IndiGo: ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಇಂಡಿಗೋ
ನವದೆಹಲಿ, ಮೇ. 29: ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಹಿಳೆಯರು ಕೆಲವೊಮ್ಮೆ ಇರಿಸು ಮುರುಸು ಅನುಭವಿಸಬಹುದು. ಪಕ್ಕದಲ್ಲಿ ಕುಳಿತ ಪುರುಷ ಪ್ರಯಾಣಿಕರಿಂದ ಅಥವಾ ಬೇರೆ ಯಾವುದೇ ಕಾರಣ ಇರಬಹುದು. ಹೀಗಾಗಿ ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗಾಗಿ ಇಂಡಿಯೋ ವಿಮಾನಯಾನ ಸಿಹಿ ಸುದ್ದಿ ನೀಡಿದೆ.
ಇಂಡಿಗೋದಲ್ಲಿನ ಮಹಿಳಾ ಪ್ರಯಾಣಿಕರು ವೆಬ್ ಚೆಕ್ ಇನ್ ಸಮಯದಲ್ಲಿ ಬೇರೆ ಮಹಿಳೆಯರು ಯಾವ ಎಲ್ಲಾ ಸೀಟುಗಳನ್ನು ಮುಂಗಡವಾಗಿ ಕಾಯ್ದಿರಿಸಿದ್ದಾರೆ ಎಂಬುದನ್ನು ನೋಡಬಹುದು. ಬಳಿಕ ಅವರ ಪಕ್ಕದಲ್ಲಿಯೇ ಸೀಟುಗಳು ಬೇಕು ಎನ್ನುವುದಾದರೇ ಅವರ ಆಯ್ಕೆ ಪ್ರಕಾರವೇ ಸೀಟುಗಳನ್ನು ರಿಸರ್ವ್ ಮಾಡಬಹುದು.

ನಿಮ್ಮ ಆಯ್ಕೆಯ ಸೀಟು ನಿಮಗೆ!
ಭಾರತೀಯ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಮತ್ತು ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಏರ್ಲೈನ್ಸ್, ಮಹಿಳಾ ಪ್ರಯಾಣಿಕರಿಗೆ ಅಗತ್ಯವಿದ್ದಲ್ಲಿ ಇತರ ಮಹಿಳಾ ಪ್ರಯಾಣಿಕರಿಗೆ ಮುಂದಿನ ಸೀಟುಗಳನ್ನು ಆಯ್ಕೆ ಮಾಡುವ ಆಯ್ಕೆ ನೀಡಿದೆ. ಏರ್ಲೈನ್ ಈ ವಿಷಯದ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಇದು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಇಂಡಿಯೋ ಈ ಆಯ್ಕೆಯನ್ನು ಮಹಿಳಾ ಪ್ರಯಾಣಿಕರಿಗೆ ನೀಡಿದೆ. ಅಶಿಸ್ತಿನ ಪ್ರಯಾಣಿಕರು ಮಹಿಳೆಯರಿಗೆ ತೊಂದರೆ ಉಂಟುಮಾಡಬಹುದು ಮತ್ತು ಅವರಿಗೆ ಪ್ರಯಾಣದಲ್ಲಿ ಬೇಸರ ಉಂಟುಮಾಡಬಹುದು ಎಂದಿದೆ.

ಏರ್ಲೈನ್ಸ್ ತನ್ನ ಹೇಳಿಕೆಯಲ್ಲಿ, "ನಮ್ಮ ಮಹಿಳಾ ಪ್ರಯಾಣಿಕರಿಗೆ ಪ್ರಯಾಣದ ಅನುಭವವನ್ನು ಹೆಚ್ಚು ಆರಾಮದಾಯಕವಾಗಿಸಲು. ಮಹಿಳಾ ಪ್ರಯಾಣಿಕ ಅನುಕೂಲಕ್ಕಾಗಿ ಇದನ್ನು ಜಾರಿಗೆ ತರಲಿದೆ. ಮಹಿಳಾ ಪ್ರಯಾಣಿಕರು ಒಂಟಿಯಾಗಿ ಮತ್ತು ಕುಟುಂಬದ ಜೊತೆಯಲ್ಲಿಯೂ ಬುಕಿಂಗ್ ಮಾಡಬಹುದು. ಇದು ಪ್ರಸ್ತುತ ನಮ್ಮ 'ಗರ್ಲ್ ಪವರ್' ರೂಲ್ಸ್ ಜೊತೆಗೆ ಹೊಂದಾಣಿಕೆಯಾಗಲಿದೆ" ಎಂದಿದ್ದಾರೆ.
2023 ರಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಪುರುಷ ಪ್ರಯಾಣಿಕರೊಬ್ಬರು ವಯಸ್ಸಾದ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಹೆಚ್ಚು ಚರ್ಚಿತವಾಗಿತ್ತು. ಇದಾದ ನಂತರ ಇಂತಹದ್ದೆ ಹಲವು ಘಟನೆಗಳು ಬಹಿರಂಗವಾಗಿದ್ದವು. ಸದ್ಯ ಇಂಡಿಗೋ ಏರ್ಲೈನ್ಸ್ನ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications