ಹೊಸ ವರ್ಷಕ್ಕೆ ಹಿಮಾಚಲ ಪ್ರದೇಶ ಪ್ರವಾಸಿಗರಿಗೆ ಸಿಹಿಸುದ್ದಿ
ಶಿಮ್ಲಾ, ಡಿಸೆಂಬರ್ 28: ಹೊಸ ವರ್ಷಕ್ಕೆ ಹೆಚ್ಚೆಚ್ಚು ಪ್ರವಾಸಿಗರು ಭೇಟಿ ನೀಡುವ ದೃಷ್ಟಿಯಿಂದ ಹಿಮಾಚಲ ಪ್ರದೇಶದ ಎಲ್ಲಾ ರೆಸ್ಟೋರೆಂಟ್ಗಳು, ಡಾಬಾಗಳು, ಟೀ ಸ್ಟಾಲ್ಗಳು ಮತ್ತು ಇತರ ತಿನಿಸುಗಳು ಜನವರಿ 2 ರವರೆಗೆ ದಿನದ 24 ಗಂಟೆಯೂ ತೆರೆದಿರಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಶಿಮ್ಲಾ, ಮನಾಲಿ ಮತ್ತು ಕಸೌಲಿಯ ಶಾಸಕರ ಮನವಿ ಮತ್ತು ಸಲಹೆಯ ಮೇರೆಗೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪ್ರಸ್ತುತ ಪ್ರವಾಸಿ ಋತುವನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿದರೆ ಈ ವ್ಯವಸ್ಥೆಯನ್ನು ಮುಂದುವರಿಸಲು ಸರ್ಕಾರವು ಪರಿಗಣಿಸಬಹುದು ಎಂದು ಅವರು ಹೇಳಿದರು. ರಾತ್ರಿ ವೇಳೆಯಲ್ಲಿ ಹೋಟೆಗಳು ರೆಸ್ಟೋರೆಂಟ್ಗಳು ಮುಚ್ಚಲ್ಪಟ್ಟಿದ್ದರಿಂದ ಪ್ರವಾಸಿಗರು ರಾಜ್ಯದಲ್ಲಿ ಸಿಗುವ ವಿಶೇಷ ಆಹಾರ ಪದಾರ್ಥಗಳನ್ನು ಪತ್ತೆಹಚ್ಚಲು ಕಷ್ಟಪಡುತ್ತಿದ್ದರು. ಅಲ್ಲದೆ ಶಿಮ್ಲಾದಲ್ಲಿ ಪ್ರವಾಸಿಗರು ಶೋಘಿಗೆ (ರಾಜ್ಯ ರಾಜಧಾನಿಯಿಂದ ಸುಮಾರು 15 ಕಿ.ಮೀ) ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಡಾಬಾಗಳಿಗೆ ಪ್ರಯಾಣಿಸುತ್ತಿದ್ದರು. ಇತರ ಗಿರಿಧಾಮಗಳಲ್ಲೂ ಇದೇ ಪರಿಸ್ಥಿತಿ ಇತ್ತು.

ಹಾಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೋವಿಡ್ ಸೂಕ್ತ ನಡವಳಿಕೆಯನ್ನು ಅಳವಡಿಸಿಕೊಳ್ಳುವಂತೆ ಪ್ರವಾಸಿಗರನ್ನು ಒತ್ತಾಯಿಸಿದ್ದಾರೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜನವರಿ 2 ರವರೆಗೆ ರೆಸ್ಟೋರೆಂಟ್ಗಳು, ಡಾಬಾಗಳು, ಟೀ ಸ್ಟಾಲ್ಗಳು ಮತ್ತು ಇತರ ತಿನಿಸುಗಳು 24 ಗಂಟೆ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಪರ್ವತ ರಾಜ್ಯವಾದ ಹಿಮಾಚಲ ಪ್ರದೇಶ ದೇಶದ ಅತ್ಯಂತ ಆದ್ಯತೆಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ರಾಜ್ಯವು ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ರಾಜ್ಯವಾಗಿದೆ.
ಹಿಮಾಚಲ ಪ್ರದೇಶವು ಪ್ರಸ್ತುತ ಶೂನ್ಯಕ್ಕಿಂತ ಕಡಿಮೆ ತಾಪಮಾನವಿದ್ದು, ಚಳಿಯಿಂದ ತತ್ತರಿಸುತ್ತಿದೆ. ಆದಾಗ್ಯೂ, ಹಲವಾರು ಸ್ಥಳಗಳಲ್ಲಿ ಹಿಮಪಾತವಿದ್ದರೂ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಮಹಾರಾಷ್ಟ್ರದ ಪ್ರವಾಸಿ ಅನಿಕೇತ್ ಅವರು ಈ ಚಳಿಗಾಲದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಶಿಮ್ಲಾ ಮತ್ತು ಹತ್ತಿರದ ಸ್ಥಳಗಳ ನಗರಕ್ಕೆ ಬರುತ್ತಿದ್ದಾರೆ. ಹೀಗಾಗಿ ಹೋಟೆಲ್ ಪಡೆಯುವುದು ಕಷ್ಟಕರವಾಗಿದೆ ಎಂದು ಹೇಳಿದರು.
ಕೊನೆಗೂ ನಾನು ಅದನ್ನು ನಿಭಾಯಿಸಲು ಸಾಧ್ಯವಾಯಿತು ಮತ್ತು ಹೋಟೆಲ್ ಸಿಕ್ಕಿತು. ನಾನು ಕಳೆದ 2 ದಿನಗಳಿಂದ ಇಲ್ಲಿಯೇ ಇದ್ದೇನೆ. ಆದರೆ ಈಗ ನಾನು ಕುಲು ಜಿಲ್ಲೆಯ ಕಸೋಲ್ ಪ್ರದೇಶಕ್ಕೆ ಶಿಫ್ಟ್ ಆಗಲು ಯೋಜಿಸುತ್ತಿದ್ದೇನೆ. ನಾನು ಇಲ್ಲಿ ಹಿಮಪಾತವಾಗದ ಕಾರಣ ಸ್ವಲ್ಪ ಭಯ ಇರುವುದರಿಂದ ನಾನು ಎತ್ತರದ ಪ್ರದೇಶಗಳಿಗೆ ಹೋಗಲು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಇತರ ಭಾಗಗಳಲ್ಲಿ ಹಿಮಪಾತವನ್ನು ನಾವು ಗಮನಿಸಿದ್ದೇವೆ. ಇಲ್ಲಿಗೆ ಬಂದಿರುವುದು ಒಂದು ರೋಮಾಂಚಕ ಅನುಭವವಾಗಿದೆ. ಈ ಹೊಸ ವರ್ಷ ಮತ್ತು ಕ್ರಿಸ್ಮಸ್ ಹಬ್ಬದ ಸಮಯದಲ್ಲಿ, ಇದು ರಜಾದಿನಗಳನ್ನು ಕಳೆಯಲು ಉತ್ತಮ ಸ್ಥಳವಾಗಿದೆ ಎಂದು ಅವರು ಹೇಳಿದ್ದಾರೆ. ಹೊಸ ವರ್ಷಕ್ಕೆ ಮುಂಚಿತವಾಗಿ ಪ್ರವಾಸಿಗರು ಇಲ್ಲಿನ ಸುಂದರ ವಾತಾವರಣವನ್ನು ಆನಂದಿಸಲು ನೆರೆಯ ರಾಜ್ಯಗಳಾದ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಿಂದಲೂ ಧಾವಿಸುತ್ತಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications