ಬೆಂಗಳೂರು-ಮೈಸೂರು, ಬೆಂಗಳೂರು-ತುಮಕೂರು ನಡುವೆ 4 ಪಥದ ರೈಲು ಮಾರ್ಗ
ಬೆಂಗಳೂರು, ಜೂನ್ 24: ನೈಋತ್ಯ ರೈಲ್ವೆ ಬೆಂಗಳೂರು ನಗರ ಸಂಪರ್ಕಿಸುವ ಎರಡು ಪ್ರಮುಖ ನಗರಗಳ ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಲು ಮುಂದಾಗಿದೆ. ಈ ಯೋಜನೆ ಕುರಿತು ಈಗಾಗಲೇ ರೈಲ್ವೆ ಮಂಡಳಿಗೆ ವರದಿ ಸಲ್ಲಿಕೆಯಾಗಿದ್ದು, ಬಜೆಟ್ನಲ್ಲಿ ಘೋಷಣೆಯಾಗಲಿದೆಯೇ? ಕಾದು ನೋಡಬೇಕಿದೆ.
ಹೆಚ್ಚುತ್ತಿರುವ ರೈಲುಗಳ ಸಂಖ್ಯೆ, ರೈಲುಗಳ ಸುಗಮ ಸಂಚಾರ, ರೈಲಿನ ವೇಗ ಹೆಚ್ಚಳ ಮಾಡುವುದು ಮುಂತಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. 4 ಪಥದ ರೈಲು ಯೋಜನೆಗೆ ಪ್ರಾಥಮಿಕ ಸಮೀಕ್ಷೆಯೂ ಪೂರ್ಣಗೊಂಡಿದೆ.

ಸದ್ಯ ಬೆಂಗಳೂರು ನಗರಕ್ಕೆ ಈ ಎರಡು ನಗರಗಳಿಂದ ಜೋಡಿ ಮಾರ್ಗವಿದೆ. ಆದರೆ ದಿನದಿಂದ ದಿನಕ್ಕೆ ರೈಲುಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದ್ದರಿಂದ ನಾಲ್ಕು ಪಥದ ಮಾರ್ಗದ ಪ್ರಸ್ತಾವನೆ ತಯಾರಿಸಲಾಗಿದೆ. ರೈಲ್ವೆ ಇಲಾಖೆ ಮೊದಲು ಯೋಜನೆಗೆ ಒಪ್ಪಿಗೆ ನೀಡಬೇಕಿದೆ.
ಯಾವ-ಯಾವ ನಗರ: ಬೆಂಗಳೂರು-ಮೈಸೂರು ನಡುವೆ 137 ಕಿ. ಮೀ. ಮತ್ತು ಬೆಂಗಳೂರು-ತುಮಕೂರು ನಡುವೆ 70 ಕಿ. ಮೀ. 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಈ ಮಾರ್ಗ ನಿರ್ಮಾಣದಿಂದ ರೈಲುಗಳ ಸಂಚಾರಕ್ಕೆ ಅನುಕೂಲವಾಗುವ ಜೊತೆಗೆ ಆದಾಯವೂ ಹೆಚ್ಚಳವಾಗಲಿದೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದ್ದು, ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಕೆ ಮಾಡಲಾಗಿದೆ.
ನಾಲ್ಕು ಪಥದ ಮಾರ್ಗ ನಿರ್ಮಾಣಕ್ಕೆ ಆಗುವ ಅಂದಾಜು ವೆಚ್ಚ, ಯೋಜನೆಗೆ ಬೇಕಾದ ಜಮೀನು, ರೈಲುಗಳ ವೇಗ ಎಷ್ಟು ಹೆಚ್ಚಿಸಬಹುದು, ಆರ್ಥಿಕ ಲಾಭಗಳು ಮುಂತಾದ ಅಂಶಗಳನ್ನು ಸೇರಿಸಿ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದೆ. ರೈಲ್ವೆ ಇಲಾಖೆ ಮಾಹಿತಿ ಪ್ರಕಾರ ಈ ಕುರಿತು ಅಂತಿಮ ಹಂತದ ಸ್ಥಳ ಸಮೀಕ್ಷೆ ನಡೆಯಲಿದೆ. ಬಳಿಕ ಯೋಜನೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಬೆಂಗಳೂರು ನಗರ ಹೊರತುಪಡಿಸಿ ಇತರ ನಗರಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡುತ್ತಿರುವ ಸರ್ಕಾರ ಮೊದಲು ರಾಜಧಾನಿಯಿಂದ ಹತ್ತಿರದ ನಗರಗಳಿಗೆ ಸಾರಿಗೆ ಸೇವೆ ಉತ್ತಮಗೊಳಿಸಲು ಪ್ರಯತ್ನ ನಡೆಸುತ್ತಿದೆ. ಬೆಂಗಳೂರು-ಮೈಸೂರು ನಡುವೆ ವಂದೇ ಭಾರತ್ ಸೇರಿ ಅನೇಕ ರೈಲುಗಳ ಸಂಚಾರವಿದೆ.
ಬೆಂಗಳೂರು-ತುಮಕೂರು ಮಾರ್ಗ ಉತ್ತರ ಕರ್ನಾಟಕ, ಮಲೆನಾಡು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ತುಮಕೂರು ಕೈಗಾರಿಕಾ ಹಬ್ ಆಗಿ ಬದಲಾಗುತ್ತಿದೆ. ಈಗಿರುವ ಹೆದ್ದಾರಿ, ಜೋಡಿ ರೈಲ್ವೆ ಹಳಿ ಮೇಲೆ ಒತ್ತಡ ಸಾಕಷ್ಟಿದೆ. ಆದ್ದರಿಂದ ನಾಲ್ಕು ಪಥದ ಮಾರ್ಗ ನಿರ್ಮಾಣ ಮಾಡಿ, ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಲಾಗಿದೆ.
ಬೆಂಗಳೂರು-ಮೈಸೂರು ಮಾರ್ಗದಲ್ಲಿ ತಿರುವುಗಳು ಹೆಚ್ಚಿವೆ. ವಂದೇ ಭಾರತ್ ಸೇರಿ ಅನೇಕ ರೈಲುಗಳು ಸಂಚಾರ ನಡೆಸುತ್ತಿದ್ದರೂ ಸಹ ಪ್ರಯಾಣದ ಅವಧಿ ಹೆಚ್ಚಿದೆ. ಆದ್ದರಿಂದ ನಾಲ್ಕು ಪಥ ನಿರ್ಮಾಣ ಮಾಡಿ ಸಂಚಾರ ವ್ಯವಸ್ಥೆ ಸುಗಮವಾಗಿಸುವುದು ರೈಲ್ವೆ ಇಲಾಖೆಯ ಉದ್ದೇಶವಾಗಿದೆ.
ತುಮಕೂರು ಸಂಸದ ವಿ. ಸೋಮಣ್ಣ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದಾರೆ. ಕಳೆದ ವಾರ ಅವರು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಆದ್ದರಿಂದ ರಾಜಧಾನಿ ಮೇಲಿನ ಒತ್ತಡ ಕಡಿಮೆ ಮಾಡುವ, ಸಂಚಾರ ಸುಲಭವಾಗಿಸುವ ಈ ನಾಲ್ಕು ಪಥದ ಯೋಜನೆಗೆ ಒಪ್ಪಿಗೆ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸಲಿದ್ದಾರೆ. ಸಾಮಾನ್ಯ ಬಜೆಟ್ ಜೊತೆಗೆ ರೈಲ್ವೆ ಬಜೆಟ್ ಮಂಡನೆಯಾಗುತ್ತದೆ. ಆದ್ದರಿಂದ ಈ ಚತುಷ್ಪಥ ರೈಲು ಯೋಜನೆ ಘೋಷಣೆಯಾಗಲಿದೆಯೇ? ಕಾದು ನೋಡಬೇಕು.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications