ಪ್ರವಾಸಿ ತಾಣದ ಶುಲ್ಕ ಸಂಗ್ರಹ ಹೊಣೆ ಗ್ರಾಮ ಪಂಚಾಯಿತಿಗೆ?
ಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರ ರಾಜ್ಯದ ಪ್ರವಾಸಿ ತಾಣಗಳ ಶುಲ್ಕ ಸಂಗ್ರಹದ ಹೊಣೆಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಿದೆಯೇ?. ಪ್ರವಾಸೋದ್ಯಮ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಇದರದಲ್ಲಿ ಈ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ.
ಕರ್ನಾಟಕ ಆಡಳಿತ ಸುಧಾರಣಾ ಆಯೋಗ 2ರ ಅಧ್ಯಕ್ಷ, ನಿವೃತ್ತ ಮುಖ್ಯಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 7ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದ್ದಾರೆ. ಪ್ರವಾಸೋದ್ಯಮ ಇಲಾಖೆಗೆ ಕುರಿತು ಹಲವು ಅಂಶಗಳನ್ನು ಶಿಫಾರಸು ಮಾಡಿದ್ದಾರೆ.

ಆಯೋಗದ 7ನೇ ವರದಿಯಲ್ಲಿ ಪ್ರವಾಸೋದ್ಯಮ ಸೇರಿ 9 ಇಲಾಖೆಗಳ ಸುಧಾರಣೆಗೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ. ಇವು ಕೇವಲ ಶಿಫಾರಸು ಆಗಿದ್ದು, ಸರ್ಕಾರ ಇದನ್ನು ಒಪ್ಪಿ, ಜಾರಿಗೊಳಿಸುವ ಕುರಿತು ಆದೇಶ ಹೊರಡಿಸಬೇಕಿದೆ.
ಪ್ರವಾಸೋದ್ಯಮ ಇಲಾಖೆ ಶಿಫಾರಸುಗಳು
* ಸ್ಥಳೀಯ ನಿವಾಸಿಗಳ ಪಾಲ್ಗೊಳ್ಳುವಿಕೆಯು ಸುಸ್ಥಿರ ರಕ್ಷಣೆ, ಉತ್ತಮ ನಿರ್ವಹಣೆ, ಸ್ವಚ್ಛತೆ ಮತ್ತು ಸಣ್ಣ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕಾರಣವಾಗುತ್ತದೆ. ಉದಾಹರಣೆಗೆ, ಕಾಸರಕೋಡ್ ಗ್ರಾಮ ಅರಣ್ಯ ಸಮಿತಿಯು ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಗಳ ಬೆಂಬಲದೊಂದಿಗೆ ಹೊನ್ನಾವರ ಬಳಿಯ ಕಾಸರಕೋಡ್ ಇಕೋ ಬೀಚ್ ಅನ್ನು ನಿರ್ವಹಿಸುತ್ತದೆ. ಇರುಪ್ಪು ಜಲಪಾತ ಮತ್ತು ಚೇಲಾವರ ಜಲಪಾತಗಳ ನಿರ್ವಹಣೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ.
* ಗ್ರಾಮ ಅರಣ್ಯ ಸಮಿತಿಗಳ ಮಾದರಿಯಲ್ಲಿ, ಗ್ರಾಮ ಪಂಚಾಯತ್ ಮತ್ತು ಪುರಸಭೆಯ ಪರಂಪರೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗಳನ್ನು ಸ್ಥಾಪಿಸಲು ಶಿಫಾರಸು ಮಾಡಲಾಗಿದೆ. ಸಮಿತಿಗಳು ಸ್ಥಳೀಯ ಗ್ರಾಮ ಪಂಚಾಯತ್ ಅಥವಾ ಪುರಸಭೆಯ ಅಧ್ಯಕ್ಷರು, ಸದಸ್ಯರು, ಸ್ಥಳೀಯ ತಜ್ಞರು, ಉತ್ಸಾಹಿಗಳು, ದಾನಿಗಳು, ಸ್ಥಳೀಯ ಅಧಿಕಾರಿಗಳು ಇತ್ಯಾದಿಗಳನ್ನು ಒಳಗೊಂಡಿರಬಹುದು.
* ಪ್ರವಾಸಿ ತಾಣಗಳನ್ನು ಆತಿಕ್ರಮಣದಿಂದ ರಕ್ಷಿಸುವುದು, ಶೌಚಾಲಯಗಳು ಮತ್ತು ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು ಮತ್ತು ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಗಳನ್ನು ಗ್ರಾಮ ಪಂಚಾಯತ್/ ಪುರಸಭೆ ಸಮಿತಿಗಳಿಗೆ ನೀಡಬಹುದು. ಈ ಉದ್ದೇಶಕ್ಕಾಗಿ, ಪ್ರವಾಸೋದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಪಾರ್ಕಿಂಗ್ ಶುಲ್ಕ ಮತ್ತು ಸಂದರ್ಶಕರ ಶುಲ್ಕವನ್ನು ಸಂಗ್ರಹಿಸುವ ಅಧಿಕಾರವನ್ನು ಅವರಿಗೆ ನೀಡಬಹುದು.
* ಜಿಲ್ಲಾಧಿಕಾರಿಗಳು ತಮ್ಮ ಅಪಾರ ಅಧಿಕಾರ ಹಾಗೂ ವ್ಯಾಪ್ತಿಯಿಂದಾಗಿ ಪ್ರವಾಸೋದ್ಯಮ ಸೌಲಭ್ಯಗಳನ್ನು ಸ್ಥಾಪಿಸಲು ಸ್ಥಳೀಯ ಉದ್ಯಮಿಗಳನ್ನು ಗುರುತಿಸಬಹುದು ಮತ್ತು ಪ್ರೋತ್ಸಾಹಿಸಬಹುದು. ಆದ್ದರಿಂದ ರೂ. 5 ಕೋಟಿ ವರೆಗೆ ಹೂಡಿಕೆ ಮಾಡುವವರಿಗೆ ಹೊಸ ಹೋಂಸ್ಟೇಗಳು, ರೆಸಾರ್ಟ್ಗಳು ಮತ್ತು ಹೋಟೆಲ್ಗಳಿಗೆ ಸಬ್ಸಿಡಿ ಮಂಜೂರು ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸ್ಥಳೀಯ ಜಿಲ್ಲಾ ಪ್ರವಾಸೋದ್ಯಮ ಸಮಿತಿಗೆ (ಡಿಟಿಸಿ) ವಹಿಸಬಹುದು, ಜಿಲ್ಲಾಧಿಕಾರಿಗಳು ಮಂಜೂರಾತಿ ನೀಡಿದ ನಂತರ, ಸಬ್ಸಿಡಿ ಹಣವನ್ನು ಇಲಾಖೆಯಿಂದ ಬಿಡುಗಡೆ ಮಾಡಬಹುದು.
* ರಾಜ್ಯದ 31 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯಗಳನ್ನು ಸ್ಥಾಪಿಸಲಾಗಿರುವುದಿಲ್ಲ. ಈ 20 ಜಿಲ್ಲೆಗಳಲ್ಲಿ ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸಲು ಹಂತ ಹಂತವಾಗಿ ಯೋಜಿಸಲು ಮತ್ತು ಪ್ರಸ್ತಾಪಿಸಲು ಕ್ರಮ ತೆಗೆದುಕೊಳ್ಳಬಹುದು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications