Gopalaswamy Hill: ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಪ್ರವಾಸಿಗರಿಗೆ ಗುಡ್ ನ್ಯೂಸ್
ಚಾಮರಾಜನಗರ, ಡಿಸೆಂಬರ್, 21: ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಡಿಸೆಂಬರ್ 18ರಿಂದ 20ರವರೆಗೆ ರಸ್ತೆ ಡಾಂಬರೀಕರಣ ಉದ್ದೇಶದಿಂದ ನಿರ್ಬಂಧಿಸಲಾಗಿದ್ದ ವಾಹನ ಸಂಚಾರ ಇಂದಿನಿಂದ ಮತ್ತೆ ಆರಂಭಗೊಂಡಿದೆ.
ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆ ತೀವ್ರ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದ ಹಿನ್ನೆಲೆ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 11.20 ಕಿ.ಮೀ ರಸ್ತೆಗೆ ಡಾಂಬರೀಕರಣ ಮಾಡಿ ದುರಸ್ತಿಪಡಿಸಲಾಗಿದೆ. ಈ ಕಾರಣದಿಂದ ಮೂರು ದಿನಗಳ ಕಾಲ ನಿರ್ಬಂಧಿಸಿದ ಬಸ್ ಸಂಚಾರ ಗುರುವಾರ ಎಂದಿನಂತೆ ಪ್ರಾರಂಭವಾಗಿದೆ.

ಕಳೆದ ಮೂರು ದಿನಗಳ ಬೆಟ್ಟಕ್ಕೆ ನಿರ್ಬಂಧ ಹೇರಿದ ಹಿನ್ನೆಲೆ ಗುರುವಾರ ಬೆಳಗ್ಗೆಯಿಂದ ಪ್ರವೇಶ ಆರಂಭವಾದರೂ ಸಹ ಭಕ್ತಾದಿಗಳು ಹಾಗೂ ಪ್ರವಾಸಿಗರ ಸಂಖ್ಯೆ ಬಹಳ ಕಡಿಮೆಯಿತ್ತು. ಕೇವಲ ಮೂರು ಕೆಎಸ್ಆರ್ಟಿಸಿ ಬಸ್ಗಳನ್ನು ಮಾತ್ರ ಗೋಪಾಲಸ್ವಾಮಿ ಬೆಟ್ಟಕ್ಕೆ ಬಿಡಲಾಗಿತ್ತು ಎಂದು ಡಿಪೋ ವ್ಯವಸ್ಥಾಪಕರಾದ ಪುಷ್ಪಾ ಮಾಹಿತಿ ನೀಡಿದರು. ಈ ಮಧ್ಯೆ ಅರಣ್ಯ ಇಲಾಖೆಯಿಂದಲೂ ಬೆಟ್ಟಕ್ಕೆ ಮೂರು ಜೀಪ್ಗಳು ಎಂದಿನಂತೆ ಸಂಚಾರ ಮಾಡಿವೆ.
ಗೋಪಾಲಸ್ವಾಮಿ ಬೆಟ್ಟದ ಹದಗೆಟ್ಟ ರಸ್ತೆ ದುರಸ್ತಿ ಪಡಿಸಲಾಗಿದ್ದು, ಬಸ್ ಸಂಚಾರ ಎಂದಿನಂತೆ ಗುರುವಾರದಿಂದ ಪ್ರಾರಂಭಗೊಂಡಿದೆ. ಭಕ್ತಾದಿಗಳು ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಮಿಸಿ, ಪ್ರಕೃತಿ ಸೌಂದರ್ಯ ಸವಿಯುವ ಜೊತೆಗೆ ದೇವರ ದರ್ಶನ ಪಡೆಯಬಹುದು ಎಂದು ಗುಂಡ್ಲುಪೇಟೆ ಡಿಪೋ ವ್ಯವಸ್ಥಾಪಕಿ ಪುಷ್ಪಾ ತಿಳಿಸಿದ್ದಾರೆ.
ಗೋಪಾಲಸ್ವಾಮಿ ಬೆಟ್ಟಕ್ಕೆ ಯಾಕೆ ನಿರ್ಬಂಧ?
ಗುಂಡ್ಲುಪೇಟ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾಗುವ ರಸ್ತೆ ಡಾಂಬರೀಕರಣ ನಡೆಯುತ್ತಿದ್ದು, ಈ ಮಾರ್ಗದಲ್ಲಿ ಡಿಸೆಂಬರ್ 18ರಿಂದ 20ರವರೆಗೆ ಮೂರು ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಿಂದ ದೇವಸ್ಥಾನಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟ ಹಿನ್ನೆಲೆ ವಾಹನ ಸಂಚಾರಕ ತೀವ್ರ ಅಡಚಣೆ ಉಂಟಾಗುತ್ತಿತ್ತು. ಈ ಬಗ್ಗೆ ಪ್ರವಾಸಿಗರು ಹಾಗೂ ಪ್ರಯಾಣಿಕರಿಂದ ವ್ಯಾಪಕವಾಗಿ ದೂರುಗಳು ಸಹ ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತ ಲೋಕೋಪಯೋಗಿ ಇಲಾಖೆ ಇದೀಗ ರಸ್ತೆ ದುರಸ್ತಿಗೊಳಿಸಿ 11.20 ಕಿಲೋ ಮೀಟರ್ ರಸ್ತೆ ಡಾಂಬರೀಕರಣ ಮಾಡಲು ಮುಂದಾಗಿತ್ತು.
ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಿಂದ ಪ್ರತಿನಿತ್ಯ ಕೆಎಸ್ಆರ್ಟಿಸಿ ವತಿಯಿಂದ 5 ಬಸ್ಗಳನ್ನು ಬಿಡಲಾಗಿತ್ತು. ವಾರಾಂತ್ಯ ಹಾಗೂ ವಿಶೇಷ ದಿನಗಳಲ್ಲಿ 20ಕ್ಕೂ ಅಧಿಕ ಬಸ್ಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದವು. ಜೊತೆಗೆ ಅರಣ್ಯ ಇಲಾಖೆ ವತಿಯಿಂದ ನಾಲ್ಕೈರಿಂದ ಐದು ಜೀಪ್ಗಳನ್ನು ಸಹ ಬಿಡಲಾಗಿತ್ತು. ಇದೀಗ ರಸ್ತೆ ಡಾಂಬರೀಕರಣ ಮಾಡುವ ಉದ್ದೇಶದಿಂದ ಎಲ್ಲಾ ವಾಹನಗಳಿಗೆ ನಿರ್ಬಂಧಿಸಲಾಗಿತ್ತು.
ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಹಾಗೂ ಪ್ರವಾಸಿಗರು ಡಿಸೆಂಬರ್ 18ರಿಂದ 20ರವರೆಗೆ ಮೂರು ದಿನಗಳ ಕಾಲ ಬೆಟ್ಟಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆ ಸಹಕಾರ ನೀಡಬೇಕೆಂದು ತಹಶೀಲ್ದಾರ್ ಟಿ.ರಮೇಶ್ ಬಾಬು ತಿಳಿಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications