Shivamogga Airport: ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಸಮಯಗಳ ವಿವರ
ಶಿವಮೊಗ್ಗ, ಅಕ್ಟೋಬರ್, 17: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೂರು ಹೊಸ ಸ್ಥಳಗಳಿಗೆ ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿದ್ದು, ಟಿಕೆಟ್ ಬುಕ್ಕಿಂಗ್ ಕೂಡ ಆರಂಭವಾಗಿದೆ. ಹಾಗಾದರೆ ಯಾವ ಮಾರ್ಗಗಳಿಗೆ ವಿಮಾನ ಸೇವೆ ಮತ್ತು ಯಾವಾಗ ಆರಂಭ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸ್ಟಾರ್ ಏರ್ ಲೈನ್ಸ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದಿಂದ ತನ್ನ ಕಾರ್ಯಾಚರಣೆ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದೆ. ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ಗೆ ವಾರದಲ್ಲಿ 6 ದಿನ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಈ ಸೇವೆಯು ನವೆಂಬರ್ 17ರಿಂದ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಸ್ಟಾರ್ ಏರ್ ವಿಮಾನವು ಬೆಳಗ್ಗೆ 9:30ಕ್ಕೆ ಹೈದರಾಬಾದ್ನಿಂದ ಹೊರಡಲಿದ್ದಿ, ಬೆಳಗ್ಗೆ 10:35ಕ್ಕೆ ಶಿವಮೊಗ್ಗ ತಲುಪಲಿದೆ. ಬೆಳಗ್ಗೆ 11ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಮಧ್ಯಾಹ್ನ 12:35ಕ್ಕೆ ಹೊರಟು ಮಧ್ಯಾಹ್ನ 1:40ಕ್ಕೆ ಶಿವಮೊಗ್ಗಕ್ಕೆ ವಾಪಸ್ ಆಗಲಿದೆ.
ಬಳಿಕ ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2.45ಕ್ಕೆ ಗೋವಾ ತಲುಪಲಿದೆ. ಮತ್ತೆ ಗೋವಾದಿಂದ ಮಧ್ಯಾಹ್ನ 3:15ಕ್ಕೆ ಹೊರಟು ಸಂಜೆ 4:05ಕ್ಕೆ ಶಿವಮೊಗ್ಗ ತಲುಪಲಿದೆ. ಸಂಜೆ 4:30ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5.30ಕ್ಕೆ ಹೈದರಾಬಾದ್ ತಲುಪಲಿದೆ. ಅಲ್ಲದೆ ಈಗಾಗಲೇ ಬುಕಿಂಗ್ ಪ್ರಕ್ರಿಯೆ ಕೂಡ ಆರಂಭ ಆಗಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 31ರಂದು ಬೆಂಗಳೂರು-ಶಿವಮೊಗ್ಗ ಮಾರ್ಗದಲ್ಲಿ ವಿಮಾನ ಸೇವೆಗಳೊಂದಿಗೆ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಗೋವಾ, ತಿರುಪತಿ ಮತ್ತು ಹೈದರಾಬಾದ್ನ ಮೂರು ಸ್ಥಳಗಳಿಗೆ ನೇರ ವಿಮಾನ ಹಾರಾಟ ಆರಂಭ ಮಾಡಲಾಗುತ್ತದೆ. ಬೆಂಗಳೂರು ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ಸ್ಟಾರ್ ಏರ್ ಶಿವಮೊಗ್ಗದಿಂದ ಈ ಮೂರು ಸ್ಥಳಗಳಿಗೆ ವಿಮಾನಯಾನವನ್ನು ಪ್ರಾರಂಭಿಸಲಿದೆ.
ವಿಮಾನಯಾನ ಸಂಸ್ಥೆಯು ಅಕ್ಟೋಬರ್ 15ರಂದು ಬೆಂಗಳೂರು-ಕೊಲ್ಲಾಪುರ-ಮುಂಬೈಗೆ ಹೊಸ ವಿಮಾನವನ್ನು ಪ್ರಾರಂಭಿಸಿತು. ಪ್ರಸ್ತುತ ಇಂಡಿಗೋ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ತಡೆರಹಿತ ದೈನಂದಿನ ವಿಮಾನಗಳನ್ನು ನಿರ್ವಹಿಸುತ್ತಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ₹449.22 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ರನ್ವೇಯಲ್ಲಿ ಎ320 ವಿಮಾನಗಳಿಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ವಾಣಿಜ್ಯ ವಿಮಾನಗಳನ್ನು ನಿರ್ವಹಿಸುವ ಕರ್ನಾಟಕದ ಈ 9ನೇ ವಿಮಾನ ನಿಲ್ದಾಣವನ್ನು ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಈ ವಿಮಾನ ನಿಲ್ದಾಣವು ಬಹಳಷ್ಟು ಪ್ರವಾಸಿ ತಾಣಗಳನ್ನು ಹೊಂದಿರುವ ಶಿವಮೊಗ್ಗ ಮತ್ತು ಕರ್ನಾಟಕದ ಮಲೆನಾಡು ಪ್ರದೇಶಗಳಿಗೆ ಸಂಪರ್ಕ ಸಾಧಿಸುವ ನಿರೀಕ್ಷೆಯಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications