಪಡೆದುಕೊಳ್ಳುವುದರಿಂದ ಸ್ಥಳೀಯ ನಿವಾಸಿಗಳಿಗೆ ವಿನಾಯಿತಿ ನೀಡಲಾಗಿದೆ. ಇ-ಪಾಸ್ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಇಬ್ಬರು ಜಿಲ್ಲಾಧಿಕಾರಿಗಳು ಮಾಹಿತಿ ತಂತ್ರಜ್ಞಾನ ಇಲಾಖೆಯ ಜೊತೆಗೆ ಇ-ಪಾಸ್ ವ್ಯವಸ್ಥೆಯಲ್ಲಿ ಪಾವತಿ ಗೇಟ್ವೇ ಅನ್ನು ತರುವ ಬಗ್ಗೆ ಚರ್ಚೆ ಮಾಡಲು ನ್ಯಾಯಾಧೀಶರು ತಿಳಿಸಿದ್ದಾರೆ. ಇದು ಅರ್ಜಿದಾರರಿಗೆ ಆನ್ಲೈನ್ನಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು, ಚೆಕ್ಪೋಸ್ಟ್ಗಳ ಬಳಿ ದಟ್ಟಣೆಯನ್ನು ಕಡಿಮೆ ಮಾಡಲು, ಇಂಧನವನ್ನು ಉಳಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ತಡೆಯಲು ಅನುವು ಮಾಡಿಕೊಡುತ್ತದೆ.
ಈ ಹಿಂದೆ, ಪ್ರವಾಸಿಗರ ಸಂಖ್ಯೆಗೆ ಕಡಿವಾಣ ಹಾಕುವ ಹೈಕೋರ್ಟ್ನ ಚಿಂತನೆಗೆ ಪ್ರತಿಕ್ರಿಯೆಯಾಗಿ ನೀಲಗಿರಿ ಮತ್ತು ದಿಂಡುಗಲ್ ಜಿಲ್ಲಾಧಿಕಾರಿಗಳು ವಾಹನ ಸಂಚಾರವನ್ನು ನಿರ್ಬಂಧಿಸಲು ಪ್ರಸ್ತಾಪಿಸಿದರು. ಪೀಕ್ ಸೀಸನ್ಗಳಲ್ಲಿ, ವಾಹನಗಳ ಒಳಹರಿವು ದಿನಕ್ಕೆ 2,000 ರಿಂದ 20,000 ಕ್ಕೆ ಏರುತ್ತದೆ, ಇದು ದಟ್ಟಣೆ ಮತ್ತು ಪರಿಸರ ಹಾನಿಗೆ ಕಾರಣವಾಗುತ್ತದೆ.
ಈ ವಿಷಯವನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳ ವಿಶೇಷ ವಿಭಾಗೀಯ ಪೀಠವು ಈ ವಿಷಯದ ಬಗ್ಗೆ ಚರ್ಚಿಸಿತು. ಘಾಟ್ ರಸ್ತೆಗಳ ಮೇಲಿನ ಒತ್ತಡ ಮತ್ತು ಬೇಸಿಗೆಯಲ್ಲಿ ಅತಿಯಾದ ಪ್ರವಾಸಿ ಚಟುವಟಿಕೆಯಿಂದ ಉಂಟಾಗುವ ಪರಿಸರ ನಾಶವನ್ನು ವಕೀಲರು ಎತ್ತಿ ತೋರಿಸಿದ್ದರು.
ಒಂಬತ್ತು ಚೆಕ್ ಪೋಸ್ಟ್ಗಳ ಮೂಲಕ ಪ್ರತಿದಿನ ಸರಿಸುಮಾರು 20 ಸಾವಿರ ವಾಹನಗಳು ಅಂದರೆ 11,500 ಕಾರುಗಳು, 1,300 ವ್ಯಾನ್ಗಳು, 600 ಬಸ್ಗಳು ಮತ್ತು 6,500 ಬೈಕುಗಳು ನೀಲಗಿರಿ ಪ್ರವೇಶಿಸುತ್ತವೆ ಎಂದು ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ಇದನ್ನು ಓದಿ ನ್ಯಾಯಾಧೀಶರು ಆತಂಕ ವ್ಯಕ್ತಪಡಿಸಿದ್ದಾರೆ. ವಾಹನ ದಟ್ಟಣೆ ನಡುವೆ ಪ್ರಾಣಿಗಳ ಬಗ್ಗೆಯೂ ಆತಂಕ ಹೊರಹಾಕಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications