Indian Railways: ಪೊಂಗಲ್ ಹಬ್ಬ ಹಿನ್ನೆಲೆ ಬೆಂಗಳೂರು-ಕೊಚುವೇಲಿ ನಡುವೆ ವಿಶೇಷ ರೈಲು-ಸಮಯ & ದಿನಾಂಗಳ ವಿವರ ತಿಳಿಯಿರಿ
ಬೆಂಗಳೂರು, ಫೆಬ್ರವರಿ, 23: ಅಟ್ಟುಕಲ್ ಪೊಂಗಲ್ ಹಿನ್ನೆಲೆ ರೈಲ್ವೆಯು ಬೆಂಗಳೂರು ಎಸ್ಎಂವಿಟಿ ಮತ್ತು ಕೊಚುವೇಲಿ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಹಾಗಾದರೆ ಸಮಯಗಳು, ದಿನಾಂಕಗಳು ಮತ್ತು ಎಲ್ಲೆಲ್ಲಿ ನಿಲುಗಡೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೈಲು ಸಂಖ್ಯೆ 06501 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್ಪ್ರೆಸ್ ವಿಶೇಷ ರೈಲು, ಫೆಬ್ರವರಿ 24ರಂದು ರಾತ್ರಿ 11:55ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ರಾತ್ರಿ 7:10ಕ್ಕೆ ಕೊಚುವೇಲಿ ತಲುಪುತ್ತದೆ. ರೈಲು ಸಂಖ್ಯೆ 06502 ಕೊಚುವೇಲಿ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು, ಫೆಬ್ರವರಿ 25ರಂದು ರಾತ್ರಿ 10 ಗಂಟೆಗೆ ಕೊಚುವೇಲಿಯಿಂದ ಹೊರಟು ಮರುದಿನ ಸಂಜೆ 4:30ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸುತ್ತದೆ.

ಇದು ವೈಟ್ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ಒಟ್ಟಪ್ಪಲಂ, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗನ್ನೂರ್, ಕಾಯಂಕುಲಂ ಮತ್ತು ಕೊಲ್ಲಂನಲ್ಲಿ ನಿಲುಗಡೆಯಾಗಲಿದೆ ಎಂದು ತಿಳಿಸಿದೆ.
ನವದೆಹಲಿ-ಬೆಂಗಳೂರು ನಡುವೆ ಸಾಪ್ತಾಹಿಕ ಪಾರ್ಸೆಲ್ ರೈಲು ಸೇವೆ
ಭಾರತೀಯ ರೈಲ್ವೆಯು ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇದೆ. ಈ ಬದಲಾವಣೆಗಳನ್ನು ಪ್ರಯಾಣಿಕರ ವಿಭಾಗ ಹಾಗೂ ಗೂಡ್ಸ್ ವಿಭಾಗಗಳಲ್ಲೂ ಕಾಣಬಹುದಾಗಿದೆ. ಇನ್ನು ರಾಪಿಡ್ ಕಾರ್ಗೋ ಎಕ್ಸ್ಪ್ರೆಸ್, ಸಾಪ್ತಾಹಿಕ ಪಾರ್ಸೆಲ್ ಎಕ್ಸ್ಪ್ರೆಸ್ ಸೇವಾ ರೈಲು ಬೆಂಗಳೂರಿನ ಯಶವಂತಪುರ ಮತ್ತು ದೆಹಲಿಯ ತುಘಲಕಾಬಾದ್ ನಡುವೆ ಓಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ಸೇವೆಯ ಸಮಯಗಳ ವಿವರವನ್ನು ಇಲ್ಲಿ ತಿಳಿಯಿರಿ.
ನೈಋತ್ಯ ರೈಲ್ವೆ ಪ್ರಕಾರ, ತುಘಲಕಾಬಾದ್ನಿಂದ ಮೊದಲ ಸೇವೆಯು ಫೆಬ್ರವರಿ 27 ರಂದು 11:15ಕ್ಕೆ ಪ್ರಾರಂಭವಾಗಲಿದ್ದು, ಫೆಬ್ರವರಿ 29ರಂದು ಬೆಳಗ್ಗೆ 11:30ಕ್ಕೆ ಯಶವಂತಪುರವನ್ನು ತಲುಪುತ್ತದೆ. ಬಳಿಕ ಹಿಂತಿರುಗುವ ದಿಕ್ಕಿನಲ್ಲಿ, ಪಾರ್ಸೆಲ್ ರೈಲು ಮಾರ್ಚ್ 3ರಂದು ರಾತ್ರಿ 12:10ಕ್ಕೆ ಯಶವಂತಪುರದಿಂದ ಹೊರಟು ಮಾರ್ಚ್ 5ರಂದು ರಾತ್ರಿ 12:10ಕ್ಕೆ ತುಘಲಕಾಬಾದ್ ತಲುಪುತ್ತದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications