Get Updates
Get notified of breaking news, exclusive insights, and must-see stories!

ಹಡಗಲಿ-ಬೆಂಗಳೂರು; ನಾನ್ ಎಸಿ ಸ್ಲೀಪರ್ ಬಸ್, ವೇಳಾಪಟ್ಟಿ

ಬೆಂಗಳೂರು, ಫೆಬ್ರವರಿ 18; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಯ ವಿಜಯನಗರ ಜಿಲ್ಲೆಯ ಹೊಸಪೇಟೆ ವಿಭಾಗ ಹಡಗಲಿ-ಬೆಂಗಳೂರು ನಡುವೆ ನೂತನ ಬಸ್ ಸೇವೆ ಆರಂಭಿಸಿದೆ. ಹವಾನಿಯಂತ್ರಣ ರಹಿತ ಬಸ್ ಸೇವೆ ಇದಾಗಿದ್ದು, ಜನರು ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆಯ ವಿಭಾಗೀಯ ನಿಯಂತ್ರಾಣಾಧಿಕಾರಿಗಳು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಜನಪ್ರತಿನಿಧಿಗಳು ಹಾಗೂ ಪ್ರಯಾಣಿಕರ ಬೇಡಿಕೆ ಮೇರೆಗೆ ಪ್ರತಿಷ್ಠಿತ ವಾಹನಗಳ ಸೇವೆ ಒದಗಿಸುವ ಉದ್ದೇಶದಿಂದ ಹಡಗಲಿ-ಬೆಂಗಳೂರು ಬಸ್ ಸೇವೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

Huvina Hadagali Bengaluru Non Ac Bus Route And Schedule

ವೇಳಾಪಟ್ಟಿ; ಹಡಗಲಿ-ಬೆಂಗಳೂರು ನಡುವಿನ ನಾನ್ ಎಸಿ ಬಸ್ ವಯಾ ಹರಪನಹಳ್ಳಿ, ಹರಿಹರ, ದಾವಣಗೆರೆ ಮಾರ್ಗದಲ್ಲಿ ಫೆಬ್ರವರಿ 16 ರಿಂದ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಪ್ರಕಟಣೆ ಹೇಳಿದೆ.

ಈ ಬಸ್ ಹಡಗಲಿಯಿಂದ ರಾತ್ರಿ 9.30ಕ್ಕೆ ಹೊರಟು, 10.30ಕ್ಕೆ ಹರಪನಹಳ್ಳಿಗೆ, 11.30ಕ್ಕೆ ಹರಿಹರ ತಲುಪಲಿದೆ. 11.59ಕ್ಕೆ ದಾವಣಗೆರೆಯಿಂದ ನಿರ್ಗಮಿಸಿ ಬೆಳಗ್ಗೆ 5.30ಕ್ಕೆ ಬೆಂಗಳೂರು ನಗರ ತಲುಪಲಿದೆ.

ಬೆಂಗಳೂರಿನಿಂದ ರಾತ್ರಿ 10.45ಕ್ಕೆ ನಿರ್ಗಮಿಸುವ ಬಸ್, ದಾವಣಗೆರೆಗೆ ಬೆಳಗ್ಗೆ 4.15ಕ್ಕೆ, ಹರಿಹರಕ್ಕೆ 4.50ಕ್ಕೆ, ಹರಪನಹಳ್ಳಿಗೆ 5.25ಕ್ಕೆ ಹಾಗೂ ಹಡಗಲಿಗೆ 6 ಗಂಟೆಗೆ ಬಂದು ತಲುಪಲಿದೆ.

ಸಂಡೂರು-ಹೈದರಾಬಾದ್‌ ಎಸಿ ಬಸ್; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಯ ಬಳ್ಳಾರಿ ವಿಭಾಗದ ಸಂಡೂರು ಘಟಕ ಸಂಡೂರು-ಹೈದರಾಬಾದ್‌ (ದೋಣಿಮಲೈ, ವಿದ್ಯಾನಗರ, ಬಳ್ಳಾರಿ, ಆಲೂರು, ಕರ್ನೂಲ್ ಮಾರ್ಗ) ಪ್ರತಿಷ್ಠಿತ ಎಸಿ ಸ್ಲೀಪರ್ ನೂತನ ಬಸ್ ಸಂಚಾರ ಆರಂಭಸಿದೆ.

ಈ ಬಸ್ ಸಂಡೂರಿನಿಂದ ರಾತ್ರಿ 7ಕ್ಕೆ ಹೊರಟು, ಬಳ್ಳಾರಿಗೆ ರಾತ್ರಿ 10ಕ್ಕೆ ಆಗಮಿಸಿ (ವಯಾ ಆಲೂರು, ಕರ್ನೂಲ್ ಮಾರ್ಗ) ಹೈದರಾಬಾದ್‌ಗೆ ಬೆಳಗ್ಗೆ 6.10ಕ್ಕೆ ತಲುಪಲಿದೆ. ಪ್ರಯಾಣ ದರವು ಸಂಡೂರಿನಿಂದ ರೂ. 1,290 ಹಾಗೂ ಬಳ್ಳಾರಿಯಿಂದ ರೂ.1,120 ಇರಲಿದೆ.

ಹೈದರಾಬಾದ್‌ನಿಂದ ರಾತ್ರಿ 9.46ಕ್ಕೆ ಹೊರಡುವ ಬಸ್ ಬಳ್ಳಾರಿಗೆ 6.15ಕ್ಕೆ (ಪ್ರಯಾಣ ದರ ರೂ. 1,120) ಹಾಗೂ ಸಂಡೂರಿಗೆ ಬೆಳಗ್ಗೆ 8ಕ್ಕೆ (ಪ್ರಯಾಣ ದರ ರೂ.1,290) ಆಗಮಿಸಲಿದೆ.

ಪ್ರಯಾಣಿಕರು ಮುಂಗಡ ಆಸನಗಳನ್ನು ಬುಕ್ ಮಾಡಲು www.ksrtc.in ವೆಬ್‌ಸೈಟ್‌ಗೆ ಲಾಗ್ ಇನ್ ಆಗಬೇಕು. ನೂತನ ಬಸ್ ಸೇವೆಯನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಸಂಡೂರು-ಬೆಂಗಳೂರು ಬಸ್; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಳ್ಳಾರಿ ವಿಭಾಗದ ಸಂಡೂರು ಘಟಕ ಸಂಡೂರು-ಬೆಂಗಳೂರು (ವಯಾ ದೋಣಿಮಲೈ, ವಿದ್ಯಾನಗರ, ತೋರಣಗಲ್ಲು, ಕುಡುತಿನಿ, ಬಳ್ಳಾರಿ, ಚಳ್ಳಕೆರೆ) ಎಸಿ ಸ್ಲೀಪರ್ ನೂತನ ಬಸ್ ಸಂಚಾರ ಆರಂಭಿಸಿದೆ.

ಈ ಬಸ್ ಸಂಡೂರಿನಿಂದ ರಾತ್ರಿ 9.30ಕ್ಕೆ ಹೊರಟು, ದೋಣಿಮಲೈಗೆ ರಾತ್ರಿ 10.15ಕ್ಕೆ, ವಿದ್ಯಾನಗರ (ಜೆಎಸ್‍ಡಬ್ಲ್ಯೂ)ಕ್ಕೆ ರಾತ್ರಿ 10.35ಕ್ಕೆ, ಬಳ್ಳಾರಿಗೆ ರಾತ್ರಿ 11.30ಕ್ಕೆ ಆಗಮಿಸಲಿದೆ. ಬೆಂಗಳೂರಿಗೆ ಬೆಳಗ್ಗೆ 6 ಗಂಟೆಗೆ ತಲುಪಲಿದೆ.

ಬಸ್‌ನಲ್ಲಿ ಸಂಡೂರಿನಿಂದ ರೂ. 1,000, ದೋಣಿಮಲೈನಿಂದ ರೂ. 960, ವಿದ್ಯಾನಗರದಿಂದ ರೂ. 920 ಹಾಗೂ ಬಳ್ಳಾರಿಯಿಂದ ರೂ.830 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ.

ಬೆಂಗಳೂರಿನಿಂದ ರಾತ್ರಿ 10.30ಕ್ಕೆ ಹೊರಡುವ ಬಸ್, ಬಳ್ಳಾರಿಗೆ ಬೆಳಗ್ಗೆ 5.45ಕ್ಕೆ ಆಗಮಿಸಲಿದೆ. ವಿದ್ಯಾನಗರಕ್ಕೆ ಬೆಳಗ್ಗೆ 6.30ಕ್ಕೆ, ದೋಣಿಮಲೈಗೆ ಬೆಳಗ್ಗೆ 7 ಗಂಟೆಗೆ ಹಾಗೂ ಸಂಡೂರಿಗೆ ಬೆಳಗ್ಗೆ 7.30ಕ್ಕೆ ಆಗಮಿಸಲಿದೆ.

ಮುಂಗಡ ಆಸನಗಳನ್ನು ಕಾಯ್ದಿರಿಸಲು www.ksrtc.in ವೆಬ್‌ಸೈಟ್‌ಗೆ ಭೇಟಿ ನೀಡಿಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+