Jio Rail Appನಲ್ಲಿ ರೈಲು ಟಿಕೆಟ್ ಬುಕ್ ಮಾಡುವುದೇಗೆ?-ವಿಧಾನಗಳು ಇಲ್ಲಿವೆ
Jio Rail App: ರೈಲ್ವೆ ಭಾರತದ ಸಾರಿಗೆ ವಿಭಾಗಗಳಲ್ಲಿ ಅತೀ ಹೆಚ್ಚು ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಸಾಗಿಸುವ ದೊಡ್ಡ ಸಾರಿಗೆಯಾಗಿದೆ. ಪ್ರತಿನಿತ್ಯವೂ ಲಕ್ಷಾಂತರ ಜನರು ಈ ಸಾರಿಗೆಯಲ್ಲಿ ಪ್ರಯಾಣ ಮಾಡುತ್ತಿರುತ್ತಾರೆ. ಇನ್ನು ರೈಲು ಟಿಕೆಟ್ಗಳನ್ನು ಬುಕ್ ಮಾಡಲು ಐಆರ್ಸಿಟಿಯಿಂದ ಹಲವು ಆಪ್ಗಳಿಗೆ ಅನುಮತಿ ನೀಡಿದೆ. ಹಾಗೆಯೇ ಜಿಯೋಗೂ ಕೂಡ ಅನುಮತಿ ಕಲ್ಪಿಸಿದೆ. ಹಾಗಾದರೆ ಜಿಯೋ ಆಪ್ನಲ್ಲಿ ಕನ್ಫರ್ಮ್ ರೈಲು ಟಿಕೆಟ್ ಬುಕ್ ಮಾಡುವ ವಿಧಾನಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದೇಶದಲ್ಲಿಯೇ ಅತ್ಯಂತ ಸಿರಿವಂತರಲ್ಲಿ ಒಬ್ಬರೆನಿಸಿಕೊಂಡಿರುವ ಮುಖೇಶ್ ಅಂಬಾನಿ ಟೆಲಿಕಾಂ ಕ್ಷೇತ್ರದಲ್ಲಿ ದೊಡ್ಡ ಮೈಲುಗಲ್ಲು ತಲುಪುವ ಮೂಲಕ, ಮಾರುಕಟ್ಟೆಯಲ್ಲಿ ಎಲ್ಲಾ ಕಂಪನಿಗಳು ದಂಗಾಗುವಂತೆ ಮಾಡಿದ್ದಾರೆ. ಇನ್ನು ಅಂಬಾನಿ ನೇತೃತ್ವದ ಜಿಯೋ ದೇಶಾದ್ಯಂತ 46 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿದ್ದು, ಜಿಯೋ ರೈಲ್ ಆಪ್ (Jio Rail App) ಅನ್ನು ಕೂಡ ಆರಂಭಿಸಿದ್ದಾರೆ. ಹಾಗಾದರೆ ಇದರಲ್ಲಿ ಸುಲಭವಾಗಿ ಕನ್ಫರ್ಮ್ ಟಿಕೆಟ್ ಬುಕ್ ಮಾಡುವ ವಿಧಾನಗಳನ್ನು ಇಲ್ಲಿ ತಿಳಿಯಿರಿ.

ಜಿಯೋ ಆರಂಭವಾದಾಗಿನಿಂದ ಬಳಕೆದಾರರಿಗೆ ಜಿಯೋ ಸಿನಿಮಾದಿಂದ ಹಿಡಿದು ಹಲವು ಸೇವೆಗಳನ್ನು ಒದಗಿಸುತ್ತಲೇ ಬಂದಿದ್ದು, ಈ ಸೇವೆಗಳಲ್ಲಿ ಜಿಯೋ ರೈಲ್ ಟಿಕೆಟ್ ಬುಕ್ಕಿಂಗ್ ಆಪ್ ಒಂದಾಗಿದೆ. ನೀವು ಈಗಲೇ ಈ ಆಪ್ ಮೂಲಕ ಕನ್ಫರ್ಮ್ ರೈಲು ಟಿಕೆಟ್ ಬುಕ್ ಮಾಡಬಹುದಾಗಿದೆ.
2019ರಲ್ಲಿಯೇ ಕಂಪನಿಯು ಜಿಯೋ ರೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿತು. ಇದರ ಸಹಾಯದಿಂದ, ಕನ್ಫರ್ಮ್ ರೈಲು ಟಿಕೆಟ್ಗಳನ್ನು ಪಡೆಯುವುದು ತುಂಬಾ ಸುಲಭವಾಗುತ್ತದೆ. ಆದರೆ ಜಿಯೋ ಫೋನ್ ಬಳಕೆದಾರರು ಮಾತ್ರ ಈ ಅಪ್ಲಿಕೇಶನ್ ಅನ್ನು ಬಳಸಬಹುದು. IRCTC ಸಹಯೋಗದೊಂದಿಗೆ Jio ರೈಲ್ ಅಪ್ಲಿಕೇಶನ್ ಕನ್ಫರ್ಮ್ ರೈಲು ಟಿಕೆಟ್ಗಳನ್ನು ಪಡೆಯಲು ಜನರಿಗೆ ಸಹಾಯ ಮಾಡುತ್ತದೆ. ಈ ಆ್ಯಪ್ನ ಸಹಾಯದಿಂದ ನೀವು ಆನ್ಲೈನ್ನಲ್ಲಿ ರೈಲು ಟಿಕೆಟ್ಗಳನ್ನು ಬುಕ್ ಮಾಡಬಹುದು.
ಟಿಕೆಟ್ ಬುಕ್ ಮಾಡುವುದೇಗೆ?
1. Jio ಫೋನ್ನಲ್ಲಿ Jio Rail Appಗೆ ಭೇಟಿ ನೀಡಿ.
2. ಅಪ್ಲಿಕೇಶನ್ ಓಪನ್ ಮಾಡಿ ಪ್ರಯಾಣ ಮಾಡಲು ಬಯಸುವ ನಿಲ್ದಾಣವನ್ನು ಆಯ್ಕೆ ಮಾಡಿ.
3. ಪ್ರಯಾಣದ ದಿನಾಂಕವನ್ನು ಆಯ್ಕೆಮಾಡಿ, ಬಳಿಕ ರೈಲು ಮತ್ತು ಆಸನವನ್ನು ಆಯ್ಕೆಮಾಡಿ.
4. ಹಣಪಾವತಿ ಆಯ್ಕೆಯನ್ನು ಕ್ಲಿಕ್ ಮಾಡಿ, ಬುಕಿಂಗ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
5. ಕೊನೆಯದಾಗಿ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಜಿಯೋ ಮನಿ/ ಯುಪಿಐ ಮೂಲಕ ಆನ್ಲೈನ್ ಪಾವತಿ ಮಾಡುವ ಮೂಲಕ ಟಿಕೆಟ್ಗಳನ್ನು ಬುಕ್ ಮಾಡಬಹುದಾಗಿದೆ.
-
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications