ಹೆಲಿಕಾಪ್ಟರ್ನಲ್ಲಿ ಲಡಾಖ್ ಸುತ್ತಾಡಬೇಕೇ: ನಿಮಗೊಂದು ಅವಕಾಶ!
ಲಡಾಖ್, ಜೂನ್ 28: ಲಡಾಖ್ನಲ್ಲಿ ಪ್ರಯಾಣಿಸಲು ಬಯಸುವ ಪ್ರಯಾಸಿಗರಿಗೆ ಸಿಹಿಸುದ್ದಿಯೊಂದನ್ನು ನೀಡಲಾಗಿದೆ. ಕೇಂದ್ರಾಡಳಿತ ಪ್ರದೇಶದಾದ್ಯಂತ ಪ್ರಯಾಣಿಸುವುದಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಪ್ರಾರಂಭಿಸಲಾಗಿದೆ.
ಮೊದಲ ಬ್ಯಾಚ್ ಪ್ರವಾಸಿಗರು ಈಗಾಗಲೇ ಹೆಲಿ ಸೇವೆ ಪಡೆದುಕೊಂಡಿದ್ದಾರೆ, ಮಂಗಳವಾರ ಮೊದಲ ಬ್ಯಾಚ್ ನಲ್ಲಿ ಪ್ರವಾಸಿಗರಿಗೆ ಹೆಲಿಕಾಪ್ಟರ್ ಸೇವೆ ಒದಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಸೇವೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸಾಮಾನ್ಯವಾಗಿ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಲಭ್ಯವಿರುತ್ತವೆ ಎಂದು ಆಡಳಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಡಾಖ್ನ ನಾಗರಿಕ ವಿಮಾನಯಾನ ಇಲಾಖೆಯ ಆದೇಶದ ಪ್ರಕಾರ, ಲಡಾಖ್ನ ನಿವಾಸಿಗಳಿಗೆ ಸೇವೆಯನ್ನು ಪಡೆಯಲು ದರಗಳನ್ನು ಸೂಚಿಸಿದೆ. ಈ ಹೆಲಿಕಾಪ್ಟರ್ ಸೇವೆಗಳ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಟಿಕೆಟ್ ಬುಕ್ ಮಾಡಲು ಆನ್ಲೈನ್ನಲ್ಲಿ ವ್ಯವಸ್ಥೆ
"ಅಧಿಸೂಚಿತ ಮಾರ್ಗಗಳಲ್ಲಿ ಹೆಲಿಕಾಪ್ಟರ್ ಸೇವೆಯನ್ನು ಪಡೆದುಕೊಳ್ಳಲು ಬಯಸುವ ಪ್ರಯಾಣಿಗರು ಮೊದಲೇ ಆನ್ಲೈನ್ನ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಹೀಗೆ ಕಾಯ್ದಿರಿಸಲು ಬಯಸುವ ವ್ಯಕ್ತಿಗಳು ಆನ್ಲೈನ್ನಲ್ಲಿ https://heliservice.ladakh.gov.in/" ನಲ್ಲಿ ಟಿಕೆಟ್ಗಳನ್ನು ಬುಕ್ ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೊರಗಿನ ಪ್ರವಾಸಿಗರಿಗೆ ವಿಭಿನ್ನ ಬುಕಿಂಗ್ ವ್ಯವಸ್ಥೆ
ಲಡಾಖ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಸೇವೆಯನ್ನು ಮುಕ್ತವಾಗಿ ಒದಗಿಸಲು ಎಲ್ಲ ರೀತಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯರಿಗೆ ಬೇರೆ ಮತ್ತು ಹೊರಗಿನ ಪ್ರವಾಸಿಗರಿಗೆ ಸುಲಭವಾಗಲು ವಿಭಿನ್ನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಲಡಾಖ್ ನಿವಾಸಿಗಳನ್ನು ಹೊರತುಪಡಿಸಿ ಇತರ ಪ್ರಯಾಣಿಕರಿಗೆ ಪೋರ್ಟಲ್ನಲ್ಲಿ ವಿಭಿನ್ನ ಬುಕಿಂಗ್ ಕಾರ್ಯವಿಧಾನವನ್ನು ಲಭ್ಯಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹವಾಮಾನ ಪರಿಸ್ಥಿತಿ, ಇತರೆ ಕಾರ್ಯಾಚರಣೆ ಮೇಲೆ ಟಿಕೆಟ್ ಲಭ್ಯತೆ
ಲಡಾಖ್ ವಲಯದಲ್ಲಿ ಹೆಲಿಕಾಪ್ಟರ್ ಸೇವೆಯನ್ನು ಪಡೆದುಕೊಳ್ಳುವುದಕ್ಕೆ ಟಿಕೆಟ್ ಬುಕ್ ಮಾಡುವವರು ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಟಿಕೆಟ್ನ ಲಭ್ಯತೆಯು ಪ್ರಯಾಣಿಕರ ಸಂಖ್ಯೆ, ಹವಾಮಾನ ಪರಿಸ್ಥಿತಿ ಅಥವಾ ಯಾವುದೇ ಇತರ ಕಾರ್ಯಾಚರಣೆಯ ನಿರ್ಬಂಧಗಳನ್ನು ಅವಲಂಬಿಸಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೆಲಿಕಾಪ್ಟರ್ ಸೇವೆಯನ್ನು ಒದಗಿಸಲು ಯಾವ ಚಾಪರ್ ಬಳಕೆ?
ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಲಿಕಾಪ್ಟರ್ ಸೇವೆಯನ್ನು ಒದಗಿಸುವುದಕ್ಕೆ ಎರಡು ಚಾಪರ್ ಅನ್ನು ಬಳಕೆ ಮಾಡಿಕೊಳ್ಳಲಾಗಿದೆ. ಐದು ಆಸನಗಳನ್ನು ಹೊಂದಿರುವ ಬಿ-3 ಚಾಪರ್ ಮತ್ತು Mi-172 ಚಾಪರ್ ಅನ್ನು ಹೆಲಿಕಾಪ್ಟರ್ ಸೇವೆಗಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸೇವೆಗಳು ಲೇಹ್, ಕಾರ್ಗಿಲ್, ಪಾಡುಮ್, ಲಿಂಗ್ಶೆಡ್, ಡಿಬ್ಲಿಂಗ್, ನೇರಾಕ್, ಡಿಸ್ಕಿಟ್, ಟರ್ಟುಕ್, ಶ್ರೀನಗರ ಮತ್ತು ಜಮ್ಮುವಿನಲ್ಲೂ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications